ಶೀಘ್ರದಲ್ಲೇ ಪ್ರಧಾನಿ ಬದಲು, ಡಿ.19ಕ್ಕೆ ದೇಶದಲ್ಲಿ ರಾಜಕೀಯ ಬಿರುಗಾಳಿ: ಕಾಂಗ್ರೆಸ್‌ ನಾಯಕ ಪೃಥ್ವಿರಾಜ್‌ ಚೌಹಾಣ್

Date:

ಶೀಘ್ರವೇ ದೇಶದಲ್ಲಿ ಪ್ರಧಾನಿ ಬದಲಾಗಬಹುದು, ನೂತನ ಪ್ರಧಾನಿ ಮಹಾರಾಷ್ಟ್ರದವರು ಆಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪೃಥ್ವಿರಾಜ್‌ ಚೌಹಾಣ್‌ ಹೇಳಿದ್ದಾರೆ.

ಅವರ ಈ ಹೇಳಿಕೆಯು ಜಾಗತಿಕ ಮಟ್ಟದಲ್ಲಿನ ರಾಜಕೀಯ ಬದಲಾವಣೆಗೆ ಸಂಬಂಧಿಸಿದ್ದು, ಅದರಲ್ಲೂ ಡಿ.19ರಂದು ಬಿಡುಗಡೆಯಾಗಲಿರುವ ಅಮೆರಿಕದ ಲೈಂಗಿಕ ಹಗರಣಗಳ ಎಪ್‌ಸ್ಟೀನ್‌ ದಾಖಲೆಗಳಿಗೆ ಸಂಬಂಧಿಸಿದೆ ಎಂದು ಚೌಹಾಣ್‌ ಹೇಳಿದ್ದಾರೆ.

ಅಪರಾಧಿಯೊಬ್ಬನಿಗೆ ಸಂಬಂಧಿಸಿದ ಈ ದಾಖಲೆಯಲ್ಲಿ ವಿಶ್ವದ ಹಲವು ನಾಯಕರ ಹೆಸರಿದೆ ಎನ್ನಲಾಗಿದೆ. ಇತ್ತೀಚೆಗೆ ಚೌಹಾಣ್‌ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್‌ನಲ್ಲಿ ಮರಾಠಿಗರು ಪ್ರಧಾನಿಯಾಗುವ ಸಾಧ್ಯತೆ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಪ್‌ಸ್ಟೀನ್‌ ಅಮೆರಿಕದಲ್ಲಿ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಹೊತ್ತ ಶ್ರೀಮಂತ ವ್ಯಕ್ತಿ. 2019ರಲ್ಲಿ ಜೈಲಿನಲ್ಲಿ ಸಾವನ್ನಪ್ಪಿದ್ದ ಅವರ ಸಂಬಂಧಿತ ದಾಖಲೆಗಳು ಈಗ ಬಿಡುಗಡೆಯಾಗುತ್ತಿವೆ. ಡಿಸೆಂಬರ್ 19ಕ್ಕೆ ಈ ಫೈಲ್ಸ್ ಸಾರ್ವಜನಿಕಗೊಳ್ಳಲಿವೆ. ಇದರಲ್ಲಿ ವಿಶ್ವದ ಪ್ರಮುಖ ನಾಯಕರು, ರಾಜಕಾರಣಿಗಳ ಹೆಸರುಗಳು ಬರಬಹುದು ಎಂಬ ಚರ್ಚೆಯಿದೆ. ಭಾರತದ ಕೆಲವು ದೊಡ್ಡ ರಾಜಕಾರಣಿಗಳ ಹೆಸರು ಬಂದರೆ, ದೇಶದಲ್ಲಿ ದೊಡ್ಡ ರಾಜಕೀಯ ತೊಂದರೆ ಉಂಟಾಗಬಹುದು. ಅದರಿಂದ ಶೀಘ್ರದಲ್ಲೇ ಭಾರತಕ್ಕೆ ಹೊಸ ಪ್ರಧಾನಮಂತ್ರಿ ಬರಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ಬಿಜೆಪಿ ವಲಯದಿಂದ ಈ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಇದು ಕಾಂಗ್ರೆಸ್‌ನ ರಾಜಕೀಯ ಆಟವಷ್ಟೇ ಎಂದು ಅವರು ಆರೋಪಿಸಿದ್ದಾರೆ. ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಭಾರತೀಯ ನಾಯಕರ ಹೆಸರುಗಳು ಬಂದರೆ ಮಾತ್ರ ರಾಜಕೀಯ ಬಿರುಗಾಳಿ ಸಾಧ್ಯ. ಆದರೆ ಇದುವರೆಗೆ ಬಿಡುಗಡೆಯಾದ ದಾಖಲೆಗಳಲ್ಲಿ ಗಂಭೀರ ಆರೋಪಗಳಿಲ್ಲ.

ಡಿಸೆಂಬರ್ 19ರ ಬಿಡುಗಡೆಯ ನಂತರವೇ ಸತ್ಯಾಂಶ ತಿಳಿಯಲಿದೆ. ಇದು ಭಾರತೀಯ ರಾಜಕಾರಣಕ್ಕೆ ದೊಡ್ಡ ತಿರುವು ನೀಡಬಹುದೇ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...