ರಾಜ್ಯಸಭೆಗೆ ನಿತೀಶ್‌ ಕುಮಾರ್‌ ಸ್ಪರ್ಧೆ ಖಚಿತ: ಬಿಹಾರದ ಜನತೆಗೆ ಭಾವುಕ ಪತ್ರ

Date:

ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಬಿಹಾರದ ಜನತೆಗೆ ಸಂದೇಶವೊಂದನ್ನು ರವಾನಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮ್ಮ ಬೆಂಬಲಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜನರ ವಿಶ್ವಾಸದಿಂದಾಗಿಯೇ ಎರಡು ದಶಕಗಳಿಗೂ ಹೆಚ್ಚು ಕಾಲ ರಾಜ್ಯದ ಸೇವೆ ಮಾಡಲು ತಮಗೆ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

​ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇವಲ ನಾಲ್ಕೇ ತಿಂಗಳಲ್ಲಿ ನಿತೀಶ್ ಕುಮಾರ್ ಅವರು ರಾಜ್ಯಸಭೆಯತ್ತ ಮುಖ ಮಾಡಿರುವುದು, ಮುಖ್ಯಮಂತ್ರಿ ಹುದ್ದೆಗೆ ಅವರ ಉತ್ತರಾಧಿಕಾರಿ ಯಾರು ಎಂಬ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

​ಈ ಕುರಿತು ‘ಎಕ್ಸ್’ ಜಾಲತಾಣದಲ್ಲಿ ಹಿಂದಿಯಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, “ಎರಡು ದಶಕಗಳಿಗೂ ಹೆಚ್ಚು ಕಾಲ ನೀವು ನನ್ನ ಮೇಲೆ ನಿರಂತರವಾಗಿ ವಿಶ್ವಾಸವಿಟ್ಟು ಬೆಂಬಲ ನೀಡಿದ್ದೀರಿ. ಆ ನಂಬಿಕೆಯ ಬಲದಿಂದಲೇ ನಾವು ಬಿಹಾರ ಮತ್ತು ನಿಮ್ಮೆಲ್ಲರ ಸೇವೆಯನ್ನು ಸಂಪೂರ್ಣ ಸಮರ್ಪಣಾ ಭಾವದಿಂದ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ತಮ್ಮ ರಾಜಕೀಯ ಪಯಣವನ್ನು ಮೆಲುಕು ಹಾಕಿರುವ ಜೆಡಿಯು ವರಿಷ್ಠ ನಿತೀಶ್, ಎಲ್ಲಾ ಶಾಸಕಾಂಗ ವೇದಿಕೆಗಳಲ್ಲಿ ಸೇವೆ ಸಲ್ಲಿಸುವ ಮಹದಾಸೆಯನ್ನು ತಾನು ಬಹುಕಾಲದಿಂದ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ.

​”ನನ್ನ ಸಂಸದೀಯ ಪಯಣದ ಆರಂಭದಿಂದಲೂ, ಬಿಹಾರ ಶಾಸಕಾಂಗದ ಉಭಯ ಸದನಗಳು ಹಾಗೂ ಸಂಸತ್ತಿನ ಉಭಯ ಸದನಗಳ ಸದಸ್ಯನಾಗುವ ಆಸೆಯನ್ನು ನಾನು ಹೊಂದಿದ್ದೆ. ಆ ಆಶಯಕ್ಕೆ ಅನುಗುಣವಾಗಿ, ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯನಾಗಲು ಬಯಸುತ್ತಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

​ರಾಜ್ಯಸಭೆ ಪ್ರವೇಶಿಸುವ ತಮ್ಮ ಈ ನಿರ್ಧಾರದಿಂದ ರಾಜ್ಯದ ಬಗೆಗಿನ ತಮ್ಮ ಬದ್ಧತೆ ಕಡಿಮೆಯಾಗುವುದಿಲ್ಲ ಎಂದು ಬೆಂಬಲಿಗರಿಗೆ ಭರವಸೆ ನೀಡಿರುವ ಹಿರಿಯ ರಾಜಕಾರಣಿ, “ನಿಮ್ಮೊಂದಿಗಿನ ನನ್ನ ಬಾಂಧವ್ಯ ಭವಿಷ್ಯದಲ್ಲೂ ಮುಂದುವರಿಯಲಿದೆ ಮತ್ತು ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಸೇರಿ ಕೆಲಸ ಮಾಡುವ ನನ್ನ ಸಂಕಲ್ಪ ಅಚಲವಾಗಿರಲಿದೆ ಎಂದು ನಾನು ಅತ್ಯಂತ ಪ್ರಾಮಾಣಿಕವಾಗಿ ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ರಚನೆಯಾಗುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರಲಿದೆ” ಎಂದಿದ್ದಾರೆ.

​ಒಂದು ವೇಳೆ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದರೆ, ಅದು ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲಾಗಲಿದೆ. ಅವರು ಈಗಾಗಲೇ ಬಿಹಾರ ವಿಧಾನಸಭೆ, ಬಿಹಾರ ವಿಧಾನ ಪರಿಷತ್ತು ಹಾಗೂ ಲೋಕಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ರಾಜ್ಯಸಭೆ ಪ್ರವೇಶಿಸುವ ಮೂಲಕ ಬಿಹಾರ ಶಾಸಕಾಂಗದ ಉಭಯ ಸದನಗಳು ಹಾಗೂ ಸಂಸತ್ತಿನ ಉಭಯ ಸದನಗಳು ಸೇರಿದಂತೆ ಒಟ್ಟು ನಾಲ್ಕೂ ಶಾಸಕಾಂಗ ವೇದಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅಪರೂಪದ ನಾಯಕರ ಸಾಲಿಗೆ ಅವರು ಸೇರ್ಪಡೆಯಾಗಲಿದ್ದಾರೆ.

​ಜೆಡಿಯು ಮೂಲಗಳ ಪ್ರಕಾರ, ಮಾರ್ಚ್ 16ರಂದು ನಿಗದಿಯಾಗಿರುವ ರಾಜ್ಯಸಭಾ ಚುನಾವಣೆ ಮುಗಿಯುವವರೆಗೂ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...