ಒಡಿಶಾ | ಎಂಟು ತಿಂಗಳ ಹೆಣ್ಣು ಮಗುವನ್ನು 800 ರೂಪಾಯಿಗೆ ಮಾರಿದ ತಾಯಿ

Date:

ಎರಡನೇ ಬಾರಿಯೂ ಹೆಣ್ಣು ಮಗು ಜನಿಸಿದ ಕಾರಣಕ್ಕೆ ಬುಡಕಟ್ಟು ಮಹಿಳೆಯೊಬ್ಬರು ಆ ಮಗುವನ್ನು 800 ರೂಪಾಯಿಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ.

ಮಗುವನ್ನು ಮಾರಾಟ ಮಾಡಿದ ಮಹಿಳೆ ಬುಡಕಟ್ಟು ಪಂಗಡಕ್ಕೆ ಸೇರಿದ್ದು, ಆಕೆಯ ಹೆಸರು ಕರಮಿ ಮುರ್ಮು ಎಂದು ಪೊಲೀಸರು ತಿಳಿಸಿದ್ದಾರೆ. ಮಯೂರ್‌ಭಂಜ್ ಜಿಲ್ಲೆಯ ಖುಂಟಾ ಎಂಬಲ್ಲಿ ಘಟನೆ ನಡೆದಿದೆ.

ಕರಮಿ ಮುರ್ಮುಗೆ ಮೊದಲೇ ಒಂದು ಹೆಣ್ಣು ಮಗು ಜನಿಸಿತ್ತು. ಎರಡನೇ ಮಗು ಗಂಡಾಗಬಹುದು ಎಂದು ಆಕೆ ಅಪೇಕ್ಷಿಸಿದ್ದರು. ಆದರೆ, ಎರಡನೇ ಮಗು ಹೆಣ್ಣಾಗಿದ್ದರಿಂದ ಆಕೆ ತೀರಾ ಬೇಸರ ಮಾಡಿಕೊಂಡಿದ್ದರು. ತೀರಾ ಬಡವಿಯಾದ ತಾನು ಆ ಮಗುವನ್ನು ಬೆಳೆಸುವುದು ಹೇಗೆ ಎಂದು ತಮ್ಮ ನೆರೆಯ ಮಹಿಳೆ ಮಹಿ ಮುರ್ಮು ಎನ್ನುವವರ ಜೊತೆ ಆಕೆ ಹೇಳಿಕೊಂಡಿದ್ದರಂತೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ ಮಹಿ ಮುರ್ಮು ಮಗುವನ್ನು ಮಾರಾಟ ಮಾಡಲು ನೆರವಾಗುವುದಾಗಿ ಆಶ್ವಾಸನೆ ನೀಡಿದ್ದಾರೆ. ಇಬ್ಬರೂ ಸೇರಿ ಬಿಪ್ರಾಚರಣ್‌ಪುರ್ ಗ್ರಾಮದ ಫುಲಮಣಿ ಮತ್ತು ಅಖಿಲ್ ಮರಾಂಡಿ ಎನ್ನುವ ದಂಪತಿಗೆ ಎಂಟು ತಿಂಗಳ ಮಗುವನ್ನು 800 ರೂಪಾಯಿಗೆ ಮಾರಿದ್ದಾರೆ.

ಮಗುವನ್ನು ಎತ್ತಿಕೊಂಡು ಸಂತೆಗೆ ಹೋಗಿದ್ದ ಕರಮಿ ಮುರ್ಮು ಬರಿಗೈಯಲ್ಲಿ ವಾಪಸ್ಸಾಗಿದ್ದನ್ನು ಕಂಡ ಅಕ್ಕಪಕ್ಕದವರು ಅದರ ಬಗ್ಗೆ ವಿಚಾರಿಸಿದ್ದಾರೆ. ಅದಕ್ಕೆ ಆಕೆ ಮಗು ಸತ್ತು ಹೋಯಿತೆಂದು ಉತ್ತರಿಸಿದ್ದಾರೆ. ಆಗಲೇ ಹಲವರಿಗೆ ಅನುಮಾನ ಉಂಟಾಗಿದೆ.

ಕರಮಿ ಮುರ್ಮು ಅವರ ಗಂಡ ಮುಸು ಮರ್ಮು ತಮಿಳುನಾಡಿನಲ್ಲಿದ್ದು, ದಿನಗೂಲಿ ಕೆಲಸ ಮಾಡುತ್ತಾರೆ. ಒಮ್ಮೆ ರಜೆ ಪಡೆದು ಮನೆಗೆ ಬಂದ ಆತ ತನ್ನ ಎರಡನೇ ಮಗಳ ಬಗ್ಗೆ ವಿಚಾರಿಸಿದ್ದಾರೆ. ಆ ಮಗು ಸತ್ತುಹೋಯಿತು ಎಂದು ಹೆಂಡತಿ ಉತ್ತರಿಸಿದ್ದಾಳೆ. ಆದರೆ, ನೆರೆಹೊರೆಯವರು ಆತನಿಗೆ ಸತ್ಯಸಂಗತಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಮೈಸೂರು ಸ್ಯಾಂಡಲ್ ಸೋಪ್: ಭ್ರಷ್ಟ ಜನಪ್ರತಿನಿಧಿ, ಅಧಿಕಾರಶಾಹಿಗೆ ಬೇಕಿದೆ ಚಾಟಿಯೇಟು

ಆಗ ಆತ ಹತ್ತಿರದ ಖುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಕ್ಷಣವೇ ಗ್ರಾಮಕ್ಕೆ ಧಾವಿಸಿದ ಪೊಲೀಸರು ಕರಮಿ ಮುರ್ಮು ಅವರನ್ನು ತನಿಖೆ ಮಾಡಿದಾಗ ಮಗು ಮಾರಿದ ಸಂಗತಿ ಖಚಿತವಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಮಗುವನ್ನು ವಾಪಸ್ ಪಡೆದು ಶಿಶು ಪೋಷಣಾ ಕೇಂದ್ರಕ್ಕೆ ಕಳಿಸಿದ್ದಾರೆ.

ಮಗುವಿನ ತಾಯಿಯೂ ಸೇರಿದಂತೆ ಪಾಲ್ಗೊಂಡವರ ವಿರುದ್ಧ ಐಪಿಸಿ 370 (ಮಾನವ ಕಳ್ಳಸಾಗಣೆ) ಅಡಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...