ಐಪಿಸಿ, ಸಿಆರ್‌ಪಿಸಿ ಬದಲಿಗೆ ಹೊಸ ಮಸೂದೆಗಳು ಶೀಘ್ರದಲ್ಲೇ ಅಂಗೀಕಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ

Date:

ಭಾರತೀಯ ದಂಡ ಸಂಹಿತೆ (ಐಪಿಸಿ), ಸಿಆರ್‌ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಮೂರು ಹೊಸ ಮಸೂದೆಗಳನ್ನು ಸಂಸತ್ತಿನಲ್ಲಿ ಶೀಘ್ರದಲ್ಲೇ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ 75 ನೇ ಬ್ಯಾಚ್ ಇಂಡಿಯನ್ ಪೊಲೀಸ್ ಸರ್ವಿಸ್ (ಐಪಿಎಸ್) ಪ್ರೊಬೇಷನರಿ ಅಧಿಕಾರಿಗಳ ನಿರ್ಗಮನ ಪಥ ಸಂಚಲನದಲ್ಲಿ ಮಾತನಾಡಿದರು.

ಬ್ರಿಟಿಷರ ಕಾಲದಲ್ಲಿ ಜಾರಿಗೊಳಿಸಲಾಗಿದ್ದ ಅಪರಾಧ ಕಾನೂನುಗಳನ್ನು ಭಾರತ ತ್ಯಜಿಸಿ ಹೊಸ ಭರವಸೆ ಹಾಗೂ ಆತ್ಮವಿಶ್ವಾಸದೊಂದಿಗೆ ನೂತನ ಯುಗವನ್ನು ಪ್ರವೇಶಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪರಿಶೀಲಿಸುತ್ತಿದೆ. ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಅಂಗೀಕರಿಸಲಾಗುವುದು. ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕತಾರ್: 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ

“ತಂತ್ರಜ್ಞಾನವು ಭವಿಷ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಸೈಬರ್ ಬೆದರಿಕೆಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ವಿಶ್ವದ ಅತ್ಯಂತ ತಾಂತ್ರಿಕ ಬುದ್ಧಿವಂತ ವ್ಯವಸ್ಥೆಯನ್ನು ಹೊಂದುವ ಗುರಿಯೊಂದಿಗೆ ನಾವು ಪೊಲೀಸ್ ತಂತ್ರಜ್ಞಾನ ಮಿಷನ್ ಅನ್ನು ಕಾರ್ಯಗತಗೊಳಿಸುತ್ತಿದ್ದೇವೆ. ಅಧಿಕಾರಿಗಳ ತಾಂತ್ರಿಕ ಹಿನ್ನೆಲೆಯು ಈ ಉಪಕ್ರಮಕ್ಕೆ ಕೊಡುಗೆ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಅಮಿತ್ ಶಾ ಹೇಳಿದರು.

ಈಗಾಗಲೇ ಲೋಕಸಭೆಯಲ್ಲಿ ಭಾರತೀಯ ದಂಡ ಸಂಹಿತೆ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಅಪರಾಧ ಪ್ರಕ್ರಿಯಾ ಸಂಹಿತೆ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಮೂರು ಕಾಯ್ದೆಗಳಲ್ಲಿ 300ಕ್ಕೂ ಹೆಚ್ಚು ಬದಲಾವಣೆಗಳನ್ನು ನೂತನ ಮಸೂದೆಗಳಲ್ಲಿ ತರಲಾಗಿದೆ.

ಹೆಚ್ಚಿನ ಪ್ರೊಬೇಷನರ್‌ಗಳು ಎಂಜಿನಿಯರಿಂಗ್ ಮತ್ತು ತಾಂತ್ರಿಕ ಹಿನ್ನೆಲೆಯನ್ನು ಹೊಂದಿರುವುದಾಗಿ ಅಮಿತ್ ಶಾ ಹೇಳಿದ್ದಾರೆ.

34 ಮಹಿಳಾ ಅಧಿಕಾರಿಗಳು ಸೇರಿದಂತೆ 75 ನೇ ಬ್ಯಾಚ್ ಇಂಡಿಯನ್ ಪೊಲೀಸ್ ಸರ್ವಿಸ್‌ನ (ಐಪಿಎಸ್) 175 ಪ್ರೊಬೇಷನರಿ ಅಧಿಕಾರಿಗಳಲ್ಲಿ 155 ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳಿದ್ದರೆ, ನೇಪಾಳ, ಭೂತಾನ್, ಮಾಲ್ಡೀವ್ಸ್, ಮಾರಿಷಸ್‌ನ ಪೊಲೀಸ್‌ ಸೇವೆಯಿಂದ 20 ವಿದೇಶಿ ಪ್ರೊಬೇಷನರಿ ಅಧಿಕಾರಿಗಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...