ಕೊಹ್ಲಿ, ಅನುಷ್ಕಾ ವರ್ತನೆಗೆ ನೆಟ್ಟಿಗರ ಆಕ್ರೋಶ

Date:

ವಿಮಾನ ನಿಲ್ದಾಣದಲ್ಲಿ ಅಂಗವೈಕಲ್ಯಕ್ಕೆ ತುತ್ತಾಗಿರುವ ವಿಶೇಷಚೇತನ ಹುಡುಗನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಕಾರಣಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ನಡೆಯನ್ನು ಖಂಡಿಸಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ಅವರು ಮುಂಬೈನಲ್ಲಿರುವ ಶರ್ಮಾ ಪ್ರೇಮಾನಂದ್ ಜಿ ಮಹಾರಾಜ್ ಅವರ ಶ್ರೀ ಹಿತ್ ರಾಧಾ ಕೇಲಿ ಕುಂಜ್‌ಗೆ ಭೇಟಿ ನೀಡಿದ್ದರು. ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರ ಬರುವಾಗ, ವಿಶೇಷಚೇತನ ಅಭಿಮಾನಿಯೊಬ್ಬ ಕೊಹ್ಲಿ ಅವರ ಬಳಿ ಸೆಲ್ಫೆ ತೆಗೆದುಕೊಳ್ಳಲು ಹತ್ತಿರ ಹೋಗಿದ್ದಾರೆ. ಆದರೆ, ಆ ಹುಡುಗನಿಗೆ ಪ್ರತಿಕ್ರಿಯಿಸಿದ ಕೊಹ್ಲಿ ತಮ್ಮ ತಲೆಯನ್ನು ನೇರ ಇಟ್ಟುಕೊಂಡು ಕಾರಿನೆಡೆಗೆ ಸಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋವನ್ನು ಗಮನಿಸಿದ ನೆಟ್ಟಿಗರು ಮತ್ತು ಅಭಿಮಾನಿಗಳು ಕೊಹ್ಲಿ ನಡೆಯಿಂದ ನಿರಾಶೆಗೊಂಡಿದ್ದಾರೆ. ಕೊಹ್ಲಿ ಮತ್ತು ಅನುಷ್ಕಾ ನಡೆಯನ್ನು ಖಂಡಿಸಿರುವ ನೆಟ್ಟಿಗರು ದಂಪತಿಗಳು ಸಂವೇದನಾಶೀಲತೆ ಇಲ್ಲದವರು, ವಿಶೇಷಚೇತನ ಯುವಕನಿಗೆ ಕನಿಷ್ಠ ಕನಿಕರವನ್ನೂ ತೋರದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಶುಭ್‌ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಫಾರ್ಮ್ ಕಳೆದುಕೊಂಡರೇ?

ವಿಡಿಯೋಗೆ ಹಲವರು ಕಮೆಂಟ್‌ ಮಾಡಿದ್ದು, “ಆಧ್ಯಾತ್ಮಿಕ ಪ್ರವಾಸ ಮಾಡಿ. ಆದರೆ, ಅಂಗವಿಕಲ ವ್ಯಕ್ತಿಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳಿ”, “ಇದು ಅಸಹ್ಯಕರ ನಡವಳಿಕೆ… ಆಧ್ಯಾತ್ಮಿಕಕ್ಕಿಂತ ವಿನಮ್ರತೆ ಬಹಳ ಮುಖ್ಯ”, “ಇಂತಹ ವರ್ತನೆ ತೋರಿಸಿ, ಪ್ರೇಮಾನಂದ ಜಿ ಅವರನ್ನು ಭೇಟಿ ಮಾಡುವುದರಲ್ಲಿ ಅರ್ಥವೇನು? ಆ ಸ್ಥಳದಿಂದ ಹೊರಬಂದ ನಂತರವೂ ಒಬ್ಬರು ಇಷ್ಟೊಂದು ಅಹಂಕಾರ ಮತ್ತು ಮನೋಭಾವವನ್ನು ಮುಂದುವರಿಸುವುದೇ? ಕೇವಲ ಫೋಟೋ ಕೇಳಿದ ಅಂಗವಿಕಲ ಮಗುವನ್ನು ನಿರ್ಲಕ್ಷಿಸುವುದು ಹೃದಯವಿದ್ರಾವಕ” ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...