ಏಪ್ರಿಲ್ 1 ರಿಂದ ಹೊಸ ATM ನಿಯಮಗಳು ಜಾರಿ; ಬ್ಯಾಂಕ್ ಗ್ರಾಹಕರು ತಿಳಿಯಲೇಬೇಕಾದ ಅಂಶಗಳಿವು

Date:

ಏಪ್ರಿಲ್ 1ರಿಂದ ಆರಂಭವಾಗುವ ಹೊಸ ಹಣಕಾಸು ವರ್ಷದೊಂದಿಗೆ ಭಾರತದ ಬ್ಯಾಂಕುಗಳು ಎಟಿಎಂ ಬಳಕೆಯಲ್ಲಿ ಸರಣಿ ಬದಲಾವಣೆಗಳನ್ನು ಜಾರಿಗೆ ತರಲು ಸಜ್ಜಾಗಿವೆ. ಪ್ರಮುಖ ಬ್ಯಾಂಕುಗಳು ನಗದು ಹಿಂತೆಗೆತದ ಮಿತಿ, ವಹಿವಾಟು ಶುಲ್ಕಗಳು ಹಾಗೂ ಗ್ರಾಹಕರು ನಗದು ಪಡೆಯುವ ವಿಧಾನದ ಮೇಲೆ ನಾನಾ ನಿಯಮಗಳನ್ನು ಪರಿಷ್ಕರಿಸಿವೆ.

ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆದ ಎಚ್‌ಡಿಎಫ್‌ಸಿ, ಎಟಿಎಂಗಳ ಮೂಲಕ ಮಾಡುವ UPI ಆಧಾರಿತ ನಗದು ಹಿಂತೆಗೆತಗಳನ್ನು ಇನ್ನು ಮುಂದೆ ಮಾಸಿಕ ಉಚಿತ ವಹಿವಾಟಿನ ಮಿತಿಗೆ ಸೇರಿಸುವುದಾಗಿ, ಅಂದರೆ, ಎಟಿಎಂ ಕಾರ್ಡ್‌ ಆಧಾರಿತ ನಗದು ಹಿಂತೆಗೆತದೊಂದಿಗೆ ಸೇರಿಸುವುದಾಗಿ ತಿಳಿಸಿದೆ. ಈ ಹಿಂದೆ ಇದನ್ನು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಇವುಗಳನ್ನು ಒಟ್ಟು ಉಚಿತ ವಹಿವಾಟುಗಳ ಸಂಖ್ಯೆಯಲ್ಲೇ ಲೆಕ್ಕಹಾಕಲಾಗುತ್ತದೆ.

ನಿಗದಿಪಡಿಸಿದ ಮಾಸಿಕ ಉಚಿತ ಮಿತಿಯನ್ನು ಮೀರಿದ ಗ್ರಾಹಕರಿಗೆ ಪ್ರತಿ ವಹಿವಾಟಿಗೆ 23 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಪ್ರಸ್ತುತ, ಹೆಚ್ಚಿನ ಗ್ರಾಹಕರು ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂಗಳಲ್ಲೇ ತಿಂಗಳಿಗೆ ಐದು ಉಚಿತ ವಹಿವಾಟುಗಳನ್ನು ನಡೆಸಬಹುದು. ಜೊತೆಗೆ, ಎಚ್‌ಡಿಎಫ್‌ಸಿ ಗ್ರಾಹಕರು ಇತರ ಬ್ಯಾಂಕ್‌ಗಳ ಎಟಿಎಂಗಳಲ್ಲಿ ವಹಿವಾಟು ನಡೆಸುವಾಗ ಮೆಟ್ರೋ ನಗರಗಳಲ್ಲಿ ಮೂರು ಮತ್ತು ಮೆಟ್ರೋ ಅಲ್ಲದ ಪ್ರದೇಶಗಳಲ್ಲಿ ಐದು ಉಚಿತ ವಹಿವಾಟುಗಳನ್ನು ನಡೆಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಇದೇ ವೇಳೆ, ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಆಯ್ದ ಡೆಬಿಟ್ ಕಾರ್ಡ್‌ಗಳ ದೈನಂದಿನ ನಗದು ಹಿಂತೆಗೆತದ ಮಿತಿಯನ್ನು ಪರಿಷ್ಕರಿಸಿದೆ. ಹೊಸ ನಿಯಮಗಳ ಪ್ರಕಾರ, ಗ್ರಾಹಕರು ತಮ್ಮ ಕಾರ್ಡ್‌ಗಳ ಪ್ರಕಾರಕ್ಕೆ ಅನುಗುಣವಾಗಿ ದಿನಕ್ಕೆ 50,000 ರೂ. ನಿಂದ 75,000 ರೂ. ವರೆಗೆ ಹಣ ಹಿಂಪಡೆಯಬಹುದು.

ಈ ಹಿಂದೆ, 1,00,000 ರೂ. ವರೆಗೆ ಹಣ ಹಿಂತೆಗೆಯಲು ಅವಕಾಶ ನೀಡುತ್ತಿದ್ದ ಕೆಲವು ಕಾರ್ಡ್‌ಗಳ ಮಿತಿಯನ್ನು ಈಗ 75,000 ರೂ.ಗಳಿಗೆ ಕಡಿತಗೊಳಿಸಲಾಗಿದೆ. ಬಳಕೆಯನ್ನು ಪ್ರಮಾಣೀಕರಿಸಲು ಮತ್ತು ಅಪಾಯದ ಸಂಭವವನ್ನು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ.

ಇದರ ಜೊತೆಗೆ, ಜಿಯೋ ಪೇಮೆಂಟ್ಸ್ ಬ್ಯಾಂಕ್ – ಹೊಸ ಕ್ಯೂಆರ್ ಕೋಡ್ ಆಧಾರಿತ ನಗದು ಹಿಂತೆಗೆತ ಸೌಲಭ್ಯವನ್ನು ಪರಿಚಯಿಸಿದೆ. ಇದು ಗ್ರಾಹಕರು ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಮತ್ತು ನಿಗದಿಪಡಿಸಿದ ಬ್ಯಾಂಕಿಂಗ್ ಕರೆಸ್ಪಾಂಡೆಂಟ್‌ಗಳ ಬಳಿ ಯುಪಿಐ ಅಪ್ಲಿಕೇಶನ್ ಮೂಲಕ ಹಣ ಪಡೆಯಲು ಅವಕಾಶ ನೀಡುತ್ತದೆ.

ಈ ಬದಲಾವಣೆಗಳು ನಗದು ಬಳಕೆಯ ಮೇಲಿನ ನಿಯಂತ್ರಣವನ್ನು ಬಿಗಿಗೊಳಿಸುವುದರ ಜೊತೆಗೆ ಡಿಜಿಟಲ್ ಬ್ಯಾಂಕಿಂಗ್‌ನತ್ತ ಹೆಚ್ಚಿನ ಒಲವು ತೋರುವಂತೆ ಮಾಡುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...