ಮೇ 5ರ ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

Date:

ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14 ರ ಅಡಿಯಲ್ಲಿ ಕೇಂದ್ರ ಸರಕಾರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ಮುಸ್ಲಿಮೇತರರ ನೇಮಕಾತಿಗಳನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ಮೆಹ್ತಾ ಕೇಂದ್ರ ಸರಕಾರ ಈ ಕುರಿತು 7 ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅವಧಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ಇದೇ ವೇಳೆ ಭರವಸೆ ನೀಡಿದರು.

ಈಗಾಗಲೇ ನೋಡಿಫೈ ಮಾಡಿದ ಅಥವಾ ನೋಂದಾಯಿಸಲಾದ, ಹಾಗೂ ದೀರ್ಘ ಕಾಲದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಬಳಸುತ್ತಿರುವ (ವಕ್ಫ್‌ ಬೈ ಯೂಸರ್‌) ಆಸ್ತಿಗಳನ್ನು ಒಳಗೊಂಡಂತೆ ಯಾವುದೇ ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡುವಂತಿಲ್ಲ. ಜಿಲ್ಲಾಧಿಕಾರಿಗಳು ಅವುಗಳ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು 1995 ರ ವಕ್ಫ್ ಕಾಯ್ದೆಗೆ 2025 ರಲ್ಲಿ ಮಾಡಲಾದ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳನ್ನು ಸತತ ಎರಡನೇ ದಿನವೂ ವಿಚಾರಣೆ ನಡೆಸಿತು.

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಹಲವಾರು ನಿಬಂಧನೆಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕೆಲವು ಷರತ್ತುಗಳು ಸಾಂವಿಧಾನಿಕ ಪರಿಶೀಲನೆಗೆ ಒಳಗಾಗಬಹುದು ಎಂಬ ಸುಳಿವನ್ನು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...