ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

Date:

ಪಾಕಿಸ್ತಾನ ಮತ್ತು ಕೆನಡಾ ಸೇರಿದಂತೆ ವಿದೇಶಗಳಲ್ಲಿ ನೆಲೆಸಿರುವ ದರೋಡೆಕೋರರು, ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಭಯೋತ್ಪಾದಕ ಗುಂಪುಗಳ ನಡುವಿನ ನಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ, ಪಂಜಾಬ್, ರಾಜಸ್ಥಾನ, ಯುಪಿ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳ 122ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶೋಧ ಕಾರ್ಯ ತೀವ್ರಗೊಳಿಸಿದೆ.

ಇಲ್ಲಿಯವರೆಗೆ ಲಭ್ಯವಿರುವ ವಿವರಗಳ ಪ್ರಕಾರ, ಸುಮಾರು ಹನ್ನೆರಡು ಅಧಿಕಾರಿಗಳನ್ನು ಒಳಗೊಂಡ ಎನ್‌ಐಎ ಅಧಿಕಾರಿಗಳ ತಂಡವು ಈ ಎಲ್ಲಾ ಸ್ಥಳಗಳಿಗೆ ಮುಂಜಾನೆ 4 ಗಂಟೆ ಸುಮಾರಿಗೆ ತೆರಳಿ ಶೋಧ ನಡೆಸುತ್ತಿದೆ.

ಹರಿಯಾಣದ ಹಲವೆಡೆ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಲಾಗಿದೆ. ಪಂಜಾಬ್ ಗಡಿ ಜಿಲ್ಲೆಯ ಮೂರು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳನ್ನು ಶೋಧಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ ಮುಡ್ಕಿ, ತಲವಂಡಿ ಮತ್ತು ಫಿರೋಜ್‌ಪುರದಲ್ಲಿ ಮೂವರ ಮನೆಗಳ ಮೇಲೆ ಎನ್ಐಎ ತಂಡ ತೆರಳಿದೆ ಎಂದು ತಿಳಿದುಬಂದಿದೆ. ಇದಲ್ಲದೇ, ಬಟಿಂಡಾದಲ್ಲಿಯೂ ಪರಿಶೀಲನೆ ನಡೆಸಿದ್ದು, ಮನೆಗಳ ಒಳಗೆ ಮತ್ತು ಹೊರ ಹೋಗಲು ಯಾರಿಗೂ ಅವಕಾಶ ನೀಡುತ್ತಿಲ್ಲ. ಅಪರಾಧ ಪ್ರಕರಣ ಹೊಂದಿರುವವರ ಮನೆಗಳ ಎನ್ಐಎ ಕಣ್ಣಿಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? 90% ಅನಾಮಧೇಯ ಚುನಾವಣಾ ಬಾಂಡ್ ಆದಾಯ ಹೊಂದಿರುವ ಪ್ರಾದೇಶಿಕ ಪಕ್ಷಗಳು

ಕಳೆದ ಎರಡು ದಿನಗಳ ಹಿಂದಷ್ಟೇ (ಮೇ. 15) ಭಯೋತ್ಪಾದಕರಿಗೆ ಹಣಕಾಸು ಸಹಾಯ ಮಾಡಿದ ಪ್ರಕರಣಗಳ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ದಕ್ಷಿಣ ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್‌ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಪಾಕಿಸ್ತಾನಿ ಕಮಾಂಡರ್‌ಗಳ ಆದೇಶದ ಮೇರೆಗೆ ವಿವಿಧ ನಕಲಿ ಹೆಸರುಗಳ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆ ಇದಾಗಿತ್ತು.

ಕಳೆದ ಫೆಬ್ರವರಿಯಲ್ಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢದಲ್ಲಿ ದರೋಡೆಕೋರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಜನರ ಮನೆಗಳ ಮೇಲೆ ಎನ್ಐಎ ದಾಳಿ ನಡೆಸಿತ್ತು. ಸಂಸ್ಥೆಯು ಈಗಾಗಲೇ ಮೂರು ಪ್ರಕರಣಗಳ ಪೈಕಿ ಎರಡು ಆರೋಪಪಟ್ಟಿ ಸಲ್ಲಿಸಿದೆ.

“ಉತ್ತರ ಭಾರತದಲ್ಲಿ ಸಕ್ರಿಯವಾಗಿರುವ ಹಲವಾರು ಕ್ರಿಮಿನಲ್ ಗ್ಯಾಂಗ್‌ಗಳು ಈಗ ದುಬೈನಿಂದ ಕಾರ್ಯನಿರ್ವಹಿಸುತ್ತಿವೆ ಮತ್ತು 1990 ರ ದಶಕದಲ್ಲಿ ಭೂಗತ ಜಗತ್ತಿನ ರೀತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಖಲಿಸ್ತಾನ್ ಪರ ಸಂಘಟನೆಗಳು ತಮ್ಮ ಜಾಲಗಳನ್ನು ಬಳಸುತ್ತಿವೆ. ವಿದೇಶಗಳಲ್ಲಿ ನೆಲೆಸಿರುವ ಅರ್ಶ್ ದಲಾ ಮತ್ತು ಗೌರವ್ ಪಟಿಯಾಲ್‌ರಂತಹ ಕುಖ್ಯಾತ ಅಪರಾಧಿಗಳು, ಉದ್ದೇಶಿತ ಹತ್ಯೆಗಳು, ಸುಲಿಗೆ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಭಾರತೀಯ ಜೈಲುಗಳು ಮತ್ತು ಇತರ ದೇಶಗಳಲ್ಲಿ ಇರುವ ಖಲಿಸ್ತಾನ್ ಪರ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...