ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

Date:

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸೋಮವಾರ ತೀರ್ಪು ನೀಡಿದ್ದು, ಕೇಂದ್ರ ಮಾಹಿತಿ ಆಯುಕ್ತರು ಪದವಿ ವಿವರಗಳನ್ನು ಬಹಿರಂಗಪಡಿಸಲು ನಿರ್ದೇಶಿಸಿದ್ದ ಆದೇಶವನ್ನು ರದ್ದುಗೊಳಿಸಿದೆ.

2016ರಲ್ಲಿ ಸಿಐಸಿ, 1978ರ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡುವಂತೆ ಆದೇಶಿಸಿತ್ತು. ಈ ವರ್ಷದಲ್ಲಿ ಪ್ರಧಾನಮಂತ್ರಿ ಮೋದಿಯವರು ಕೂಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶವನ್ನು ದೆಹಲಿ ವಿಶ್ವವಿದ್ಯಾಲಯವು ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. 2017ರ ಜನವರಿಯಲ್ಲಿ ನಡೆದ ಮೊದಲ ವಿಚಾರಣೆಯಲ್ಲೇ ಕೋರ್ಟ್ ಈ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

ವಿಚಾರಣೆಯ ಸಂದರ್ಭದಲ್ಲಿ ದೆಹಲಿ ವಿಶ್ವವಿದ್ಯಾಲಯದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಗೌಪ್ಯತೆಯ ಹಕ್ಕು ತಿಳಿದುಕೊಳ್ಳುವ ಹಕ್ಕಿಗಿಂತ ಮೇಲುಗೈಯಾಗಿದೆ ಎಂದು ವಾದಿಸಿದರು. “ವಿದ್ಯಾರ್ಥಿಗಳ ಮಾಹಿತಿಯನ್ನು ವಿಶ್ವವಿದ್ಯಾಲಯವು ಗೌಪ್ಯವಾಗಿ ಇರಿಸುವ ಜವಾಬ್ದಾರಿಯನ್ನು ಹೊಂದಿದೆ. ಕೇವಲ ಕುತೂಹಲದಿಂದ ಮಾಹಿತಿಯನ್ನು ಬಹಿರಂಗಪಡಿಸುವುದು ಆರ್‌ಟಿಐ ಕಾಯ್ದೆಯ ಉದ್ದೇಶವಲ್ಲ” ಎಂದು ಅವರು ಹೇಳಿದರು. ವಿಶ್ವವಿದ್ಯಾಲಯವು ಪ್ರಧಾನಿಯವರ ಪದವಿ ದಾಖಲೆಗಳನ್ನು ಕೋರ್ಟ್‌ಗೆ ನೀಡಲು ಸಿದ್ಧವಿತ್ತಾದರೂ, ಆರ್‌ಟಿಐ ಕಾಯ್ದೆಯಡಿ ಅಪರಿಚಿತರಿಗೆ ಪರಿಶೀಲನೆಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಆರ್‌ಟಿಐ ಅರ್ಜಿದಾರ ನೀರಜ್ ಶರ್ಮಾ ಅವರ ಪರ ವಾದಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ, ಸಿಐಸಿಯ ಆದೇಶವನ್ನು ಸಮರ್ಥಿಸಿಕೊಂಡರು. “ಪ್ರಧಾನಮಂತ್ರಿಯ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸುವುದು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಆರ್‌ಟಿಐ ಕಾಯ್ದೆಯಡಿ ಸಮಂಜಸವಾಗಿದೆ. ಯಾವುದೇ ವಿಶ್ವವಿದ್ಯಾಲಯವು ಇಂತಹ ಮಾಹಿತಿಯನ್ನು ಸಾಮಾನ್ಯವಾಗಿ ಪತ್ರಿಕೆಗಳಲ್ಲಿ, ವೆಬ್‌ಸೈಟ್‌ನಲ್ಲಿ ಅಥವಾ ಸೂಚನಾ ಫಲಕದಲ್ಲಿ ಪ್ರಕಟಿಸುತ್ತದೆ” ಎಂದು ಅವರು ವಾದಿಸಿದರು.

ನ್ಯಾಯಮೂರ್ತಿ ಸಚಿನ್ ದತ್ತ ಅವರು ವಿಶ್ವವಿದ್ಯಾಲಯದ ಮನವಿಯನ್ನು ಒಪ್ಪಿಕೊಂಡು, ಸಿಐಸಿಯ ಆದೇಶವನ್ನು ರದ್ದುಗೊಳಿಸಿದರು. ಪ್ರಧಾನಮಂತ್ರಿ ಮೋದಿಯವರ ಶೈಕ್ಷಣಿಕ ದಾಖಲೆಗಳು ರಾಜಕೀಯ ವಿವಾದದ ಕೇಂದ್ರಬಿಂದುವಾಗಿವೆ. ವಿಶೇಷವಾಗಿ ಎಎಪಿ ನೇತೃತ್ವದ ವಿರೋಧ ಪಕ್ಷಗಳು ಅವರ ಪದವಿಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...