ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ: ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್

Date:

ಪೋಷಣ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ಯಾವುದಾದರೂ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ಪರಿಗಣಿಸುತ್ತಿದೆಯೇ ಎನ್ನುವ ಪ್ರಶ್ನೆ ಶುಕ್ರವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿತು.

ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್, “ಪೋಷಣ್ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಕೇಂದ್ರ ಸರಕಾರದ ಮುಂದಿಲ್ಲ” ಎಂದು ಹೇಳಿದರು.

“ಅಂಗನವಾಡಿ ಕಾರ್ಯಕರ್ತೆಯರು ಗೌರವ ಕಾರ್ಯಕರ್ತೆಯರಾಗಿದ್ದು, ಅವರು ತಮ್ಮ ಸ್ಥಳೀಯ ಸಮುದಾಯಗಳಲ್ಲಿನ ಮಕ್ಕಳ ಆರೈಕೆ ಮತ್ತು ಅಭಿವೃದ್ಧಿಗಾಗಿ ಸ್ವಯಂಸೇವಕಿಯರಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಗನವಾಡಿ ಕಾರ್ಯಕರ್ತೆಯರ ಸ್ವಯಂಸೇವೆಗಾಗಿ ಅವರಿಗೆ ಗೌರವ ಧನ ನೀಡಲಾಗುತ್ತಿದ್ದು, ಈ ಗೌರವ ಧನವನ್ನು ಕೊನೆಯದಾಗಿ ಅಕ್ಟೋಬರ್ 1, 2018ರಂದು ಪರಿಷ್ಕರಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲಾಗುತ್ತಿದ್ದು, 2018ರ ಅಕ್ಟೋಬರ್ 1ರಂದು ಪರಿಷ್ಕರಿಸಲಾಗಿತ್ತು. ಪ್ರಸ್ತುತ ಸಾಮಾನ್ಯ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹4,500 ಮತ್ತು ಮಿನಿ ಅಂಗನವಾಡಿ ಕಾರ್ಯತಕರ್ತೆಯರಿಗೆ ₹3,500 ಮತ್ತು ಸಹಾಯಕಿಯರಿಗೆ 2,250 ವೇತನವಿದೆ. ಜೊತೆಗೆ ಕಾರ್ಯಕ್ಷಮತೆ ಆಧಾರಿಸಿ ಕಾರ್ಯಕರ್ತೆಯರಿಗೆ ₹500 ಮತ್ತು ಸಹಾಯಕಿಯರಿಗೆ ₹250 ಪ್ರೋತ್ಸಾಹಧನ ನೀಡಲಾಗುತ್ತಿದೆ” ಎಂದು ವಿವರಿಸಿದ್ದಾರೆ.

ಏನಿದು ಪೋಷಣ್ ಯೋಜನೆ

ಪೋಷಣ್ ಯೋಜನೆ ಎಂದರೆ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮತ್ತು ಅವರ ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಒಂದು ಯೋಜನೆ. ಇದನ್ನು ಪೋಷಣ್ ಅಭಿಯಾನ ಅಥವಾ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಎಂದೂ ಕರೆಯುತ್ತಾರೆ.

ಈ ಯೋಜನೆಯು ಮುಖ್ಯವಾಗಿ ಹದಿಹರೆಯದ ಹುಡುಗಿಯರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು 0-6 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೇಂದ್ರೀಕರಿಸುತ್ತದೆ. ಈ ಯೋಜನೆಯಡಿ, ಬಿಸಿ ಊಟದ ವ್ಯವಸ್ಥೆ, ಪೌಷ್ಟಿಕಾಂಶದ ಆಹಾರದ ಪೂರೈಕೆ ಮತ್ತು ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಎಂದರೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಅಡಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಯಕರ್ತೆಯರು. 6 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಆರೋಗ್ಯ ಮತ್ತು ಪೌಷ್ಟಿಕಾಂಶ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...