ಬಿಜೆಪಿಗೆ ಮತ ನೀಡದವರಿಗೆ ಕುಡಿಯುವ ನೀರು ನಿರಾಕರಣೆ!

Date:

ಮಧ್ಯ ಪ್ರದೇಶ ರಾಜ್ಯದಲ್ಲಿ ಶಾಂತಿಯುತವಾಗಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಎರಡು ದಿನಗಳ(ನ.17) ನಂತರ ರಾಜ್ಯದ ಅಶೋಕನಗರ ಜಿಲ್ಲೆಯಿಂದ ಕೆಲವು ಆಘಾತಕಾರಿ ವರದಿಗಳು ಹೊರಬಿದ್ದಿವೆ.

ಈ ಜಿಲ್ಲೆಯ ಕೆಲವು ಗ್ರಾಮಗಳ ಗ್ರಾಮಸ್ಥರು ಆಡಳಿತಾರೂಢ ಬಿಜೆಪಿಗೆ ಮತ ಹಾಕಿದ್ದೇವೆ ಎಂದು ಪ್ರಮಾಣ ವಚನ ಸ್ವೀಕರಿಸದ ಹೊರತು ಸರ್ಕಾರ ನಿರ್ಮಿಸಿದ ಕೊಳವೆಬಾವಿಗಳಿಂದ ನೀರನ್ನು ನಿರಾಕರಿಸಲಾಗುತ್ತಿದೆ ಎಂಬ ಸುದ್ದಿ ವರದಿಯಾಗುತ್ತಿದೆ.

ಮಧ್ಯ ಪ್ರದೇಶ ರಾಜ್ಯ ಸಚಿವ ಬ್ರಿಜೇಂದ್ರ ಸಿಂಗ್ ಯಾದವ್ ಅವರ ಮುಂಗಾವಲಿ ವಿಧಾನಸಭಾ ಕ್ಷೇತ್ರದ ನಯಖೇಡಾ ಗ್ರಾಮದಿಂದ ಡಿಸೆಂಬರ್ 3 ರವರೆಗೆ ಫಲಿತಾಂಶ ಪ್ರಕಟವಾಗುವವರೆಗೆ ಗ್ರಾಮಸ್ಥರಿಗೆ ನೀರು ಬಿಡಬೇಡಿ ಎಂದು ನಿರಾಕರಿಸಿರುವ ವರದಿಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಗ್ರಾಮದಲ್ಲಿ ಎಲ್ಲರಿಗೂ ನೀರು ಒದಗಿಸುವ ಸಲುವಾಗಿ ನಾಲ್ಕು ಕೊಳವೆ ಬಾವಿಗಳನ್ನು ಸರ್ಕಾರದ ವತಿಯಿಂದ ಕೊರೆಸಿದ್ದೇನೆ. ಆದರೆ ಚುನಾವಣೆ ನಂತರ ಇಂತಹ ಘಟನೆಗಳು ಏಕೆ ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಸಚಿವರಾದ ಬ್ರಿಜೇಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಆದಾಗ್ಯೂ, ಸಚಿವರ ಹೇಳಿಕೆಯನ್ನು ಹಲವಾರು ಗ್ರಾಮಸ್ಥರು ಒಪ್ಪುವುದಿಲ್ಲ. ಕೆಲವು ಗ್ರಾಮದ ಮುಖಂಡರು ಗ್ರಾಮಸ್ಥರನ್ನು ಬಿಜೆಪಿಗೆ ಮತ ಹಾಕಿದ್ದಾರೋ ಇಲ್ಲವೋ ಎಂದು ಕೇಳಿ ಅವರು ವಾಸವಾಗಿರುವ ಪ್ರದೇಶಗಳಿಗೆ ಕೊಳವೆ ಬಾವಿಯ ಮೋಟರ್‌ ಬಂದ್‌ ಮಾಡಿಸಿದ್ದಾರೆ ಎಂದು ಹೇಳುತ್ತಾರೆ.

“ಮತದಾನದ ನಂತರ ಬಿಜೆಪಿ ಮುಖಂಡರು ಕೊಳವೆ ಬಾವಿ ಮೋಟರ್‌ಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಕೇವಲ ಕಾಟಾಚಾರಕ್ಕೆಂದು ಸಾರ್ವಜನಿಕರಿಗೆ ಅನುಕೂಲವಾಗದ ರಾತ್ರಿ ವೇಳೆ ಸ್ವಿಚ್‌ ಆನ್‌ ಮಾಡುತ್ತಾರೆ” ಎಂದು ಅದೇ ಗ್ರಾಮದ ಮಹಿಳೆಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ನಯಖೇಡಾ ಗ್ರಾಮದ ಇತರೆ ನಿವಾಸಿಗಳು ಕೂಡ ಬಿಜೆಪಿಗೆ ಮತ ಹಾಕದಿದ್ದರೆ ನೀರು ಬಿಡುವುದಿಲ್ಲ ಎಂದು ದೂರಿದ್ದಾರೆ.

ಈ ಘಟನೆಯ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಈ ವರದಿಯ ಕುರಿತು ಸುದ್ದಿ ಕ್ಲಿಪ್ಪಿಂಗ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು, “ಬಿಜೆಪಿಯ ಡಬಲ್ ಎಂಜಿನ್‌ನ ನಕಲಿ ಭರವಸೆಗಳು ಸುಳ್ಳಿನ ಗದ್ದಲದಲ್ಲಿ ಅಡಗಿಕೊಂಡಿವೆ. ಬಿಜೆಪಿಯ ಕ್ರೌರ್ಯದ ಪರಮಾವಧಿ ನೋಡಿ, ಮತ ಹಾಕದವರನ್ನು ನೀರಿಲ್ಲದೆ ಕೊಲ್ಲಲು ಮುಂದಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“18 ವರ್ಷಗಳ ನಂತರ ದುಷ್ಕೃತ್ಯಗಳ ಎಲ್ಲ ಮಿತಿಗಳನ್ನು ದಾಟಿದ ಬಿಜೆಪಿಗೆ ಇನ್ನೂ ಸಮಾಧಾನವಾಗಿಲ್ಲ. ಭ್ರಷ್ಟಾಚಾರ, ದುರಾಡಳಿತ ಮತ್ತು ದೌರ್ಜನ್ಯಗಳಿಗೆ ಮಧ್ಯಪ್ರದೇಶದ ಜನರು ತಮ್ಮ ಉತ್ತರವನ್ನು ಮತಪೆಟ್ಟಿಗೆಯಲ್ಲಿ ನೀಡಿದ್ದಾರೆ!” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ರಾಜ್ಯದ ಚುನಾವಣಾ ಕದನವು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹೋರಾಟವೆಂದು ಪರಿಗಣಿಸಲ್ಪಟ್ಟಿದೆ. 2018 ರ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರವನ್ನು ಸದ್ಯ ಬಿಜೆಪಿಯಲ್ಲಿ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದ ಬಣ ಬಂಡಾಯವೆದ್ದು ಸರ್ಕಾರವನ್ನು ಉರುಳಿಸಿತ್ತು. ಡಿ.3ರಂದು ಫಲಿತಾಂಶ ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...