ಒಡಿಶಾ ರೈಲು ದುರಂತ | 60 ಕೋಟಿ ದಾನ ಮಾಡಿದ ಧೋನಿ! ವಾಸ್ತವವೇನು?

Date:

ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ.

ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಉದ್ಯಮಿ ಗೌತಮ್ ಅದಾನಿ ಈಗಾಗಲೇ ಘೋಷಿಸಿದ್ದಾರೆ. ರಾಜಕಾರಣಿಗಳು, ಸಿನಿಮಾ ತಾರೆಯರು ಕೂಡ ನಗದು ನೆರವು ನೀಡಲು ಮುಂದೆ ಬಂದಿದ್ದಾರೆ.

ಈ ನಡುವೆ ಐಪಿಎಲ್‌ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಎಂಎಸ್‌ ಧೋನಿ, ಒಡಿಶಾ ರೈಲು ದುರಂತದಲ್ಲಿ ಸಂತ್ರಸ್ತರಾದವರಿಗೆ ಬರೋಬ್ಬರಿ 60 ಕೋಟಿ ರೂಪಾಯಿ ನೆರವು ನೀಡಿದ್ದಾರೆ ಎಂಬ ಪೋಸ್ಟರ್‌ ಒಂದು ವಾಟ್ಸಾಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಧೋನಿ ದಾನ ನೀಡಿದ್ದಾರೆ ಎನ್ನುವ ಸುದ್ದಿಯ ಕುರಿತು ಹಲವು ಸುದ್ದಿ ಸಂಸ್ಥೆಗಳು ʻಫ್ಯಾಕ್ಟ್‌ ಚೆಕ್‌ʼ ನಡೆಸಿದ್ದು ಈ ವೇಳೆ ಇದು ಸುಳ್ಳು ಸುದ್ದಿ ಎಂಬುದು ದೃಢಪಟ್ಟಿದೆ. 60 ಕೋಟಿ ದಾನ ನೀಡುತ್ತಿರುವ ಬಗ್ಗೆ ಸ್ವತಃ ಎಂಎಸ್‌ ಧೋನಿ ಎಲ್ಲಿಯೂ ಪ್ರಸ್ತಾಪಿಸಿಲ್ಲ. ಹೀಗಾಗಿ ಇದು ವಾಟ್ಸಾಪ್‌ ಯುನಿವರ್ಸಿಟಿಯಲ್ಲಿ ಸೃಷ್ಟಿಯಾದ ಪೋಸ್ಟರ್‌ ಎಂಬುದು ಖಚಿತವಾಗಿದೆ.

WhatsApp Image 2023 06 06 at 10.56.13 PM

ಧೋನಿ ಪೋಸ್ಟರ್‌ಗೂ ಮುನ್ನ ವಿರಾಟ್‌ ಕೊಹ್ಲಿಯ ಕುರಿತಾಗಿಯೂ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿತ್ತು. ʻಒಡಿಶಾ ಅವಘಡದಲ್ಲಿ ಸಂತ್ರಸ್ತರಾದವರಿಗೆ ಕೊಹ್ಲಿ 35 ಲಕ್ಷ ರೂಪಾಯಿ ದಾನ ಮಾಡಿದ್ದಾರೆ ಎಂಬ ಪೋಸ್ಟ್‌ ಹರಿದಾಡಿತ್ತು.

ನೆರವಿಗೆ ನಿಂತ ಸೆಹ್ವಾಗ್‌

ಒಡಿಶಾ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ.

ʻಒಡಿಶಾ ರೈಲು ದುರಂತದ ಫೋಟೋ ಹಾಗೂ ಘಟನಾ ಸ್ಥಳದ ದೃಶ್ಯಗಳು ತೀವ್ರ ನೋವು ತರುತ್ತಿದೆ. ಅಪಘಾತವಾದ ದಿನದಿಂದ ಈ ಚಿತ್ರಗಳು ಕಾಡುತ್ತಿದೆ. ಈ ನೋವಿನ ಸಂದರ್ಭದಲ್ಲಿ ನನ್ನ ಕೈಲಾದ ಸಹಾಯ ಮಾಡಲು ಬಯಸುತ್ತೇನೆ. ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಉಚಿತ ವ್ಯವಸ್ಥೆ ಕಲ್ಪಿಸುತ್ತೇನೆ. ಈ ಮಕ್ಕಳಿಗೆ ಸೆಹ್ವಾಗ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಉಚಿತ ಶಿಕ್ಷಣ ಹಾಗೂ ವಸತಿ ನೀಡಲಾಗುವುದುʼ ಎಂದು ಸೆಹ್ವಾಗ್ ಟ್ವೀಟ್‌ ಮಾಡಿದ್ದಾರೆ.

ʻದುರಂತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎಲ್ಲರಿಗೂ, ಸಿಬ್ಬಂದಿ ವರ್ಗದವರಿಗೆ ನನ್ನ ಸಲ್ಯೂಟ್. ವೈದ್ಯಕೀಯ ತಂಡ, ಸ್ವಯಂ ಸೇವಕರ ಗುಂಪು, ರಕ್ತ ದಾನ ಮಾಡಿದ ಮಹನಿಯರಿಗೆ ನನ್ನ ನಮಗಳು ಎಂದುʼ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...