ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು: ಆರ್‌ಬಿಐ ಆದೇಶ

Date:

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದೆ. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶಿಸಿದೆ.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಆರ್‌ಬಿಐ “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರೆದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಕ್ರಮ ಕೈಗೊಂಡಿರುವುದನ್ನು” ಉಲ್ಲೇಖಿಸಲಾಗಿದೆ. ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

ಬಡ್ಡಿ ಭತ್ಯೆ, ಕ್ಯಾಶ್‌ಬ್ಯಾಕ್ ಅಥವಾ ಮರುಪಾವತಿ ಪಡೆಯುವ ಸೇವೆಗಳನ್ನು ಒಳಗೊಂಡು ಲಭ್ಯವಿರುವ ಬಾಕಿಯನ್ನು ಬಳಸಲು ಬಳಕೆದಾರರಿಗೆ ವಿನಾಯಿತಿ ನೀಡಲಾಗಿದೆ.

ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.

ಆರ್‌ಬಿಐ ಆದೇಶದ ಬಗ್ಗೆ ಪೇಟಿಎಂ ಮಾತೃಸಂಸ್ಥೆ ಒನ್‌97 ಕಮ್ಯೂನಿಕೇಷನ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...