ಒಡಿಶಾ| ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕಾಮುಕನ ಬಂಧನ

Date:

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಘಟನೆಯು ಒಡಿಶಾದ ರಾಜಧಾನಿ ಭುವನೇಶ್ವರಲ್ಲಿ ನಡೆದಿದ್ದು ಪೊಲೀಸರು ಮಂಗಳವಾರ ಕಾಮುಕ ಯುವಕನ ಬಂಧನ ಮಾಡಿದ್ದಾರೆ.

ಆರೋಪಿ 23 ವರ್ಷದ ಸಂತೋಷ್ ಖುಂಟಿಯಾನನ್ನು ಏರ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಚಾಲಕನಾಗಿದ್ದು, ಮಗುವಿನ ಮೇಲೆ ಅತ್ಯಾಚಾರ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ. ಇನ್ನು ಮಗುವಿನ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

“ಮಗುವನ್ನು ಸೋಮವಾರ ಸಂಜೆ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಲಾಗಿತ್ತು. ಪೋಷಕರು ಇಂದು ಅಲ್ಟ್ರಾಸೌಂಡ್‌ ಮಾಡಿಸಲು ಬಂದಿದ್ದಾರೆ” ಎಂದು ಕ್ಯಾಪಿಟಲ್ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಗು ಸಂತೋಷ್ ಮನೆಗೆ ಆಟವಾಡಲು ಬಂದಿದ್ದಾಗ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ. ಆರೋಪಿ ಸಂತೋಷ್ ಖುಂಟಿಯಾ ಮದ್ಯದ ಅಮಲಿನಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ವರದಿಯಾಗಿದೆ.

ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನು ಕ್ಯಾಪಿಟಲ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನು ಓದಿದ್ದೀರಾ?  ಕಲಬುರಗಿ | ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿ ಗರ್ಭಿಣಿ : ಆಸ್ಪತ್ರೆಯಲ್ಲಿ ಸಾವು

ಈ ಬಗ್ಗೆ ಮಾಹಿತಿ ನೀಡಿರುವ ಭುವನೇಶ್ವರ ಪೊಲೀಸ್ ಉಪ ಕಮಿಷನರ್ (ಡಿಸಿಪಿ) ಪ್ರತೀಕ್ ಸಿಂಗ್, “ಸಂತ್ರಸ್ತೆಯ ಕುಟುಂಬವು ಸಂಜೆ ತಡವಾಗಿ ಮನೆಗೆ ಬಂದಿದ್ದು, ಮಗುವಿಗಾಗಿ ಹುಡುಕಾಡಿದೆ. ನಂತರ ಆರೋಪಿಯ ಮನೆಯಿಂದ ಬಾಲಕಿಯನ್ನು ರಕ್ಷಿಸಿ ಏರ್‌ಫೀಲ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳು ಪುರಿ ಜಿಲ್ಲೆಯ ಪಿಪಿಲಿ ಪ್ರದೇಶಕ್ಕೆ ತೆರಳಿರುವುದು ಪತ್ತೆಯಾಗಿದೆ. ಆದರೆ, ಸಂತೋಷ್ ಸ್ಥಳದಿಂದ ಪರಾರಿಯಾಗಿದ್ದನು. ಬಳಿಕ ಶೋಧ ಕಾರ್ಯಚರಣೆ ನಡೆಸಿ ಆರೋಪಿಯ ಬಂಧನ ಮಾಡಲಾಗಿದೆ.

“ಆರೋಪಿಯನ್ನು 24 ಗಂಟೆಗಳ ಒಳಗೆ ಬಂಧಿಸಲಾಗಿದೆ. ವಿಧಿವಿಜ್ಞಾನ ತಂಡವು ಎಲ್ಲಾ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದೆ. ಸಂತ್ರಸ್ತರಿಗೆ ವೈದ್ಯಕೀಯ ಆರೈಕೆಯನ್ನು ನೀಡಲಾಗಿದೆ. ಆರೋಪಿಗಳ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ” ಎಂದು ಪ್ರತೀಕ್ ಸಿಂಗ್ ಹೇಳಿದರು.

“ಆರೋಪಿ ಸಂತ್ರಸ್ತೆಯ ತಾಯಿಗೂ ಬೆದರಿಕೆ ಹಾಕಿದ್ದು ನಾವು ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ತನಿಖೆಗೆ ಮುಖ್ಯವಾದ ಉಡುಪುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...