ಶ್ರಮ ಲೂಟಿಗೆ ಹೊಸ ನೀತಿ; ಏನಿದು ಕೆಲಸದ ಸಮಯದಲ್ಲಿ 9-9-6 ನಿಯಮ?

Date:

ದೀರ್ಘ ಕೆಲಸದ ಸಮಯವನ್ನು ಉತ್ತೇಜಿಸಲು ಐಟಿ ಮತ್ತು ತಂತ್ರಜ್ಞಾನ ಕಂಪನಿಗಳ ಸಿಇಒಗಳು ಹೊಸ ನೀತಿಗೆ ಶಿಫಾರಸು ಮಾಡುತ್ತಿದ್ದಾರೆ. ‘ಗ್ರೆಪ್ಟೈಲ್‌’ ಸಂಸ್ಥೆಯ ಭಾರತೀಯ ಮೂಲದ ಸಹ-ಸಂಸ್ಥಾಪಕಿ ದಕ್ಷ ಗುಪ್ತಾ, ಕ್ಯಾಲಿಫೋರ್ನಿಯಾ ಮೂಲದ ಮಹಿಳಾ ಬಿಲಿಯನೇರ್, ಉದ್ಯಮಿ ಲೂಸಿ ಗುವೊ ಸೇರಿದಂತೆ ಹಲವಾರು ಟೆಕ್ ಉದ್ಯಮಿಗಳು ಕೆಲಸದ ಅವಧಿಯ ವಿಸ್ತರಣೆ ಆಗಬೇಕೆಂದು ಹೇಳುತ್ತಿದ್ದಾರೆ. ಅದಕ್ಕಾಗಿ, ‘9-9-6 ನಿಯಮ’ವನ್ನು ಪ್ರಸ್ಥಾಪಿಸಿದ್ದಾರೆ. ಇದು ಹೊಸ ರೀತಿಯ ಕೆಲಸದ ವೇಳಪಟ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

9-9-6 ನಿಯಮವು ಉದ್ಯೋಗಿಗಳು ವಾರದಲ್ಲಿ 6 ದಿನಗಳ ಕಾಲ ಬೆಳಿಗ್ಗೆ 9ರಿಂದ ರಾತ್ರಿ 9 ರವರೆಗೆ ಕೆಲಸ ಮಾಡುವ ಕೆಲಸದ ವೇಳಾಪಟ್ಟಿಯನ್ನು ಸೂಚಿಸುತ್ತದೆ. ಅಂದರೆ, ಉದ್ಯೋಗಿಗಳು ದಿನನಿತ್ಯ ಬರೋಬ್ಬರಿ 12 ಗಂಟೆ, ವಾರಕ್ಕೆ 96 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ಕಾನೂನಿನ ಪ್ರಕಾರ, ನೌಕರರು ಮತ್ತು ಕಾರ್ಮಿಕರು ದುಡಿಯುವ ಅವಧಿಯು ಊಟದ ಬಿಡುವು ಸೇರಿದಂತೆ ದಿನಕ್ಕೆ 9 ಗಂಟೆ, ವಾರಕ್ಕೆ 54 ಗಂಟೆಗಳ ಇರಬೇಕು. ಹೆಚ್ಚುವರಿ ಸಮಯದ ದುಡಿಮೆಗೆ ಹೆಚ್ಚುವರಿ ಪಾವತಿ (ಒಟಿ) ನೀಡಬೇಕು. ಅದೂ, 2 ಗಂಟೆಗಳಿಗಿಂತ ಹೆಚ್ಚು ಇರುವಂತಿಲ್ಲ.

ಆದರೆ, ಇತ್ತೀಚಿನ ದಿನಗಳಲ್ಲಿ ವಾರಕ್ಕೆ 72 ಗಂಟೆ, 96 ಗಂಟೆಗಳ ಕೆಲಸದ ಅವಧಿ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಸೇರಿದಂತೆ ಹಲವರು ಉದ್ಯೋಗಿಗಳ ಶ್ರಮ ಲೂಟಿ ಮಾಡುವ ಕೆಲಸದ ಅವಧಿ ವಿಸ್ತರಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇದೀಗ, ‘9-9-6 ನಿಯಮ’ದ ಹೊಸ ಪ್ರಸ್ತಾಪವೂ ಸುದ್ದಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷ ಗುಪ್ತಾ ಮತ್ತು ಲೂಸಿ ಗುವೊ ಅವರು ಈ ‘9-9-6 ನಿಯಮ’ವು ತಂತ್ರಜ್ಞಾನ ವಲಯಗಳಲ್ಲಿ, ಅದರಲ್ಲೂ ವಿಶೇಷವಾಗಿ ಸ್ಟಾರ್ಟ್‌ಅಪ್‌ಗಳಲ್ಲಿಅಳವಡಿಸಬೇಕು. ಈ ವಿಧಾನವು ತೀವ್ರ ಉತ್ಪಾದಕತೆಗೆ ಸಹಾಯವಾಗುತ್ತದೆ ಎಂದು ವಾದಿಸಿದ್ದಾರೆ.

ನಿಮಯವನ್ನು ಸಮರ್ಥಿಸಿಕೊಂಡಿರುವ ಲೂಸಿ ಗುವೊ, “ಬೆಳಿಗ್ಗೆ 9ರಿಂದ ರಾತ್ರಿ 9 ರವರೆಗೆ ಕೆಲಸದಿಂದ ನನಗೆ ಕೆಲಸ ಮತ್ತು ಜೀವನವನ್ನು ಸಮತೋಲನವಾಗಿ ನಿಭಾಯಿಸಲು ಸಾಧ್ಯವಾಗಿದೆ. ರಾತ್ರಿ 9 ಗಂಟೆಗೆ, ನೀವು ನಿಮ್ಮ ಸ್ನೇಹಿತರೊಂದಿಗೆ ಊಟಕ್ಕೆ ಹೋಗಬಹುದು. ನೀವು 9ರಿಂದ 9ರವರೆಗೆ ಮಲಗಬೇಕಾಗಿಲ್ಲ. 90 ಗಂಟೆಗಳ ಕೆಲಸದ ವಾರವು ‘ಮುಖ್ಯ’. ಸ್ಪಷ್ಟವಾಗಿ ಹೇಳಬೇಕೆಂದರೆ ನನ್ನ ಸಲಹೆಯು ಉದ್ಯೋಗಿಗಳಿಗೆ ಅಲ್ಲ, ಸಂಸ್ಥಾಪಕರಿಗೆ ಮಾತ್ರ ಸೀಮಿತವಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಈ ನಿಮಯದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಈ ಮಾದರಿಯನ್ನು ಕಳಪೆ ಕೆಲಸ ಮತ್ತು ಜೀವನ ಅಸಮತೋಲನಕ್ಕೆ ಕಾರಣವಾಗುತ್ತದೆ ಎಂದು ಹಲವರು ವಿರೋಧಿಸಿದ್ದಾರೆ.

ಹಲವಾರು ಉದ್ಯಮಿಗಳೂ ಕೂಡ ಕೆಲಸದ ಅವಧಿ ವಿಸ್ತರಣೆಯನ್ನು ಖಂಡಿಸಿದ್ದಾರೆ. ಉದ್ಯಮಿ, ಎಂಕ್ಯೂರ್ ಫಾರ್ಮಾಸ್ಯುಟಿಕಲ್ಸ್ ಸಿಇಒ ನಮಿತಾ ಥಾಪರ್, ”ನಾವು ಮಾಲೀಕರು. ಹೆಚ್ಚು ಬಂಡವಾಳ ಹಾಕಿರುತ್ತೇವೆ. ಲಾಭಗಳಿಕೆ ಆದ್ಯತೆಯಾಗಿರುತ್ತದೆ. ಅದಕ್ಕಾಗಿ ನಾವು ಟನ್‌ಗಟ್ಟಲೆ ಕೆಲಸ ಮಾಡಬಹುದು. ದಿನದ 24 ಗಂಟೆಯೂ ಕೆಲಸ ಮಾಡಬಹುದು. ಆದರೆ, ಉದ್ಯೋಗಿಗಳ ಕತೆ ಏನು? ಉದ್ಯೋಗಿಗಳು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ನಿರೀಕ್ಷಿಸುವುದು ಅವರ ಮೇಲೆ ಹೆಚ್ಚು ಒತ್ತಡ ಹೇರಿದಂತೆ ಆಗುತ್ತದೆ. ಉದ್ಯೋಗಿಗಳ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತದೆ. ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ. ಅದು ತಪ್ಪು. ಉದ್ಯೋಗಿಗಳಿಗೆ ಸಮಂಜಸವಾದ ಕೆಲಸದ ಸಮಯದ ಮಿತಿ ಇರಬೇಕು” ಎಂದು ಹೇಳಿದ್ದರು.

ಅಂತೆಯೇ, ಕ್ಯೂರ್‌ಫಿಟ್ ಸಂಸ್ಥಾಪಕ ಮುಖೇಶ್ ಬನ್ಸಾಲ್ ಅವರು, “ಉದ್ಯೋಗಿಗಳು ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕೆಂದು ನಿರೀಕ್ಷಿಸುವುದು ಮೂರ್ಖತನ. 40 ಗಂಟೆಗಳ ಸಂಬಳದಲ್ಲಿ 70-90 ಗಂಟೆಗಳ ಕೆಲಸ ಕೇಳಲು ಸಾಧ್ಯವಿಲ್ಲ. ಅದು ಸರಿಯಲ್ಲ” ಎಂದಿದ್ದರು.

ವಾರವೊಂದರಲ್ಲಿ 70 ಗಂಟೆಗಳ ಕಾಲ ದುಡಿಯವುದು ಉದ್ಯೋಗಿಗಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮಾನಸಿಕ ಒತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಬೊಜ್ಜು, ಅಧಿಕ ರಕ್ತದೊತ್ತಡದಂತಹ ಆರೋಗ್ಯದ ಸಮಸ್ಯೆಗಳು ತಲೆದೋರಬಹುದು ಎಂದು ವೈದ್ಯರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...