ದೇವಸ್ಥಾನದಿಂದ ಕದ್ದ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ!

Date:

  • 2014ರ ಮೇ ತಿಂಗಳಿನಲ್ಲಿ ಕಳುವಾಗಿದ್ದ ಆಭರಣ
  • ಒಡಿಶಾದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ದೇವಸ್ಥಾನ

ದೇವಸ್ಥಾನದಿಂದ ಕಳವು ಮಾಡಿದ್ದ ಆಭರಣಗಳನ್ನು ʻಅನಾಮಧೇಯ ಕಳ್ಳ’ನೊಬ್ಬ 9 ವರ್ಷಗಳ ಬಳಿಕ ಹಿಂತಿರುಗಿಸಿರುವ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ರಾಜಧಾನಿ ಭುವನೇಶ್ವರದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ದೇವಸ್ಥಾನದಿಂದ 2014ರ ಮೇ ತಿಂಗಳಿನಲ್ಲಿ ಆಭರಣಗಳು ಕಳುವಾಗಿತ್ತು. ಕಿವಿಯೋಲೆ, ಬಳೆಗಳು, ಕೊಳಲು ಮತ್ತು ತಲೆಯ ಕವಚ ಸೇರಿದಂತೆ ಒಟ್ಟು ₹4 ಲಕ್ಷ ಮೌಲ್ಯದ ಬೆಳ್ಳಿಯ ಆಭರಣಗಳು ಕಳುವಾಗಿತ್ತು.

ಆದರೆ ಬರೋಬ್ಬರಿ 9 ವರ್ಷಗಳ ಬಳಿಕ ಕಳವುಗೈಯ್ದಿದ್ದ ಆಭರಣಗಳನ್ನು ದೇವಸ್ಥಾನಕ್ಕೆ ಹಿಂತಿರುಗಿಸಿರುವ ಕಳ್ಳ, ಆಭರಣಗಳ ಬ್ಯಾಗ್‌ ಜೊತೆ ಕ್ಷಮಾಪಣಾ ಪತ್ರವನ್ನೂ ಬರೆದಿಟ್ಟು ತೆರಳಿದ್ದಾನೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʻದೇವಸ್ಥಾನದಲ್ಲಿ ಯಜ್ಞ ನಡೆಯುತ್ತಿದ್ದಾಗ ಆಭರಣಗಳನ್ನು ತೆಗೆದುಕೊಂಡು ಹೋಗಿದ್ದೆ. ಆದರೆ ನಂತರದ ದಿನಗಳಲ್ಲಿ ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದೆ. ಆದ್ದರಿಂದ, 9 ವರ್ಷಗಳ ನಂತರ ನಾನು ದೇವರ ಮುಂದೆ ಶರಣಾಗಲು ಮತ್ತು ಆಭರಣಗಳನ್ನು ಹಿಂದಿರುಗಿಸಲು ನಿರ್ಧರಿಸಿದೆ. ನಾನು  ಹೆಸರು, ವಿಳಾಸ ಅಥವಾ ಗ್ರಾಮವನ್ನು ಉಲ್ಲೇಖಿಸುತ್ತಿಲ್ಲ. ನನ್ನ ಕೃತ್ಯಕ್ಕೆ ವಿಷಾದಿಸುತ್ತೇನೆ. ಕ್ಷಮಿಸಿʼ ಎಂದು ಪತ್ರದಲ್ಲಿ ಬರೆದಿದ್ದಾನೆ.

ಬೆಳ್ಳಿ ಆಭರಣಗಳಿದ್ದ ಬ್ಯಾಗ್‌  ಜೊತೆಗ ದೇಣಿಗೆಯಾಗಿ 201 ರೂಪಾಯಿ ಮತ್ತು ಕಳ್ಳತನಕ್ಕೆ ಪ್ರಾಯಶ್ಚಿತವಾಗಿ  100 ದಂಡ ಸೇರಿದಂತೆ ಒಟ್ಟು 301 ರೂಪಾಯಿಯನ್ನು  ʻಅನಾಮಧೇಯ ಕಳ್ಳʼ ಪತ್ರದ ಜೊತೆಗಿರಿಸಿದ್ದಾನೆ ಎಂದು ದೇವಸ್ಥಾನದ ಅರ್ಚಕ ಕೈಲಾಶ್ ಪಾಂಡಾ  ತಿಳಿಸಿದ್ದಾರೆ. ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...