ರಾಮ ಮಂದಿರ ಕಾರ್ಯಕ್ರಮ ಪ್ರಸಾರ ನಿಷೇಧ | ನಿರ್ಮಲಾ ಸೀತಾರಾಮನ್ ಆರೋಪ ಸುಳ್ಳು ಎಂದ ಸ್ಟಾಲಿನ್ ಸರ್ಕಾರ

Date:

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎನ್ನುವ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಡಿದ್ದಾರೆ. ಆದರೆ ಅವರ ಆರೋಪವನ್ನು ಅಲ್ಲಗಳೆದಿರುವ ತಮಿಳುನಾಡು ಸರ್ಕಾರ, ರಾಮ ಮಂದಿರ ಕಾರ್ಯಕ್ರಮ ನೇರ ಪ್ರಸಾರ ನಿಷೇಧಿಸಿಲ್ಲ, ಪೂಜೆ ನಡೆಸಿ ಪ್ರಸಾದ ವಿತರಣೆಗೂ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಹಿತ ನಾನಾ ಧಾರ್ಮಿಕ ಚಟುವಟಿಕೆಗಳ ನೇರ ವೀಕ್ಷಣೆಗೆ ತಮಿಳುನಾಡು ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಬಲ್‌ ಕಡಿತಗೊಳಿಸಿ ಕಾರ್ಯಕ್ರಮ ವೀಕ್ಷಿಸದಂತೆ ಮಾಡಲಾಗುತ್ತಿದೆ. ತಮಿಳುನಾಡಿನ 200ಕ್ಕೂ ದೇಗುಲಗಳಲ್ಲಿಯೂ ಭಜನೆ, ಇತರೆ ಧಾರ್ಮಿಕ ಚಟುವಟಿಕೆ ನಡೆಸದಂತೆ ಪೊಲೀಸರನ್ನು ಬಳಸಿ ನಿಗ್ರಹಿಸಲಾಗುತ್ತಿದೆ. ಇದು ನಿಜಕ್ಕೂ ಹಿಂದೂ ವಿರೋಧಿ ಹಾಗೂ ದ್ವೇಷದ ಪ್ರಕ್ರಿಯೆ ಎಂದು  ಆರೋಪಿಸಿದ್ದಾರೆ.

ಸಚಿವರ ಸ್ಪಷ್ಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಮಲಾ ಸೀತಾರಾಮನ್‌ ಆರೋಪವನ್ನು ಅಲ್ಲಗಳೆದಿರುವ ತಮಿಳುನಾಡಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಸೇಕರ ಬಾಬು, ಡಿಎಂಕೆ ಯುವ ಸಮಾವೇಶ ಆಯೋಜನೆಯನ್ನು ಸಹಿಸದೇ ಅದರ ಗಮನ ಬೇರೆಡೆ ಸೆಳೆಯಲು ಇಂತಹ ಹೇಳಿಕೆ ನೀಡಲಾಗುತ್ತಿದೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ ನಿಷೇಧಿಸಿಲ್ಲ. ಇಂತಹ ಯಾವುದೇ ಆದೇಶಗಳನ್ನು ನಾವು ಜಾರಿ ಮಾಡಿಲ್ಲ. ರಾಮಮಂದಿರಗಳಲ್ಲಿ ಚಟುವಟಿಕೆ ನಡೆಸಲು ಯಾವುದೇ ಅಡ್ಡಿ ಮಾಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ತಮಿಳುನಾಡಿನ ಸೇಲಂನಲ್ಲಿ ಆಯೋಜಿಸಿರುವ ಡಿಎಂಕೆ ಯುವ ಸಮಾವೇಶದ ಯಶಸ್ಸನ್ನು ದಿಕ್ಕುತಪ್ಪಿಸುವ ಉದ್ದೇಶದಿಂದಲೇ ರಾಮಮಂದಿರ ಕಾರ್ಯಕ್ರಮ ವೀಕ್ಷಣೆಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ಸಚಿವ ಸೇಕರ ಬಾಬು ಹೇಳಿದ್ದಾರೆ.

ಡಿಎಂಕೆ ಯುವ ಸಮಾವೇಶಕ್ಕೆ ಭರದ ಸಿದ್ದತೆ ನಡೆದಿದೆ. ಸಮಾವೇಶ ಯಶಸ್ವಿಯಾಗಲಿದೆ ಎನ್ನುವ ಭಯದಲ್ಲಿ ಇಂತ ಸುಳ್ಳು ಸುದ್ದಿಯನ್ನು ಹರಡಲಾಗುತ್ತಿದೆ. ಇಲಾಖೆಯು ಯಾವುದೇ ಚಟುವಟಿಕೆ ನಡೆಸದಂತೆ ಅಡ್ಡಿಪಡಿಸಿಲ್ಲ. ಅನುಮತಿಯನ್ನೂ ನಿರಾಕರಿಸಿಲ್ಲ. ರಾಮನ ದೇಗಲುಗಳಲ್ಲಿ ಪೂಜೆ, ಪ್ರಸಾದ ನಡೆಸಲು ಅಡ್ಡಿಯಿಲ್ಲ. ಆದರೆ ದೇಶದ ಉನ್ನತ ಹುದ್ದೆಯಲ್ಲಿರುವ ನಿರ್ಮಲಾ ಸೀತಾರಾಮನ್‌ ತರದವರು ದುರುದ್ದೇಶಪೂರ್ವಕವಾಗಿ ಇಂತಹ ತಪ್ಪು ಸಂದೇಶವನ್ನು ನೀಡುತ್ತಿರುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...