ಸರ್ಕಾರ ರಚನೆಗೆ ಮುನ್ನವೆ ಮೋದಿಗೆ ಸಂಕಷ್ಟ: ಅಗ್ನಿಪಥ್, ಒಂದು ದೇಶ ಒಂದು ಚುನಾವಣೆಗೆ ಜೆಡಿಯು ಆಕ್ಷೇಪ

Date:

ನೂತನ ಸರ್ಕಾರ ರಚನೆಯಾಗುವ ಮುನ್ನವೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸಂಕಷ್ಟಗಳು ಶುರುವಾಗುವ ಸಾಧ್ಯತೆಯಿದೆ. ಒಕ್ಕೂಟದ ಪ್ರಮುಖ ಪಕ್ಷವಾಗಿ ಕಿಂಗ್‌ ಮೇಕರ್‌ ಸ್ಥಾನದಲ್ಲಿರುವ ನಿತೀಶ್ ಕುಮಾರ್ ನೃತೃತ್ವದ ಜೆಡಿಯು ಸೇನೆಯಲ್ಲಿನ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಶೀಲಿಸುವಂತೆ ಬೇಡಿಕೆಯಿಟ್ಟಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ವಕ್ತಾರ ಕೆ ಸಿ ತ್ಯಾಗಿ, ಅಗ್ನಿಪಥ್ ಯೋಜನೆಯನ್ನು ಪುನರ್‌ಪರಿಶೀಲಿಸುವ ಅಗತ್ಯವಿದೆ. ಈ ಯೋಜನೆಗೆ ಹಲವು ವಿರೋಧವಿದೆ. ಚುನಾವಣೆಯಲ್ಲೂ ಕೂಡ ಇದರ ಪರಿಣಾಮವನ್ನು ನೋಡಿದ್ದೇವೆ ಎಂದು ತಿಳಿಸಿದ್ದಾರೆ.

“ಅಗ್ನಿಪಥ್‌ ಯೋಜನೆ ಪ್ರಾರಂಭಿಸಿದಾಗ ನಾವು ಇದರ ಬಗ್ಗೆ ಜಗಳವಾಡಲಿಲ್ಲ. ಸೇನಾ ಪಡೆಗಳ ದೊಡ್ಡ ದೊಡ್ಡ ವಿಭಾಗಗಳಲ್ಲಿ ಈ ಯೋಜನೆ ಬಗ್ಗೆ ಅಸಮಾಧಾನವಿತ್ತು. ಸೇನಾ ಕುಟುಂಬಗಳು ಚುನಾವಣಾ ಸಂದರ್ಭದಲ್ಲಿ ಯೋಜನೆಯ ಬಗ್ಗೆ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ಈ ಬಗ್ಗೆ ಚರ್ಚಿಸುವ ಅಗತ್ಯವಿದೆ” ಎಂದು ಕೆ ಸಿ ತ್ಯಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಒಂದು ದೇಶ ಒಂದು ಚುನಾವಣೆ ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾನೂನು ಆಯೋಗದ ಅಧ್ಯಕ್ಷರಿಗೆ ಈ ಬಗ್ಗೆ ಪತ್ರ ಬರೆದು ಎಲ್ಲ ಮುಖ್ಯಮಂತ್ರಿಗಳು, ಎಲ್ಲ ಪಕ್ಷಗಳು, ವಿವಿಧ ಪಂಗಡಗಳ ನಾಯಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದರು ಎಂದು ತ್ಯಾಗಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ರಕ್ಷಣಾ ಪಡೆಯ ಪಿಂಚಣಿ ಮಸೂದೆಯನ್ನು ಕಡಿತ ಮಾಡಲು ಹಾಗೂ ಸೇನಾ ಪಡೆಯನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ಅಗ್ನಿಪಥ್‌ ಯೋಜನೆಯನ್ನು 2022ರಲ್ಲಿ ಪರಿಚಯಿಸಿತ್ತು.

ಈ ಯೋಜನೆಯಡಿ, ಭೂಸೇನೆ, ವಾಯು ಸೇನೆ ಹಾಗೂ ನೌಕಾ ಸೇನೆಗಳಿಗೆ 4 ವರ್ಷದ ಅವಧಿಯ ಅಲ್ಪಾವಧಿಯವರೆಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ಈ ಯೋಜನೆಯಲ್ಲಿ ನೇಮಕಗೊಂಡವರು ಕೇವಲ 25 ರಷ್ಟು ಮಾತ್ರ 15 ವರ್ಷಗಳವರೆಗೆ ಶಾಶ್ವತ ಹುದ್ದೆ ಪಡೆಯಲಿದ್ದಾರೆ. ಈ ಯೋಜನೆ ಜಾರಿಗೊಂಡ ನಂತರ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಬೃಹತ್‌ ಪ್ರತಿಭಟನೆ ನಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...