ಅಮೆರಿಕ ಜೊತೆ ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ: ಕೇಂದ್ರ

Date:

ಮಿಲಿಟರಿ ಕಾರ್ಯಾಚರಣೆಗಳ ಕುರಿತು ಅಮೆರಿಕದ ಅಧಿಕಾರಿಗಳೊಂದಿಗೆ ಮಾತ್ರ ಮಾತನಾಡಲಾಗಿತ್ತು. ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೇ 7 ರಂದು ಆಪರೇಷನ್ ಸಿಂಧೂರ್ ಪ್ರಾರಂಭವಾದಾಗಿನಿಂದ ಮೇ 10ರ ಕದನ ವಿರಾಮದವರೆಗೆ, ಸೇನಾ ಕಾರ್ಯಾಚರಣೆ ಕುರಿತು ಭಾರತ ಮತ್ತು ಅಮೆರಿಕದ ನಾಯಕರ ನಡುವೆ ಸಂಭಾಷಣೆಗಳು ನಡೆದವು. ಈ ಚರ್ಚೆಗಳಲ್ಲಿ ಯಾವುದೇ ವ್ಯಾಪಾರದ ವಿಷಯವು ಬರಲಿಲ್ಲ” ಎಂದು ಅವರು ಹೇಳಿದರು.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ಅವರು, ಕೈಗಾರಿಕೆಯನ್ನು ಬೆಳೆಸಿದಂತೆ ಭಾರೀ ಪ್ರಮಾಣದಲ್ಲಿ ಭಯೋತ್ಪಾದನೆಯನ್ನು ಪೋಷಿಸಿರುವ ಪಾಕಿಸ್ತಾನವು, ಅದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಮೂರ್ಖತನ. ಈಗ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಬಿಟ್ಟುಕೊಡುವುದ ಮಾತ್ರ ನಮ್ಮ ಮುಂದಿರುವ ಏಕೈಕ ವಿಷಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸಬರಿಗೆ ಅವಕಾಶದ ಬಾಗಿಲು ತೆರೆದ ವಿರಾಟ್ ಕೊಹ್ಲಿ ವಿದಾಯ

ಈ ಹಿಂದೆ ಹೇಳಿದಂತೆ, ಅವರ ಡಿಜಿಎಂಒ ಮತ್ತು ಡಿಜಿಎಂಒ ನಡುವೆ ಮಾತುಕತೆ ನಡೆದಿದೆ. ಕದನ ವಿರಾಮ ಮಾತುಕತೆಗಳನ್ನು ಯಾರು ಪ್ರಾರಂಭಿಸಿದರು ಎಂಬುದನ್ನು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ ಎಂದು ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದರು.

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿಯಲಾಗುವುದು ಎಂದು ಇದೇ ಸಂದರ್ಭದಲ್ಲಿ ರಣಧೀರ್ ಜೈಸ್ವಾಲ್ ತಿಳಿಸಿದರು.

ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತೀಯ ವಾಯುಪಡೆ ಪಾಕಿಸ್ತಾನಿ ವಾಯುನೆಲೆಗಳನ್ನು ಅತ್ಯಂತ ಪರಿಣಾಮಕಾರಿ ಕ್ರಮದಿಂದ ನಿಷ್ಕ್ರಿಯಗೊಳಿಸಿವೆ. ಭಾರತೀಯ ಸಶಸ್ತ್ರ ಪಡೆಗಳ ಬಲದ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕದನ ವಿರಾಮಕ್ಕೆ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...