ಆನಂದ್ ತೇಲ್ತುಂಬ್ಡೆ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿದ್ದ ಅರ್ಜಿಗೆ ಎನ್‌ಐಎ ವಿರೋಧ

Date:

ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ಕೋರಿ ದಲಿತ ಹಕ್ಕುಗಳ ಕಾರ್ಯಕರ್ತ ಡಾ. ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧ ವ್ಯಕ್ತಪಡಿಸಿದೆ.

ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಡಾ. ತೇಲ್ತುಂಬ್ಡೆ ಅವರು ಭೀಮಾ ಕೋರೆಗಾಂವ್ ಪ್ರಕರಣದ ವಿಚಾರಣೆಯಿಂದ ತಪ್ಪಿಸಿಕೊಂಡು ವಿದೇಶಗಳಿಗೆ ಪರಾರಿಯಾಗಿ ಆಶ್ರಯ ಪಡೆಯಬಹುದು ಎಂದು ತಿಳಿಸಿದೆ.

2018 ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಡಾ. ತೇಲ್ತುಂಬ್ಡೆ ಅವರು 2025 ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೈಕ್ಷಣಿಕ ಕಾರ್ಯಗಳಿಗಾಗಿ ವಿದೇಶ ಪ್ರವಾಸ ಮಾಡಲು ಅನುಮತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಮ್‌ಸ್ಟರ್‌ಡ್ಯಾಮ್ ವಿವಿ, ಲೈಡೆನ್ ವಿವಿ ಮತ್ತು ನಾಟಿಂಗ್‌ಹ್ಯಾಮ್ ಟ್ರೆಂಟ್ ವಿಶ್ವವಿದ್ಯಾಲಯ ಸೇರಿದಂತೆ ಹಲವು ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಅವರನ್ನು ಉಪನ್ಯಾಸಗಳನ್ನು ನೀಡಲು ಮತ್ತು ಶೈಕ್ಷಣಿಕ ವಿಚಾರ ಸಂಕಿರಣಗಳನ್ನು ನಡೆಸಲು ಆಹ್ವಾನಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಸಿ ಆರಿಸಿದವರನ್ನೇ ಮೂರ್ಖರನ್ನಾಗಿಸುತ್ತಿರುವ ಸರ್ಕಾರಗಳು

ತೇಲ್ತುಂಬ್ಡೆ ಅವರು ಡಾ. ಬಿ ಆರ್ ಅಂಬೇಡ್ಕರ್, ದಲಿತರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಈ ಅಂತಾರಾಷ್ಟ್ರೀಯ ಶೈಕ್ಷಣಿಕ ಭೇಟಿಗಳಿಗೆ ಅನುಕೂಲವಾಗುವಂತೆ ತಮ್ಮ ಪಾಸ್‌ಪೋರ್ಟ್ ಬಿಡುಗಡೆ ಮಾಡುವಂತೆ ಕೋರ್ಟ್‌ಗೆ ವಿನಂತಿಸಿದ್ದಾರೆ.

ಡಾ. ತೇಲ್ತುಂಬ್ಡೆ ಅವರು ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಲ್ಲಿ ಎನ್‌ಐಎ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ಆ ಸಂಘಟನೆಯ ಸಕ್ರಿಯ ಮತ್ತು ಹಿರಿಯ ಸದಸ್ಯ ಎಂದು ಪರಿಗಣಿಸಲಾಗಿದೆ. ಅವರಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡುವುದರಿಂದ ಅವರು ತಪ್ಪಿಸಿಕೊಳ್ಳಲು ಅನುಕೂಲವಾಗಬಹುದು ಮತ್ತು ವಿಚಾರಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸಬಹುದು ಎಂದು ಸಂಸ್ಥೆ ಹೈಕೋರ್ಟ್‌ಗೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...