ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ

Date:

ದೇಶದ ಕೆಲಸದ ಸಂಸ್ಕೃತಿಯನ್ನು ಮೇಲ್ದರ್ಜೆಗೇರಿಸಲು ಹಾಗೂ ಜಾಗತಿಕ ಮಟ್ಟದಲ್ಲಿನ ಪರಿಣಾಮಕಾರಿಯಾಗಿ ಸ್ಪರ್ಧಿಸಲು ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್‌ ಆರ್ ನಾರಾಯಣ ಮೂರ್ತಿ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವಾರಕ್ಕೆ 70 ಗಂಟೆ ದುಡಿಮೆಗೆ ಮೀಸಲಿಟ್ಟರೆ ಉತ್ಪಾದಕತೆಗಿಂತ ಕೆಲಸಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕೆಲಸದ ಮೇಲೆ ಅತಿಯಾದ ಗಮನವು ದೈಹಿಕ ಮತ್ತು ಮಾನಸಿಕ ಆರೋಗ್ಯ ಸೇರಿದಂತೆ ಒಟ್ಟಾರೆ ಯೋಗಕ್ಷೇಮದಲ್ಲಿ ಕ್ಷೀಣತೆಗೆ ಕಾರಣವಾಗಬಹುದು ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

70 ಗಂಟೆಗಳ ದೀರ್ಘ ಕಾಲ ಕೆಲಸ ಮಾಡುವುದರಿಂದ ವೈಯಕ್ತಿಕ ಮತ್ತು ಕೌಟುಂಬಿಕ ಜೀವನದ ಮೇಲೆ ಪರಿಣಾಮವನ್ನು ಬೀರುವುದರ ಬಗ್ಗೆ ಟೆಕ್ಕಿಗಳು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರಾಯಣ ಮೂರ್ತಿಯವರ ಈ ಹೇಳಿಕೆಯು ಮಾಲೀಕರು ಮತ್ತು ಉದ್ಯೋಗಿಗಳ ನಡುವೆ ಬೆಳೆಯುತ್ತಿರುವ ಸಂಪತ್ತಿನ ಅಸಮಾನತೆಯನ್ನು ಎತ್ತಿ ತೋರಿಸುತ್ತದೆ. ನಿರಂತರ ದುಡಿಮೆಯಿಂದ ಉತ್ಪತ್ತಿ ಹೆಚ್ಚಳಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಹಲವರು ಟೀಕಿಸಿದ್ದಾರೆ.

ಬಾಲಿವುಡ್‌ ನಟ ವೀರ್‌ ದಾಸ್‌ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ನೀವು ವಾರದಲ್ಲಿ 5 ದಿನ 70 ಗಂಟೆಗಳು ಕೆಲಸ ಮಾಡಬೇಕು ಎಂದರೆ ಬೆಳಗ್ಗೆ 9 ರಿಂದ ರಾತ್ರಿ 11 ಗಂಟೆಯವರೆಗೂ ಕೆಲಸ ಮಾಡಬೇಕು. ಈ ರೀತಿ ಮಾಡಿದರೆ ಬೆಳಗ್ಗೆ 7.30ಕ್ಕೆ ಹೊರಟು ರಾತ್ರಿ 12.30ಕ್ಕೆ ವಾಪಸ್‌ ಮನೆಗೆ ಬರಬೇಕಾಗುತ್ತದೆ. ಇದಕ್ಕಾಗಿ ನೀವು ನಿಮ್ಮ ಸುಖ ಸಂತೋಷ, ಖಾಸಗಿ ಬದುಕು ಎಲ್ಲವನ್ನು ತ್ಯಾಗ ಮಾಡಿ ಕಚೇರಿಯೇ ನಮ್ಮ ಜೀವನ ಎಂದುಕೊಂಡು ಇರಬೇಕಾಗುತ್ತದೆ ಎಂದಿದ್ದಾರೆ.

ಅದೇ ರೀತಿ ನಾರಾಯಣ ಮೂರ್ತಿ ಅವರನ್ನು ಕಿಚಾಯಿಸಿರುವ ವೀರ್‌ ದಾಸ್, “ಜೀವನ ಕಷ್ಟ. ನೀವು ಹುಡುಗಿಯನ್ನು ಭೇಟಿಯಾಗುತ್ತೀರಿ, ಪ್ರೀತಿಯಲ್ಲಿ ಬೀಳುತ್ತೀರಿ, ಮದುವೆಯಾಗುತ್ತೀರಿ. ನೀವು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಆಕೆಯ ತಂದೆ ಬಯಸುತ್ತಾರೆ. ನೀವು ಕಷ್ಟಪಟ್ಟು ಕೆಲಸ ಮಾಡಲು ಸಾಧ್ಯವಿಲ್ಲ, ನೀವು ಸಂತೋಷ ಬಯಸಲು ಇಂಗ್ಲೆಂಡ್‌ಗೆ ಓಡಿ ಹೋಗುತ್ತೀರಿ” ಎಂದಿದ್ದಾರೆ.

ನಾರಾಯಣ ಮೂರ್ತಿ ಅವರ ಹೇಳಿಕೆಯು ಮಹಿಳೆಯರನ್ನು ಕೆಲಸದ ಸ್ಥಳದಿಂದ ಹೊರಹಾಕುವ ಪ್ರಯತ್ನವಲ್ಲದೆ ಮತ್ತೇನಿಲ್ಲ. 70 ಗಂಟೆ ಕೆಲಸ ಮಾಡುವುದರಿಂದ ಮಹಿಳೆಯ ಮನೆಗೆಲಸ, ಆರೈಕೆ ಮತ್ತು ಮಕ್ಕಳ ಪಾಲನೆಯ ಮೇಲೆ ಪರಿಣಾಮ ಬೀರುತ್ತದೆ. ಪುರುಷರು ಆಕೆಯ ಕೆಲಸವನ್ನು ಹಂಚಿಕೊಳ್ಳುವುದಿಲ್ಲ. ಆದ ಕಾರಣ ಆಕೆ ಕೆಲಸದಿಂದ ಹೊರಗುಳಿಯುವುದನ್ನು ಬಿಟ್ಟು ಬೇರೆ ಆಯ್ಕೆ ಇರುವುದಿಲ್ಲ ಎಂದು ಹಲವು ಮಹಿಳೆಯರು ಅಭಿಪ್ರಾಯಪಟ್ಟಿದ್ದಾರೆ.

ಈ ಹೇಳಿಕೆಯು ಕಿರಿಯ ಉದ್ಯೋಗಿಗಳನ್ನು ಅಲ್ಲದೆ ಕಡಿಮೆ ವೇತನ ಪಡೆಯುತ್ತಿರುವವರನ್ನು ಶೋಷಿಸುತ್ತದೆ ಮತ್ತು ಅತಿಯಾಗಿ ಕೆಲಸ ಮಾಡಿಸುವ ಸಾಧ್ಯತೆಯಿರುತ್ತದೆ ಎಂದು ಹಲವರು ತಿಳಿಸಿದ್ದಾರೆ.

“ಕಾರ್ಮಿಕರಿಗೆ ಗೌರವಯುತ ಜೀವನವನ್ನು ಖಾತ್ರಿಪಡಿಸಲು ಭಾರತದ ಸಂವಿಧಾನ ಪಿತಾಮಹ ಡಾ. ಬಿ. ಆರ್‌ ಅಂಬೇಡ್ಕರ್ ಅವರು 1942 ರಲ್ಲಿ ನಿತ್ಯ 8 ಗಂಟೆಗಳ ಕೆಲಸದ ನಿಯಮವನ್ನು ಜಾರಿಗೆ ತಂದರು. ಇದು ಅಷ್ಟೇನೂ ಕಾರ್ಯಗತವಾಗಿಲ್ಲ. ಈಗ.. ನಾರಾಯಣ ಮೂರ್ತಿ ಅವರು ವಾರಕ್ಕೆ 70 ಗಂಟೆಗಳ ಕೆಲಸವನ್ನು ಜಾರಿಗೊಳಿಸಲು ಬಯಸುತ್ತಿದ್ದಾರೆ. ಶುದ್ಧ ಸಸ್ಯಾಹಾರ, ಜಾತಿ ವ್ಯವಸ್ಥೆ ಮತ್ತು ಮಹಿಳೆಯರು ಗುಲಾಮರಂತೆ ಬಳಸುವುದಲ್ಲದೆ ಮತ್ತೇನಿಲ್ಲ” ಎಂದು ಹಲವರು ಆಕ್ರೋಶ ಹೊರ ಹಾಕಿದ್ದಾರೆ.

ಯುವ ಜನರು ಕುಟುಂಬ, ತಮಗಾಗಿ ಸಮಯ ನೀಡಲಾಗದೆ ಕೆಲಸದ ಹೊರೆಯಿಂದಾಗಿ ಈಗಾಗಲೇ ಚಿಕ್ಕ ವಯಸ್ಸಿನಲ್ಲಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಿರುವಾಗ ದಿನಕ್ಕೆ 12 ಗಂಟೆಗಳ ಸರಾಸರಿಯಲ್ಲಿ ದುಡಿಯಬೇಕು ಎಂದು ಕರೆ ನೀಡುವುದು ದೇಶದ ಆರೋಗ್ಯ ವ್ಯವಸ್ಥೆಯೇ ಕುಸಿದುಬೀಳಲು ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಕಾರ್ಪೊರೇಟ್ ಕಂಪೆನಿಗಳು ದೇಶದ ಪ್ರಗತಿ ನೆಪವೊಡ್ಡಿ ತಮ್ಮ ಲಾಭಕ್ಕಾಗಿ ಬೇಳೆ ಬೇಯಿಸಿಕೊಳ್ಳುವ ಹುನ್ನಾರ ಇದು ಎಂದು ಮತ್ತು ಕೆಲವರು ಕಿಡಿಕಾರಿದ್ದಾರೆ.

“ಮದುವೆಯಾಗಬೇಡಿ, ಮಕ್ಕಳು ಮಾಡಿಕೊಳ್ಳಬೇಡಿ. ಕೆಲಸ ಜೀವನದ ಸಮತೋಲನದ ಬಗ್ಗೆ ಯೋಚಿಸಲೂ ಹೋಗಬೇಡಿ. ಕಂಪೆನಿಗಳಿಗಾಗಿ 12 ಗಂಟೆ ಕಾಲ ಕೆಲಸ ಮಾಡಿ. ಇದರಿಂದ ಅವರು ಲಕ್ಷಗಟ್ಟಲೆ ಲಾಭ ಗಳಿಸಬಹುದು ಹಾಗೂ ನಿಮಗೆ ಕಡಲೆಬೀಜದಷ್ಟು ನೀಡಬಹುದು (ಅಲ್ಪ ವೇತನ). ಅದ್ಭುತ ಸಲಹೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕತಾರ್: 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ

3ಒನ್4 ಕ್ಯಾಪಿಟಲ್‌ನ ಪಾಡ್‌ಕಾಸ್ಟ್ ‘ದಿ ರೆಕಾರ್ಡ್‌’ನ ಉದ್ಘಾಟನಾ ಸಂಚಿಕೆಯಲ್ಲಿ ಇನ್‌ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಜತೆ ಸಂಭಾಷಣೆ ನಡೆಸಿದ ನಾರಾಯಣ ಮೂರ್ತಿ, ಭಾರತದಲ್ಲಿ ಯುವಪೀಳಿಗೆ ಕೆಲಸದಲ್ಲಿ ಕಳೆಯುವ ಸಮಯ ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ಇದನ್ನು ಹೆಚ್ಚಿಸಲು ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಎರಡನೆಯ ಮಹಾಯುದ್ಧದ ನಂತರ, ಜಪಾನ್ ಮತ್ತು ಜರ್ಮನಿ ಇದನ್ನು ಮಾಡುವ ಮೂಲಕ ಅಭಿವೃದ್ಧಿಯ ಪರ್ವವನ್ನು ಮುಟ್ಟಿದವು. ಹೀಗಾಗಿ ಇದನ್ನು ನಾವು ಅನುಸರಿಸಬೇಕು ಎಂದಿದ್ದರು.

“ಭಾರತದ ಕೆಲಸದ ಉತ್ಪಾದಕತೆ ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ನಾವು ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡದ ಹೊರತು ಮತ್ತು ಅಧಿಕಾರಶಾಹಿಯ ವಿಳಂಬವನ್ನು ನಿಗ್ರಹಿಸದ ಹೊರತು, ಪ್ರಚಂಡ ಪ್ರಗತಿಯನ್ನು ಸಾಧಿಸಿದ ದೇಶಗಳೊಂದಿಗೆ ನಾವು ಸ್ಪರ್ಧಿಸಲು ಸಾಧ್ಯವಿಲ್ಲ” ಎಂದು ಈ ಸಂದರ್ಭದಲ್ಲಿ ಹೇಳಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...