ಮೋದಿ ಸರ್ಕಾರದ 9 ವರ್ಷಕ್ಕೆ 9 ಸವಾಲು; ಒಂಬತ್ತು ಪ್ರಶ್ನೆ ಮುಂದಿಟ್ಟ ಕಾಂಗ್ರೆಸ್‌

Date:

  • ಒಂಬತ್ತು ವರ್ಷಗಳ ಅಧಿಕಾರಕ್ಕೆ ಒಂಬತ್ತು ಸವಾಲಿಟ್ಟ ಕಾಂಗ್ರೆಸ್
  • ಅಧಿಕೃತ ಜಾಲತಾಣದಲ್ಲಿ ಪಟ್ಟಿ ಪ್ರಕಟಿಸಿದ ಜೈರಾಮ್‌ ರಮೇಶ್‌

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇ 30ಕ್ಕೆ ಒಂಬತ್ತು ವರ್ಷಗಳನ್ನು ಪೂರೈಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್‌ ರಮೇಶ್‌ ಅವರು ‘ಒಂಬತ್ತು ವರ್ಷ, ಒಂಬತ್ತು ಸವಾಲು’ ಹೆಸರಿನಲ್ಲಿ ಶುಕ್ರವಾರ (ಮೇ 26) ಪ್ರಶ್ನೆಗಳನ್ನು ಕೇಳಿದ್ದಾರೆ.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಜೈರಾಮ್ ರಮೇಶ್, ಬಿಜೆಪಿಗೆ ಪ್ರಶ್ನೆಗಳ ಪಟ್ಟಿ ಇರುವ ‘9 ವರ್ಷ, 9 ಪ್ರಶ್ನೆಗಳು’ ಶೀರ್ಷಿಕೆಯ ದಾಖಲೆ ಬಿಡುಗಡೆ ಮಾಡಿದ್ದಾರೆ. “ಈ ಪ್ರಶ್ನೆಗಳ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಆಡಳಿತದ ಒಂಬತ್ತು ವರ್ಷಗಳಿಗೆ ಸಂಬಂಧಿತ ಆರ್ಥಿಕತೆ, ಭ್ರಷ್ಟಾಚಾರ, ಕೋವಿಡ್‌ ನಿರ್ವಹಣೆ ಹಾಗೂ ಸಾಮಾಜಿಕ ನ್ಯಾಯದ ವಿಚಾರಗಳ ಮೇಲೆ ಕಾಂಗ್ರೆಸ್ ಈ ಒಂಬತ್ತು ಪ್ರಶ್ನೆಗಳನ್ನು ಕೇಳಿದೆ. “ಬಿಜೆಪಿ 9 ವರ್ಷಗಳ ಅಧಿಕಾರದ ಸಂಭ್ರಮಾಚರಣೆ ಆರಂಭಿಸುವ ಮೊದಲು ಪ್ರಧಾನಿ ಈ ಒಂಬತ್ತು ಪ್ರಶ್ನೆಗಳಿಗೆ ಉತ್ತರಿಸಬೇಕು” ಎಂದು ಕಾಂಗ್ರೆಸ್ ಟ್ವೀಟ್‌ನಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಪಟ್ಟಿ ಮಾಡಿರುವ ಒಂಬತ್ತು ಪ್ರಶ್ನೆಗಳು

  1. ಆರ್ಥಿಕತೆ: ಭಾರತದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಏಕೆ ಗಗನಕ್ಕೇರುತ್ತಿದೆ? ಶ್ರೀಮಂತರು ಏಕೆ ಶ್ರೀಮಂತರಾದರು, ಬಡವರು ಬಡವರಾಗಿದ್ದಾರೆ? ಆರ್ಥಿಕ ಅಸಮಾನತೆಗಳು ಹೆಚ್ಚುತ್ತಿರುವಾಗಲೂ ಸಾರ್ವಜನಿಕ ಆಸ್ತಿಯನ್ನು ಪ್ರಧಾನಿ ಮೋದಿ ಸ್ನೇಹಿತರಿಗೆ ಏಕೆ ಮಾರಾಟ ಮಾಡುತ್ತಿದ್ದಾರೆ?
  2. ಕೃಷಿ ಮತ್ತು ರೈತರು: ಮೂರು ಕಪ್ಪು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಾಗ ರೈತರೊಂದಿಗೆ ಮಾಡಿಕೊಂಡ ಒಪ್ಪಂದಗಳನ್ನು ಏಕೆ ಗೌರವಿಸಲಾಗಿಲ್ಲ? ಕನಿಷ್ಠ ಬೆಂಬಲ ಬೆಲೆಯನ್ನು ಏಕೆ ಕಾನೂನುಬದ್ಧವಾಗಿ ಖಾತರಿಪಡಿಸಿಲ್ಲ? ಕಳೆದ 9 ವರ್ಷಗಳಲ್ಲಿ ರೈತರ ಆದಾಯ ಏಕೆ ದ್ವಿಗುಣಗೊಂಡಿಲ್ಲ?
  3. ಭ್ರಷ್ಟಾಚಾರ: ನಿಮ್ಮ ಸ್ನೇಹಿತ ಅದಾನಿಗೆ ಲಾಭ ಮಾಡಲು ಎಲ್ಐಸಿ ಮತ್ತು ಎಸ್‌ಬಿಐನಲ್ಲಿ ಜನರು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದ ಹಣ ಏಕೆ ಹಾಕುತ್ತಿದ್ದೀರಿ? ಕಳ್ಳರನ್ನು ತಪ್ಪಿಸಿಕೊಳ್ಳಲು ಏಕೆ ಬಿಡುತ್ತಿದ್ದೀರಿ? ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿರೇಕದ ಭ್ರಷ್ಟಾಚಾರದ ಬಗ್ಗೆ ನೀವು ಏಕೆ ಮೌನವಾಗಿದ್ದೀರಿ?
  4. ಚೀನಾ ಮತ್ತು ರಾಷ್ಟ್ರೀಯ ಭದ್ರತೆ: 2020ರಲ್ಲಿ ನೀವು ಚೀನಾವನ್ನು ನಿರ್ದೋಷಿ ಎಂದು ಹೇಳಿದ ನಂತರವೂ ಅವರು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಳ್ಳುವುದನ್ನು ಏಕೆ ಮುಂದುವರಿಸಿದ್ದಾರೆ? ಚೀನಾದೊಂದಿಗೆ 18 ಸಭೆಗಳನ್ನು ನಡೆಸಲಾಗಿದೆ. ಆದರೂ ಅವರು ಭಾರತೀಯ ಪ್ರದೇಶವನ್ನು ನೀಡಲು ನಿರಾಕರಿಸುತ್ತಾರೆ. ಬದಲಿಗೆ ತಮ್ಮ ಆಕ್ರಮಣಕಾರಿ ತಂತ್ರಗಳನ್ನು ಏಕೆ ಮುಂದುವರಿಸುತ್ತಾರೆ?
  5. ಸಾಮಾಜಿಕ ಸಾಮರಸ್ಯ: ನೀವು ಉದ್ದೇಶಪೂರ್ವಕವಾಗಿ ದ್ವೇಷದ ರಾಜಕೀಯವನ್ನು ಚುನಾವಣಾ ಲಾಭಕ್ಕಾಗಿ ಬಳಸುತ್ತಿರುವಿರಿ. ಸಮಾಜದಲ್ಲಿ ಭಯದ ವಾತಾವರಣವನ್ನು ಏಕೆ ಹೆಚ್ಚಿಸುತ್ತಿದ್ದೀರಿ?
  6. ಸಾಮಾಜಿಕ ನ್ಯಾಯ: ನಿಮ್ಮ ದಬ್ಬಾಳಿಕೆಯ ಸರ್ಕಾರ ಸಾಮಾಜಿಕ ನ್ಯಾಯದ ಅಡಿಪಾಯವನ್ನು ಕ್ರಮಬದ್ಧವಾಗಿ ನಾಶಪಡಿಸುತ್ತಿರುವುದು ಏಕೆ? ಮಹಿಳೆಯರು, ದಲಿತರು, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಬಗ್ಗೆ ಏಕೆ ಮೌನವಾಗಿದ್ದೀರಿ? ಜಾತಿ ಗಣತಿ ಬೇಡಿಕೆಯನ್ನು ಏಕೆ ನಿರ್ಲಕ್ಷಿಸುತ್ತಿದ್ದೀರಿ?
  7. ಪ್ರಜಾಪ್ರಭುತ್ವ ಮತ್ತು ಸಂಯುಕ್ತ ವ್ಯವಸ್ಥೆ: ಕಳೆದ ಒಂಬತ್ತು ವರ್ಷಗಳಲ್ಲಿ ನೀವು ನಮ್ಮ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಏಕೆ ದುರ್ಬಲಗೊಳಿಸಿದ್ದೀರಿ? ಪ್ರತಿಪಕ್ಷಗಳ ನಾಯಕರ ವಿರುದ್ಧ ಸೇಡಿನ ರಾಜಕಾರಣ ಏಕೆ ಮಾಡುತ್ತಿದ್ದೀರಿ? ಜನರಿಂದ ಚುನಾಯಿತರಾದ ಸರ್ಕಾರಗಳನ್ನು ಅಸ್ಥಿರಗೊಳಿಸಲು ನೀವು ಹಣದ ಬಲವನ್ನು ಏಕೆ ಬಳಸುತ್ತಿದ್ದೀರಿ?
  8. ಕಲ್ಯಾಣ ಯೋಜನೆಗಳು: ಬಡವರು, ನಿರ್ಗತಿಕರು ಹಾಗೂ ಬುಡಕಟ್ಟು ಜನಾಂಗದವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಅವರ ಬಜೆಟ್‌ಗಳನ್ನು ಕಡಿತಗೊಳಿಸಿ ನಿರ್ಬಂಧಿತ ನಿಯಮಗಳನ್ನು ಮಾಡುವ ಮೂಲಕ ಏಕೆ ದುರ್ಬಲಗೊಳಿಸಲಾಗುತ್ತಿದೆ?
  9. ಕೋವಿಡ್ ದುರುಪಯೋಗ: ಕೋವಿಡ್‌ನಿಂದ 40 ಲಕ್ಷಕ್ಕೂ ಹೆಚ್ಚು ಜನರ ದುರಂತ ಸಾವಿನ ಹೊರತಾಗಿಯೂ, ಅವರ ಕುಟುಂಬಗಳಿಗೆ ಪರಿಹಾರ ನೀಡಲು ಮೋದಿ ಸರ್ಕಾರ ಏಕೆ ನಿರಾಕರಿಸಿದೆ? ಲಕ್ಷಗಟ್ಟಲೆ ಕಾರ್ಮಿಕರನ್ನು ಮನೆಗೆ ಮರಳುವಂತೆ ಮಾಡಿದ ಲಾಕ್‌ಡೌನ್ ಅನ್ನು ನೀವು ಇದ್ದಕ್ಕಿದ್ದಂತೆ ಏಕೆ ವಿಧಿಸಿದ್ದಿರಿ?

ಈ ಸುದ್ದಿ ಓದಿದ್ದೀರಾ? ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಪಟ್ಟಿ ಬಿಡುಗಡೆ ಮಾಡಿ ಮಾತನಾಡಿರುವ ಜೈರಾಮ್ ರಮೇಶ್, “ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮತ್ತು ನಂತರ ರಾಹುಲ್ ಗಾಂಧಿ ಈ 9 ಪ್ರಶ್ನೆಗಳನ್ನು ನಿರಂತರವಾಗಿ ಕೇಳುತ್ತಿದ್ದರು. ಆದರೆ ಈವರೆಗೆ ಪ್ರಧಾನಿ ಅವರಿಂದ ಪಕ್ಷ ಯಾವುದೇ ಉತ್ತರ ಸ್ವೀಕರಿಸಿಲ್ಲ. ಇದು ಪ್ರಧಾನಿ ಮೌನ ಮುರಿಯುವ ಸಮಯ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...