ಕುನಾಲ್ ಕಮ್ರಾ ಜೊತೆ ಟ್ವೀಟ್‌ ವಾರ್ | ಓಲಾ ಷೇರು ಕುಸಿತ; ಭವಿಶ್ ದುರಹಂಕಾರದ ಫಲವೆಂದ ನೆಟ್ಟಿಗರು

Date:

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವೆ ವಿಚಾರದಲ್ಲಿ ಹಾಸ್ಯನಟ (ಸ್ಟ್ಯಾಂಡಪ್ ಕಾಮಿಡಿಯನ್) ಕುನಾಲ್ ಕಮ್ರಾ ಜೊತೆ ‘ಓಲಾ ಇವಿ’ ಸಿಇಒ ಭವಿಶ್ ಅಗರ್ವಾಲ್ ಟ್ವೀಟ್ ವಾರ್ ನಡೆಸಿದ ಮರುದಿನವೇ ಓಲಾ ಎಲೆಕ್ಟ್ರಿಕ್ ಮೊಬಿಲಿಟಿ ಷೇರುಗಳು ಕುಸಿತಗೊಂಡಿದೆ.

ಇಂದು ಷೇರು ಮಾರುಕಟ್ಟೆಯ ವಹಿವಾಟಿನಲ್ಲಿ ಓಲಾ ಷೇರುಗಳು ಸುಮಾರು ಶೇಕಡ 8ರಷ್ಟು ಕುಸಿದಿದ್ದು ಓಲಾ ಹೂಡಿಕೆದಾರರಿಗೆ ಭಾರೀ ನಷ್ಟ ಉಂಟು ಮಾಡಿದೆ. ವಹಿವಾಟಿನ ಅಂತ್ಯದ ವೇಳೆ ಷೇರಿನ ಬೆಲೆ ಶೇಕಡ 8.38ರಷ್ಟು ಇಳಿದು 90.75ಕ್ಕೆ ಸ್ಥಿರವಾಗಿದೆ. ಭವಿಶ್ ಅಗರ್ವಾಲ್ ಅವರ ದುರಂಕಾರದಿಂದಾಗಿ ನಮಗೆ ನಷ್ಟವಾಗಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಣೇಶನ್ ಅಯ್ಯರ್ ಎಂಬ ಹೂಡಿಕೆದಾರರು ಇಂದು ಬೆಳಿಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಭವಿಶ್ ಅಗರ್ವಾಲ್ ಅವರ ದುರಹಂಕಾರವು ಹೂಡಿಕೆದಾರನಾದ ನಾನು ಬೆಲೆ ತೆರುವಂತೆ ಮಾಡಿದೆ. ನಾನು ನನ್ನ ಓಲಾ ಷೇರುಗಳನ್ನು 40 ಸಾವಿರ ರೂಪಾಯಿ ನಷ್ಟಕ್ಕೆ ಮಾರಾಟ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೆಟ್ಟು ನಿಲ್ಲುತ್ತಿವೆ ‘ಓಲಾ ಇವಿ’; ಓಲಾ ಸಿಇಒ ಅಗರ್ವಾಲ್ ಮತ್ತು ಕುನಾಲ್ ಕಮ್ರಾ ನಡುವೆ ಟ್ವೀಟ್ ವಾರ್

“ಈ ಕಂಪನಿಯಿಂದ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಇಂತಹ ವಿಷಕಾರಿ ವ್ಯಕ್ತಿ ಸಂಸ್ಥೆ ಮುನ್ನಡೆಸುವಾಗ ಸಂಸ್ಥೆಗೆ ಭವಿಷ್ಯವಿಲ್ಲ. ಕುನಾಲ್ ಕಮ್ರಾ ಅವರು ರಾಕ್ಷಸ ಮನಸ್ಥಿತಿಯ ವ್ಯಕ್ತಿಯನ್ನು ಬಯಲು ಮಾಡಿದ್ದಾರೆ. ಇತರ ಹೂಡಿಕೆದಾರರು ಕೂಡಾ ನಷ್ಟದೊಂದಿಗೆ ಓಲಾ ಷೇರಿನಿಂದ ಹೂಡಿಕೆ ಹಿಂಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

“ಓಲಾ ತನ್ನ ಹೂಡಿಕೆದಾರರ ಸಂಪತ್ತನ್ನು ಬರಿದು ಮಾಡಿದೆ. ನಿಮ್ಮ ಗ್ರಾಹಕರು, ಉದ್ಯೋಗಿಗಳು ಮತ್ತು ಹೂಡಿಕೆದಾರರ ಬಗ್ಗೆ ತುಂಬಾ ತಿರಸ್ಕಾರವಿದ್ದರೆ ನೀವು ಎಂದಿಗೂ ಸಂಪತ್ತನ್ನು ಗಳಿಸಲು ಸಾಧ್ಯವಿಲ್ಲ” ಎಂದು ಮತ್ತೋರ್ವ ಬಳಕೆದಾರರು ಹೇಳಿದ್ದಾರೆ.

“ನಾನು ಓಲಾ ಗ್ರಾಹಕನಲ್ಲ. ಆದರೆ ಓಲಾ ಹೂಡಿಕೆದಾರನಾಗಿದ್ದೇನೆ. ಭವಿಶ್ ಅಗರ್ವಾಲ್ ಅವರು ಈ ರೀತಿ ಜಗಳವಾಡುವ ಬದಲು ಗ್ರಾಹಕ ಸೇವೆಯನ್ನು ಸುಧಾರಿಸುವತ್ತ ಗಮನ ಹರಿಸಿ ಎಂದು ವಿನಂತಿಸುತ್ತೇನೆ” ಎಂದು ತಿಳಿಸಿದರು.

ಕುನಾಲ್ ಕಮ್ರಾ- ಭವಿಶ್ ಅಗರ್ವಾಲ್ ಟ್ವೀಟ್ ವಾರ್

ಕುನಾಲ್ ಕಮ್ರಾ ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಓಲಾ ಸರ್ವೀಸ್‌ ಸೆಂಟರ್‌ ಬಳಿ ನಿಲ್ಲಿಸಲಾಗಿರುವ ರಾಶಿಗಳಷ್ಟು ಓಲಾ ಸ್ಕೂಟರ್‌ಗಳ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಓಲಾ, ರ್‍ಯಾಪಿಡೋಗಳಿಂದ ಬೈಕ್ ಟ್ಯಾಕ್ಸಿ : ಆಟೋ ಚಾಲಕರಿಗೆ ಎದುರಾದ ಮತ್ತೊಂದು ಸಂಕಷ್ಟ

“ಭಾರತೀಯ ಗ್ರಾಹಕರಿಗೆ ಧ್ವನಿ ಇಲ್ಲವೇ? ದ್ವಿಚಕ್ರ ವಾಹನಗಳು ಅನೇಕ ಕೂಲಿ ಕಾರ್ಮಿಕರ ಜೀವನದ ಅವಿಭಾಜ್ಯ ಭಾಗವಾಗಿವೆ. ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಸಮಸ್ಯೆ ಹೆಚ್ಚುತ್ತಿದೆ. ಕಂಪನಿಯು ತೀರಾ ಕಳಪೆಮಟ್ಟದ ಸೇವೆ ಒದಗಿಸುತ್ತಿದೆ. ಇಂತಹ ಸಮಸ್ಯೆಗಳನ್ನು ಎದುರಿಸುತ್ತಿರುವವರು ತಮ್ಮ ಸಮಸ್ಯೆಗಳ ಬಗ್ಗೆ ಕಮೆಂಟ್‌ ಮಾಡಿ” ಎಂದು ಕಮ್ರಾ ಹೇಳಿದ್ದಾರೆ.

ಇದರಿಂದ ಆಕ್ರೋಶಗೊಂಡ ಭವಿಶ್ ಅಗರ್ವಾಲ್ “ಇದು ದುಡ್ಡಿಗಾಗಿ ಮಾಡಿರುವ ಟ್ವೀಟ್ (ಪೇಯ್ಡ್‌ ಟ್ವೀಟ್). ಕಮ್ರಾ ಅವರು ತಮ್ಮ ವಿಫಲ ಹಾಸ್ಯ ವೃತ್ತಿಯಿಂದ ಗಳಿಸುವುದಕ್ಕಿಂತ ಹೆಚ್ಚು ಹಣ ಕೊಡುತ್ತೇನೆ. ನಾವು ಸೇವಾ ನೆಟ್‌ವರ್ಕ್ ಅನ್ನು ವೇಗವಾಗಿ ವಿಸ್ತರಿಸುತ್ತಿದ್ದೇವೆ. ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುತ್ತೇವೆ” ಎಂದಿದ್ದಾರೆ.

ಇದಕ್ಕೆ ಪ್ರತ್ಯುತ್ತರ ನೀಡಿದ ಕಮ್ರಾ, “ನಾನು ಟ್ವೀಟ್‌ ಮಾಡಲು ಹಣ ಪಡೆದಿದ್ದೇನೆ ಎಂದು ನೀವು ಸಾಬೀತುಪಡಿಸಿದರೆ, ಈ ಟ್ವೀಟ್‌ ಮತ್ತು ಈ ಹಿಂದೆ ಖಾಸಗಿ ಕಂಪನಿಗಳ ವಿರುದ್ಧ ಹಾಕಿರುವ ಎಲ್ಲ ಪೋಸ್ಟ್‌ಗಳನ್ನು ಅಳಿಸಿ ಹಾಕುತ್ತೇನೆ” ಎಂದು ಹೇಳಿದ್ದರು. ಇಬ್ಬರ ನಡುವೆ ಟ್ವೀಟ್ ವಾರ್ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...