ನೋಟು ಬ್ಯಾನ್ ಕುರಿತು ಕಾನೂನಾತ್ಮಕ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ; ಕೇಂದ್ರದ ವಿರುದ್ಧ ನ್ಯಾ. ನಾಗರತ್ನ ಅಸಮಾಧಾನ

Date:

“ನೋಟುಗಳನ್ನು ಹಿಂಪಡೆದ ವೇಳೆ, ಜನಸಾಮಾನ್ಯರು ಅನುಭವಿಸಿದ ಕಷ್ಟ ಕಾರ್ಪಣ್ಯಗಳ ಬಗ್ಗೆ ನಾನು ಚಿಂತಿತಳಾಗಿದ್ದೆ. ನೋಟ್‌ ಬ್ಯಾನ್‌ ಅನ್ನು ತರಾತುರಿಯಲ್ಲಿ ಮಾಡಲಾಗಿದೆ. ಕಾನೂನಿಗೆ ಅನುಸಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ. ಅಲ್ಲದೇ, ಈ ಬಗ್ಗೆ ಸ್ವತಃ ಹಣಕಾಸು ಸಚಿವರಿಗೂ ತಿಳಿದಿರಲಿಲ್ಲ ಎಂದು ಕೆಲವರು ಹೇಳುತ್ತಾರೆ” ಎಂದು ನೋಟು ಅಮಾನ್ಯೀಕರಣ ವಿಚಾರದಲ್ಲಿ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನಾಗರತ್ನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯ ಆಯೋಜಿಸಿದ್ದ ನ್ಯಾಯಾಲಯಗಳು ಮತ್ತು ಸಂವಿಧಾನ ಸಮ್ಮೇಳನ 2024ನ್ನು ಉದ್ದೇಶಿಸಿ ಮಾತನಾಡಿದ ಅವರು, “ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ. ಸಾಯಂಕಾಲ ನೋಟು ಬ್ಯಾನ್‌ ಮಾಡುವ ಬಗ್ಗೆ ಮಾತನಾಡಿ ಮರುದಿನ ಬ್ಯಾನ್ ಮಾಡಲಾಗಿದೆ. ಪೇಪರ್ ಕರೆನ್ಸಿಯಿಂದ ಪ್ಲಾಸ್ಟಿಕ್ ಕರೆನ್ಸಿಗೆ ಹೋಗಲು ಬಯಸಿದರೆ, ಖಂಡಿತವಾಗಿ, ನೋಟು ಬ್ಯಾನ್‌ ಅದಕ್ಕೆ ಕಾರಣವಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

“2016ರ ನವೆಂಬರ್ 8ರಂದು ಏನಾಯಿತು. ಆಗ ₹500 ಮತ್ತು ₹1000 ನೋಟುಗಳನ್ನು ಬ್ಯಾನ್ ಮಾಡಿದಾಗ ಏನಾಯಿತು ಎಂಬ ಬಗ್ಗೆ ಎಲ್ಲರಿಗೂ ತಿಳಿದಿದೆ. ಇದರಲ್ಲಿ ಕುತೂಹಲಕಾರಿ ಅಂಶವೆಂದರೆ, ಆ ಕಾಲದ ಭಾರತೀಯ ಆರ್ಥಿಕತೆಯಲ್ಲಿ 86% ಕರೆನ್ಸಿಯು ₹500 ಮತ್ತು ₹1,000 ನೋಟು ಒಳಗೊಂಡಿತ್ತು. ಕೇಂದ್ರ ಸರ್ಕಾರ ಇದನ್ನು ಗಮನಿಸದೇ ಹೋಯಿತು ಎಂದು ನನಗೆ ಅನಿಸುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆರ್ಥಿಕತೆಯ 86% ರಷ್ಟು ಕರೆನ್ಸಿಯೂ ₹500 ಮತ್ತು ₹1000 ನೋಟುಗಳಾಗಿದ್ದವು. ಆ ದಿನಗಳಲ್ಲಿ ಕಾರ್ಮಿಕನೊಬ್ಬ ತನ್ನ ದೈನಂದಿನ ಅಗತ್ಯಗಳಿಗಾಗಿ ಈ ನೋಟುಗಳನ್ನು ಬದಲಿಸಿಕೊಳ್ಳಬೇಕಾದ ಪರಿಸ್ಥಿತಿ ಇತ್ತು. ಈ ಬಗ್ಗೆ ಒಮ್ಮೆ ಊಹಿಸಿ. ಅಲ್ಲದೆ, ಶೇ. 98ರಷ್ಟು ನೋಟುಗಳು ಮರಳಿ ಆರ್‌ಬಿಐಗೆ ಬಂದಿವೆ. ಹಾಗಾದರೆ ನೋಟು ಅಮಾನ್ಯೀಕರಣದ ಉದ್ದೇಶವಾಗಿದ್ದ ಕಪ್ಪು ಹಣ ನಿರ್ಮೂಲನೆ ವಿಚಾರದಲ್ಲಿ ನಾವು ಎಲ್ಲಿದ್ದೇವೆ? ನೋಟು ರದ್ದತಿಯ ಗುರಿ ಏನು” ಎಂದು ಪ್ರಶ್ನಿಸಿದರು.

“ಕಪ್ಪು ಹಣವನ್ನು ಬಿಳಿ ಹಣವನ್ನಾಗಿ ಮಾಡಲು, ಲೆಕ್ಕದಲ್ಲಿಲ್ಲದ ಹಣ ವ್ಯವಸ್ಥೆಗೆ ಪ್ರವೇಶಿಸಲು ಇದು ಉತ್ತಮ ಮಾರ್ಗವಾಯಿತು ಎಂದು ಭಾವಿಸಿದೆ. ಅಲ್ಲದೇ, ಈ ಬಳಿಕ ಆದಾಯ ತೆರಿಗೆ ಪ್ರಕ್ರಿಯೆ ಸಂಬಂಧಿಸಿದಂತೆ ಏನಾಯಿತು ಎಂಬ ಬಗ್ಗೆ ಈವರೆಗೂ ತಿಳಿದಿಲ್ಲ. ಸಾಮಾನ್ಯ ಮನುಷ್ಯನ ದುಃಸ್ಥಿತಿ ನಿಜವಾಗಿಯೂ ನನ್ನನ್ನು ಚಿಂತಿತಳನ್ನಾಗಿಸಿತು. ‘ವಿವೇಕ್ ನಾರಾಯಣ ಶರ್ಮಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ’ ಭಿನ್ನ ತೀರ್ಪು ನೀಡುವಂತೆ ಮಾಡಿತು. ಆ ತೀರ್ಪು ನೀಡಿದ ಪೀಠದ ಭಾಗವಾಗಿದ್ದಕ್ಕೆ ನಾನು ಖುಷಿ ಪಡುತ್ತೇನೆ” ಎಂದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಸುಪ್ರೀಂಕೋರ್ಟ್‌ ಮತ್ತು ಇತರ ನ್ಯಾಯಾಲಯಗಳಲ್ಲಿನ ವಿಚಾರಣೆಗಳು ಕಡಿಮೆಯಾದವು ಮತ್ತು ವಿಚಾರಣೆಗಳನ್ನು ವಿಡಿಯೋ ಕಾನ್ಪರೆನ್ಸ್‌ ಮೂಲಕ ನಡೆಸಲಾಗುತ್ತಿತ್ತು. ಸಾಂಕ್ರಾಮಿಕ ರೋಗದ ನಂತರ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಯುಯು ಲಲಿತ್  ಅವರು ಎಸ್‌ಸಿಯ ಕೆಲಸವನ್ನು ಶ್ರದ್ಧೆಯಿಂದ ಮುನ್ನಡೆಸಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನಕ್ಕೆ ಬದ್ಧರಾಗಿ ರಾಜ್ಯಪಾಲರು ಕಾರ್ಯನಿರ್ವಹಿಸಬೇಕು: ಸುಪ್ರೀಂ ಕೋರ್ಟ್ ನ್ಯಾ. ನಾಗರತ್ನ

“ಅವರು ದೀರ್ಘಕಾಲ ಬಾಕಿ ಇರುವ ಪ್ರಕರಣಗಳನ್ನು ಸುಧಾರಿಸಲು ಮತ್ತು ವಿಲೇವಾರಿ ಮಾಡಲು ನಿರ್ಧರಿಸಿದರು. ಆದ್ದರಿಂದ, ಅವರು 5 ಸಂವಿಧಾನ ಪೀಠಗಳನ್ನು ಸ್ಥಾಪಿಸಿದರು. ತೀರಾ ಇತ್ತೀಚೆಗೆ ಹೈಕೋರ್ಟ್‌ಗೆ ಸೇರಿದ್ದ ನನ್ನನ್ನೂ ಒಳಗೊಂಡಂತೆ ಸುಪ್ರೀಂಕೋರ್ಟ್‌ನ ಎಲ್ಲ 30 ನ್ಯಾಯಾಧೀಶರಿಗೆ ಸಂವಿಧಾನ ಪೀಠದಲ್ಲಿ ಅವಕಾಶ ಸಿಕ್ಕಿದೆ” ಎಂದು ಹೇಳಿದ್ದಾರೆ

“ಸಾಂವಿಧಾನಿಕ ಪೀಠಗಳು ಕಾನೂನು ವ್ಯಾಪ್ತಿಗೆ ಒಳಪಡುವ 25 ದೀರ್ಘ ಬಾಕಿ ಪ್ರಕರಣಗಳನ್ನು ಕೈಗೆತ್ತಿಕೊಂಡವು. ವಿವೇಕ್ ನಾರಾಯಣ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ 2023ರ ಪ್ರಕರಣವನ್ನು ಎಲ್ಲರೂ ಓದಲೇಬೇಕು. ಇದು ನೋಟು ಅಮಾನ್ಯೀಕರಣ ಕೇಸ್ ಎಂದು ಜನಪ್ರಿಯವಾಗಿದೆ. ಆ ಪೀಠದ ಭಾಗವಾಗಲು ನನಗೆ ಸಂತೋಷವಾಗಿದೆ” ಎಂದು ಹೇಳಿದ್ದಾರೆ.

“ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸಲು ಸುಪ್ರೀಂ ಕೋರ್ಟ್ ಮುಂದಡಿ ಇಡುತ್ತಿದೆ” ಎಂದು ನ್ಯಾಯಮೂರ್ತಿ ನಾಗರತ್ನ ಅಭಿಪ್ರಾಯಪಟ್ಟರು.

“ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಂಧಿತರಾದ ವ್ಯಕ್ತಿಗಳಿಗೆ ಬಂಧನದ ಲಿಖಿತ ಕಾರಣಗಳನ್ನು ಜಾರಿ ನಿರ್ದೇಶನಾಲಯ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಈಚೆಗೆ ನೀಡಿದ ತೀರ್ಪು ಸ್ವಲ್ಪ ಬಲಹೀನವಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...