ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರಿಗೆ ಜೆಡಿಯು ಅಧ್ಯಕ್ಷ ಸ್ಥಾನದಿಂದ ಕೋಕ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಊಹಾಪೋಹಗಳ ಸುದ್ದಿಗಳ ಪ್ರಕಾರ ನಿತೀಶ್ ಕುಮಾರ್ ಅವರೇ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಪಕ್ಷದೊಳಗಿನ ಆಂತರಿಕ ಕಚ್ಚಾಟ ನಿವಾರಣೆಗೆ ನಿತೀಶ್ ಅವರೇ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಆಪ್ತರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲದಿದ್ದರೆ ಲಾಲನ್ ಸಿಂಗ್ ಬದಲಿಗೆ ಹೊಸ ಹೆಸರನ್ನು ಸೂಚಿಸಬಹುದು.
ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರು ಕಾರ್ಯನಿರ್ವಹಿಸುತ್ತಿರುವ ರೀತಿ ಮತ್ತು ಮುಖ್ಯವಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರೊಂದಿಗೆ ಹೆಚ್ಚು ಆಪ್ತವಾಗಿರುವ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಮುಂಗಾರಿ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಲಾಲನ್ ಸಿಂಗ್ ಉತ್ಸುಕರಾಗಿದ್ದಾರೆ ಮತ್ತು ಅವರು ಆರ್ಜೆಡಿ ಟಿಕೆಟ್ನಲ್ಲಿ ಸ್ಪರ್ಧಿಸಬಹುದು ಎಂದು ವರದಿಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ
ನಿತೀಶ್ ಅವರು ತಮ್ಮ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗೆ ಉತ್ತಮವಾಗಿ ಸಹಕರಿಸುವಲ್ಲಿ ವಿಫಲರಾದ ಲಾಲನ್ ಸಿಂಗ್ ಅವರೊಂದಿಗೆ ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಲಾಲನ್ ಸಿಂಗ್ ಅವರು ನಿತೀಶ್ ಅವರಿಗೆ ಅತ್ಯಂತ ನಿಕಟವಾಗಿದ್ದರೂ ಪಕ್ಷದ ಮುಖ್ಯಸ್ಥ ಸ್ಥಾನದಿಂದ ಕಿತ್ತೊಗೆಯಲ್ಪಟ್ಟರೆ, ಜಾರ್ಜ್ ಫರ್ನಾಂಡಿಸ್, ಶರದ್ ಯಾದವ್, ಆರ್ಸಿಪಿ ಸಿಂಗ್, ಉಪೇಂದ್ರ ಕುಶ್ವಾಹ ಮತ್ತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರಂತಹ ಪಕ್ಷದ ಇತರ ಹಿರಿಯ ನಾಯಕರ ಸಾಲಿಗೆ ಸೇರ್ಪಡೆಗೊಳ್ಳುತ್ತಾರೆ.
ಏತನ್ಮಧ್ಯೆ, ಇಂಡಿಯಾ ಒಕ್ಕೂಟದ ಇತ್ತೀಚಿನ ಸಭೆಯಲ್ಲಿ, ನಿತೀಶ್ ಅವರು ಜನವರಿಯೊಳಗೆ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು ಎಂದು ಜೆಡಿಯು ನಾಯಕರಾದ ಸಂಜಯ್ ಕುಮಾರ್ ಝಾ ತಿಳಿಸಿದ್ದಾರೆ.
“ಜನವರಿ ಒಳಗೆ ಸೀಟು ಹಂಚಿಕೆ ಪೂರ್ಣಗೊಳ್ಳಬೇಕು ಎಂದು ನಿತೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲ ಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮದೊಂದಿಗೆ ಸಿದ್ದರಾಗಬೇಕು, ಏಕೆಂದರೆ ಕೇಂದ್ರದ ವಿರುದ್ಧ ಹೋರಾಟ ನಡೆಸಲು ನಾವು ಪ್ರತಿ ಕಾರ್ಯತಂತ್ರ ರೂಪಿಸಿ ಪ್ರಚಾರಕ್ಕೆ ಧುಮುಕಬೇಕು” ಎಂದು ಸಂಜಯ್ ಕುಮಾರ್ ಝಾ ಹೇಳಿದ್ದಾರೆ.





