ಮೊಬೈಲ್‌ ಕೊಡದೆ ಕಟ್ಟುನಿಟ್ಟು ಮಾಡಿದ್ದಕ್ಕೆ ತಾಯಿಯನ್ನೇ ಕೊಲ್ಲಲು ಹೊರಟ ಮಗಳು!

Date:

ಮೊಬೈಲ್‌ನಲ್ಲಿ ಹೆಚ್ಚು ಆಡವಾಡುವ, ಅದನ್ನು ಗೀಳಾಗಿಸಿಕೊಂಡಿರುವ ಮಕ್ಕಳನ್ನು ನೋಡಿರುತ್ತೇವೆ. ಒಂದು ವೇಳೆ ಮೊಬೈಲ್‌ ನೀಡದಿದ್ದರೆ, ಕೊಡಿಸದಿದ್ದರೆ ಮುನಿಸಿಕೊಳ್ಳುವುದು ಅಥವಾ ಹಠ ಮಾಡುವುದನ್ನು ನೋಡಿರುತ್ತೇವೆ. ಕೆಲವರಂತೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಓದಿರುತ್ತೇವೆ. ಆದರೆ ಈ ಘಟನೆ ಮಾತ್ರ ಇನ್ನೂ ವಿಚಿತ್ರವಾಗಿದೆ. ಮೊಬೈಲ್‌ ಕೊಡದೆ ಕಟ್ಟುನಿಟ್ಟು ಮಾಡಿದ ಹೆತ್ತ ತಾಯಿಯನ್ನೇ ಕೊಲ್ಲಲು ಪ್ರಯತ್ನಿಸಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ 13 ವರ್ಷದ ಬಾಲಕಿ ಇಡೀ ದಿನ ಮೊಬೈಲಿನಲ್ಲೇ ಮುಳುಗಿರುತ್ತಿದ್ದಳು. ಸ್ನೇಹಿತರೊಟ್ಟಿಗೆ ಚಾಟ್‌ ಮಾಡೋದು, ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್‌ ನೋಡೋದು. ಹೀಗೆ ದಿನವಿಡಿ ಮೊಬೈಲ್‌ ಫೋನಿನಲ್ಲೇ ನಿರತವಾಗಿದ್ದ ಬಾಲಕಿ, ಓದುತ್ತಿರಲಿಲ್ಲ. ಇದನ್ನು ಗಮನಿಸಿದ ತಾಯಿ ಕೆಲವು ದಿನಗಳ ಹಿಂದೆ ಬಾಲಕಿಯ ಬಳಿ ಇದ್ದ ಮೊಬೈಲ್ ಫೋನ್ ಕಿತ್ತುಕೊಂಡು ವಾಪಸ್ ಕೊಡುವುದಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಝೀ ಸಂಸ್ಥೆಯ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸಲು ಸೆಬಿ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಕೆಲ ದಿನಗಳಲ್ಲಿ ಮನೆಯಲ್ಲಿ ವಿಚಿತ್ರ ಘಟನೆಗಳು ನಡೆಯಲು ಶುರುವಾದವು. ಸಕ್ಕರೆ ಡಬ್ಬದಲ್ಲಿ ಕೀಟನಾಶಕದ ಪುಡಿ ಸಿಗುತ್ತಿತ್ತು. ಬಚ್ಚಲು ಮನೆಯಲ್ಲಿ ಫೆನಾಯಿಲ್ ಸುರಿದ ದ್ರವ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಗಾಬರಿಯಾದ ಪೋಷಕರು ಸಮಸ್ಯೆಗೆ ಏನು ಕಾರಣವೆಂದು ಅಭಯಂ ಎಂಬ ಆಪ್ತ ಸಮಾಲೋಚನಾ ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಪೋಷಕರ ಮನವಿಯ ಮೇರೆಗೆ ಆಗಮಿಸಿದ ಸಹಾಯವಾಣಿ ಸಿಬ್ಬಂದಿ ಹಾಗೂ ಮನಃಶಾಸ್ತ್ರಜ್ಞರು ಮನೆಯವರ ನಂತರ ಬಾಲಕಿಯನ್ನು ಕೌನ್ಸೆಲಿಂಗ್ ನಡೆಸಿದಾಗ ಶಾಕಿಂಗ್ ಸಂಗತಿ ಹೊರಬಿದ್ದಿದೆ. ತನಗೆ ಮೊಬೈಲ್‌ ನೀಡದ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಲು ಈ ರೀತಿಯಲ್ಲಿ ಸಂಚು ಮಾಡಿರುವುದಾಗಿ ಮಗಳು ಆಪ್ತ ಸಮಾಲೋಚನಾ ಸಿಬ್ಬಂದಿಗೆ ಬಾಯಿ ಬಿಟ್ಟಿದ್ದಾಳೆ. ಸದ್ಯ ಸಮಾಲೋಚನಾ ಸಿಬ್ಬಂದಿ ಬಾಲಕಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

2022ರಲ್ಲಿ ಲಖನೌದಲ್ಲಿ ನಡೆದ ಇದೇ ರೀತಿಯ ಪ್ರಕರಣದಲ್ಲಿ 16 ವರ್ಷದ ಬಾಲಕನೊಬ್ಬ ಮೊಬೈಲ್ ಗೇಮ್‌ಗಳನ್ನು ಆಡಲು ಬಿಡಲಿಲ್ಲ ಎಂಬ ಕಾರಣಕ್ಕೆ ತನ್ನ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಶವವನ್ನು ಮುಚ್ಚಿಟ್ಟಿದ್ದ. ತಾಯಿಯ ಮೃತದೇಹ ಕೊಳೆತು ದುರ್ವಾಸನೆ ಬರಲಾರಂಭಿಸಿದಾಗ ಬಾಲಕ ಸುಳ್ಳು ಕಥೆ ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ ನಂತರ ಸತ್ಯ ಬಯಲಿಗೆ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...