ಬಿಜೆಪಿ ಬೆಂಬಲದೊಂದಿಗೆ ಜ.28ರಂದು ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣವಚನ!

Date:

ಮೈತ್ರಿ ಪಕ್ಷ ಆರ್‌ಜೆಡಿಯೊಂದಿಗೆ ಬಹುತೇಕ ರಾಜಕೀಯ ಸಂಬಂಧ ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಜ.28ರಂದು ಬಿಜೆಪಿ ಬೆಂಬಲದೊಂದಿಗೆ ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂತನ ಸರ್ಕಾರದಲ್ಲಿ ಬಿಹಾರ್ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಉಪಮುಖ್ಯಮಂತ್ರಿಯಾಗುವ ಸಂಭವವಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸುಶೀಲ್ ಮೋದಿ, ಮುಚ್ಚಿದ ಬಾಗಿಲುಗಳು ತೆರೆಯಬಹುದು. ರಾಜಕೀಯವು ಎಲ್ಲ ಸಾಧ್ಯತೆಗಳ ಆಟ ಎಂದು ಹೇಳಿದ್ದಾರೆ.

ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್‌ ಅವರಿಗೆ ಭಾರತ ರತ್ನ ನೀಡಿದ ವಿಚಾರಕ್ಕೆ ನಿನ್ನೆ(ಜ.26) ಮಿತ್ರ ಪಕ್ಷ ಆರ್‌ಜೆಡಿ ಜೊತೆಗಿನ ಪ್ರಕ್ಷುಬ್ಧತೆ ಉಂಟಾದ ನಂತರ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಳಿಸಿದ ಶಕ್ತಿಗಳೇ ಕರ್ಪೂರಿಯವರನ್ನು ಅಟ್ಟಕ್ಕೇರಿಸುತ್ತಿರುವ ಅಣಕ

ನಿತೀಶ್ ಕುಮಾರ್ ಕೌಟುಂಬಿಕ ರಾಜಕಾರಣದ ಬಗ್ಗೆ ಮಾತನಾಡಿದ ನಂತರ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ನಿತೀಶ್ ವಿರುದ್ಧ ಅವಕಾಶವಾದಿ ರಾಜಕಾರಣಿ ಎಂದು ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿ ಅಳಿಸಿ ಹಾಕಿದ್ದರು. ಈ ಘಟನೆಯೆ ಬಿಹಾರದ ರಾಜಕೀಯ ಬದಲಾವಣೆಗೆ ಪ್ರಮುಖ ಕಾರಣವಾಗಿದೆ.

ಈ ನಡುವೆ ಬಿಹಾರದ ರಾಜಕೀಯ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್, ನಿತೀಶ್ ಬಿಜೆಪಿ ಸೇರ್ಪಡೆ ಅಷ್ಟು ಸಲಭವಲ್ಲ ಎಂದು ತಿಳಿಸಿದೆ. ಮೇಲಾಗಿ ವಿಧಾನಸಭಾ ಸ್ಪೀಕರ್ ನಮ್ಮ ಕಡೆ(ಆರ್‌ಜೆಡಿ) ಇದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

2020ರಲ್ಲಿ ನಡೆದಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ 75, ಎನ್‌ಡಿಎ 74 ಹಾಗೂ ಜೆಡಿಯು 43 ಸ್ಥಾನ ಗೆದ್ದಿತ್ತು. ಆರಂಭದಲ್ಲಿ ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ 2022ರಲ್ಲಿ ಆರ್‌ಜೆಡಿಯೊಂದಿಗೆ ಸಖ್ಯ ಬೆಳೆಸಿ ಸರ್ಕಾರ ರಚಿಸಿದ್ದರು. ಈಗ, ಆರ್‌ಜೆಡಿ ಬಿಟ್ಟು, ಬಿಜೆಪಿಯೊಂದಿಗೆ ಸರ್ಕಾರ ರಚಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...