ಮೆಕ್ಸಿಕೊದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್ ಬಂಧನ

Date:

  • ಮೆಕ್ಸಿಕೊದಿಂದ ಇಸ್ತಾಂಬುಲ್ ಮೂಲಕ ದೀಪಕ್ ಬಾಕ್ಸರ್ ದೆಹಲಿಗೆ
  • ದೀಪಕ್ ಹುಡುಕಿಕೊಟ್ಟವರಿಗೆ ₹3 ಲಕ್ಷ ಘೋಷಿಸಿದ್ದ ಪೊಲೀಸ್

ಕುಖ್ಯಾತ ಹಾಗೂ ಪೊಲೀಸರಿಗೆ ಬೇಕಾಗಿದ್ದ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬುಧವಾರ (ಏಪ್ರಿಲ್ 5) ದೆಹಲಿಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ಇಬ್ಬರು ಸದಸ್ಯರ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್‌ನನ್ನು ಮೆಕ್ಸಿಕೊದಲ್ಲಿ ಬಂಧಿಸಿದೆ.

ಬಳಿಕ ಆತನನ್ನು ಬುಧವಾರ ಬೆಳಿಗ್ಗೆ ಮೆಕ್ಸಿಕೊದಿಂದ ಇಸ್ತಾಂಬುಲ್ ಮೂಲಕ ಬೆಳಿಗ್ಗೆ 6 ಗಂಟೆ ಹೊತ್ತಿಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು ಎಂದು ಪೊಲೀಸರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ದೆಹಲಿಯಲ್ಲಿ ಉದ್ಯಮಿಯೊಬ್ಬರ ಹತ್ಯೆ ಆರೋಪ ಹಾಗೂ ಆತನ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿ ಪೊಲೀಸರು ಆತನನ್ನು ವಿಚಾರಣೆ ನಡೆಸಿದರು.

ದೀಪಕ್ ಬಾಕ್ಸರ್ ಬಂಧನಕ್ಕಾಗಿ ಎಫ್‌ಬಿಐ ಸೇರಿದಂತೆ ಮೆಕ್ಸಿಕೊದ ಪೊಲೀಸರು ನಮಗೆ ಸಹಾಯ ಮಾಡಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಸಿಪಿ) ಧಲಿವಾಲ್ ಅವರು ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು.

“ದೆಹಲಿ – ಎನ್‌ಸಿಆರ್‌ ವ್ಯಾಪ್ತಿಯಲ್ಲಿ ದೀಪಕ್ ಬಾಕ್ಸರ್ ಕುಖ್ಯಾತ ಗ್ಯಾಂಗ್‌ಸ್ಟರ್ ಆಗಿ ಹೆಸರು ಮಾಡಿದ್ದಾನೆ. ಆತನಿಗಾಗಿ ದೆಹಲಿಯ ವಿಶೇಷ ತಂಡ ಹಲವು ತಿಂಗಳಿಂದ ಹುಡುಕಾಟ ನಡೆಸಿತ್ತು” ಎಂದು ಧಲಿವಾಲ್ ಮಾಹಿತಿ ನೀಡಿದರು.

ರಾಷ್ಟ್ರೀಯ ಮಟ್ಟದ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿಜೇತನಾಗಿದ್ದ ಗ್ಯಾಂಗ್‌ಸ್ಟರ್‌ ದೀಪಕ್‌ ಮೆಕ್ಸಿಕೊ ಮೂಲಕ ಅಕ್ರಮವಾಗಿ ಅಮೆರಿಕಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದನು.

ಸಿಕ್ಕಿಬೀಳುವ ಮೊದಲು ಅಲ್ಲಿಂದ ದೆಹಲಿ ಮತ್ತು ನೆರೆಯ ರಾಜ್ಯಗಳಲ್ಲಿ ತನ್ನ ಸಂಘಟಿತ ಅಪರಾಧ ತಂಡವನ್ನು ಮುನ್ನಡೆಸಲು ಯೋಜಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಭಾರತದ ಹೊರಗೆ ಗ್ಯಾಂಗ್‌ಸ್ಟರ್‌ನನ್ನು ಬಂಧಿಸಿರುವುದು ಇದೇ ಮೊದಲು. ದೀಪಕ್‌ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು ₹3 ಲಕ್ಷ ಬಹುಮಾನ ಘೋಷಿಸಿದ್ದರು.

ಈ ಸುದ್ದಿ ಓದಿದ್ದೀರಾ? ಎನ್‌ಸಿಇಆರ್‌ಟಿ ಪರಿಷ್ಕೃತ ಪಠ್ಯ | ಮೊಘಲರು, ಜಾತಿ ವ್ಯವಸ್ಥೆ ಮುಂತಾದ ಐತಿಹಾಸಿಕ ಸಂಗತಿಗಳು ಕಡಿತ

2021ರಲ್ಲಿ ಜಿತೇಂದ್ರ ಗೋಗಿ ಹತ್ಯೆಯ ನಂತರ, ದೀಪಕ್, ‘ಗೋಗಿ ಗ್ಯಾಂಗ್’ ಅನ್ನು ಪ್ರಾರಂಭಿಸಿದ್ದ. ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಜಿತೇಂದ್ರ ಗೋಗಿ ಅವರನ್ನು ಹತ್ಯೆ ಮಾಡಲಾಗಿತ್ತು.

ಕಳೆದ ಐದು ವರ್ಷಗಳಲ್ಲಿ ಕೊಲೆ ಮತ್ತು ಸುಲಿಗೆ ಸೇರಿದಂತೆ 10 ಪ್ರಮುಖ ಗಂಭೀರ ಪ್ರಕರಣಗಳಲ್ಲಿ ಗ್ಯಾಂಗ್‌ಸ್ಟರ್‌ ದೀಪಕ್‌ ಬಾಕ್ಸರ್‌ ಭಾರತಕ್ಕೆ ಬೇಕಾಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...