ದಟ್ಟ ಮಂಜಿನ ನಡುವೆ ಸಹಾಯಕ್ಕಾಗಿ ಕೂಗುತ್ತಾ ಕಂದಕದಲ್ಲಿ ಮುಳುಗಿದ ಯುವಕ

Date:

ಉತ್ತರ ಪ್ರದೇಶದ ನೋಯ್ಡಾದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಕಾರು ಚರಂಡಿಯ ಗೋಡೆಗೆ ಡಿಕ್ಕಿಹೊಡೆದು ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ. ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ ರಾತ್ರಿ ನೋಯ್ಡಾದ ಸೆಕ್ಟರ್ 150 ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನು ಯುವರಾಜ್ ಮೆಹ್ತಾ ಎಂದು ಗುರುತಿಸಲಾಗಿದೆ.

ಮೆಹ್ತಾ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ದಟ್ಟವಾದ ಮಂಜು ಆವರಿಸಿದ್ದರಿಂದ ಮತ್ತು ರಸ್ತೆಯಲ್ಲಿ ಪ್ರತಿಫಲಕಗಳು ಇಲ್ಲದ ಕಾರಣ, ಅವರ ಕಾರು ಚರಂಡಿಯ ಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ, ನೀರು ತುಂಬಿದ್ದ 70 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಕಂದಕಕ್ಕೆ ಬಿದ್ದ ಮೆಹ್ತಾ ಅವರು ಸಹಾಯಕ್ಕಾಗಿ ಕಿರುಚಿಕೊಂಡಿದ್ದಾರೆ. ಅವರ ಕಿರುಚಾಟವನ್ನು ಕೇಳಿದ ದಾರಿಹೋಕರು ಸಹಾಯ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಸಂಪೂರ್ಣವಾಗಿ ಮುಳುಗಿಹೋಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿನೊಳಗಿದ್ದ ಮೆಹ್ತಾ ಅವರು ಕೊನೆಯ ಕ್ಷಣದಲ್ಲಿಯೂ ತನ್ನ ತಂದೆ ರಾಜ್‌ಕುಮಾರ್ ಮೆಹ್ತಾ ಅವರಿಗೆ ಕರೆ ಮಾಡಿ, “ಅಪ್ಪಾ, ನಾನು ನೀರು ತುಂಬಿದ ಆಳವಾದ ಗುಂಡಿಗೆ ಬಿದ್ದಿದ್ದೇನೆ. ನಾನು ಮುಳುಗುತ್ತಿದ್ದೇನೆ. ದಯವಿಟ್ಟು ಬಂದು ನನ್ನನ್ನು ಉಳಿಸಿ” ಎಂದು ಕೇಳಿಕೊಂಡಿದ್ದಾಗಿ ವರದಿಯಾಗಿದೆ.

ಕಾರು ಕಂದಕಕ್ಕೆ ಬಿದ್ದ ಕೆಲವೇ ನಿಮಿಷಗಳಲ್ಲಿ, ಸ್ಥಳೀಯ ಪೊಲೀಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಸುಮಾರು ಐದು ಗಂಟೆಗಳ ಕಾರ್ಯಾಚರಣೆಯ ಬಳಿಕ, ಕಾರನ್ನು ಕಂದಕದಿಂದ ಹೊರತೆಗೆಯಲಾಗಿದೆ. ಆದರೆ, ಆ ವೇಳೆಗಾಗಲೇ, ಮೆಹ್ತಾ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಈ ಲೇಖನ ಓದಿದ್ದೀರಾ?: ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಬೆಳಗಾವಿಗೆ ಸಿಕ್ಕಿದ್ದೆಷ್ಟು?

ಘಟನೆಯ ನಂತರ, ಮೆಹ್ತಾ ಅವರ ಕುಟುಂಬವು ದೂರು ದಾಖಲಿಸಿದೆ. ಅಧಿಕಾರಿಗಳು ಸರ್ವಿಸ್ ರಸ್ತೆಯ ಉದ್ದಕ್ಕೂ ಪ್ರತಿಫಲಕಗಳನ್ನು ಅಳವಡಿಸಿಲ್ಲ ಅಥವಾ ಚರಂಡಿಗಳನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ. ದಟ್ಟವಾದ ಮಂಜಿನ ನಡುವೆ ರಸ್ತೆಯ ಉದ್ದಕ್ಕೂ ಪ್ರತಿಫಲಕಗಳು ಇಲ್ಲದಿರುವುದು ಅಪಘಾತಕ್ಕೆ ಕಾರಣವೆಂದು ದೂರಿದ್ದಾರೆ.

ರಸ್ತೆ ನಿರ್ವಹಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೂ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯ ಉಸ್ತುವಾರಿ ಸರ್ವೇಶ್ ಕುಮಾರ್ ಹೇಳಿದ್ದಾರೆ.

ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಕೆಲವು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಸರ್ವಿಸ್ ರಸ್ತೆಯಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಪದೇ ಪದೇ ಒತ್ತಾಯಿಸಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ಅಧಿಕಾರಿಗಳು ಆಳವಾದ ಕಂದಕವನ್ನು ಕಸ ಮತ್ತು ಅವಶೇಷಗಳಿಂದ ಮುಚ್ಚಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...