‘ನಾಪತ್ತೆಯಾಗಿರಲಿಲ್ಲ, ನಾವು ಇಲ್ಲಿಯೇ ಇದ್ದೇವೆ’: ಕೇಂದ್ರ ಚುನಾವಣಾ ಆಯುಕ್ತ

Date:

‘ಸಂಭಾವಿತನೊಬ್ಬ ನಾಪತ್ತೆಯಾಗಿದ್ದ’ ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್‌ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ.

ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್, ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮನ್ನು ‘ಲಾಪಟಾ ಜಂಟಲ್‌ಮೆನ್‌’(ಸಂಭಾವಿತನೊಬ್ಬ ನಾಪತ್ತೆಯಾಗಿದ್ದ)ಎಂದು ಕರೆದು ಟ್ರೋಲ್‌ ಮಾಡಲಾಗಿತ್ತು. ಆದರೆ ನಾವು ನಾಪತ್ತೆಯಾಗಿರಲಿಲ್ಲ. ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದರು.

31.2 ಕೋಟಿ ಮಹಿಳೆಯರು ಸೇರಿ ಒಟ್ಟು 64.2 ಕೋಟಿ ಮಂದಿ ಭಾರತೀಯರು ಮತ ಚಲಾಯಿಸಿದ್ದಾರೆ. 68 ಸಾವಿರ ಮೇಲ್ವಿಚಾರಣ ತಂಡಗಳು ಹಾಗೂ 1.5 ಕೋಟಿ ಭದ್ರತಾ ಹಾಗೂ ಚುನಾವಣಾ ಅಧಿಕಾರಿಗಳು ವಿಶ್ವದ ಅತೀ ದೊಡ್ಡ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಆಯೋಗವು 39 ಮರು ಚುನಾವಣೆಗಳನ್ನು ನಡೆಸಿದೆ. 2019ರಲ್ಲಿ 540 ಮರು ಚುನಾವಣೆಗಳನ್ನು ನಡೆಸಲಾಗಿತ್ತು ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಸಿಲಿನ ಶಾಖದಿಂದ 33 ಚುನಾವಣಾ ಅಧಿಕಾರಿಗಳು ಮೃತಪಟ್ಟ ಕಾರಣ ಮುಂದಿನ ಲೋಕಸಭಾ ಚುನಾವಣೆಯನ್ನು ಏಪ್ರಿಲ್‌ ಅಂತ್ಯದ ವೇಳೆಗೆ ನಡೆಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ಒಟ್ಟಾರೆ ಮತದಾನ ಪ್ರಕ್ರಿಯೆಯು ಸಂಪೂರ್ಣ ಹುರುಪಿನಿಂದ ಕೂಡಿತ್ತು. ಎಲ್ಲ ಪಕ್ಷಗಳ ನಿಯೋಗಗಳು ತಮ್ಮ ಸಮಸ್ಯೆಗಳನ್ನು ದಾಖಲಿಸಿವೆ ಎಂದು ರಾಜೀವ್‌ ಕುಮಾರ್‌ ತಿಳಿಸಿದರು.

ಭಾರತೀಯ ಚುನಾವಣಾ ವ್ಯವಸ್ಥೆಯು ಚುನಾವಣೋತ್ತರ ಪರಿಶೀಲನೆಯನ್ನು ಅನುಮತಿಸುತ್ತದೆ. ಆದಾಗ್ಯೂ ಮತದಾರರ ಪಟ್ಟಿ ಹಾಗೂ ಚುನಾವಣಾ ಅಂಕಿಅಂಶಗಳ ಬಗ್ಗೆ ಕೆಲವರು ಸುಳ್ಳು ಮಾಹಿತಿಗಳನ್ನು ನೀಡಿದರು.

“ವ್ಯಸ್ಥೆಯಲ್ಲಿ ಒಂದು ಮಾದರಿಯಿದೆ, ಒಂದು ರಚನೆಯಿದೆ. ಆದರೆ ಟೂಲ್‌ಕಿಟ್‌ ಇದೆ ಎಂದು ನಾನು ಹೇಳುವುದಿಲ್ಲ.ನಾವು ಚುನಾವಣಾ ಅಂಕಿಅಂಶಗಳನ್ನು ಪ್ರಕಟಿಸಲು ತಡ ಮಾಡಲಿಲ್ಲ ಅಥವಾ ಅಂಕಿಅಂಶವನ್ನು ಬದಲಾಯಿಸಲಿಲ್ಲ.ಈಗಲೂ ಅಕ್ರಮ ಮತದಾರರ ಪಟ್ಟಿಗ ಬಗ್ಗೆ ಅಥವಾ 150 ಜಿಲ್ಲಾಧಿಕಾರಿಗಳಿಗೆ ಕರೆ ಮಾಡಲಾಗಿದೆ ಎಂದು ಮಾತನಾಡುತ್ತಿದ್ದಾರೆ. ಸುಳ್ಳು ವದಂತಿಯನ್ನು ಸರಿಪಡಿಸಲು ನಾವು ಹೋರಾಡುವುದು ಅಗತ್ಯವಾಗಿದೆ” ಎಂದು ರಾಜೀವ್‌ ಕುಮಾರ್‌ ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ 495 ದೂರುಗಳನ್ನು ಪರಿಹರಿಸಲಾಗಿದೆ. ಡೀಫ್‌ ಪೇಕ್‌ ಹಾಗೂ ಎಐ ನಿರ್ಮಿತ ಕೃತಕ ವಿಷಯಗಳ ಬೆದರಿಕೆಗಳನ್ನು ಚುನಾವಣಾ ಆಯೋಗವು ಯಶಸ್ವಿಯಾಗಿ ನಿಯಂತ್ರಿಸಿದೆ ಎಂದು ಆಯುಕ್ತರು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...