ಮುಂಬೈ: ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ

Date:

ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೆ ಒಂದೇ ಕುಟುಂಬದ ಐವರು ಉಕ್ಕಿ ಹರಿಯುವ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮುಂಬೈ ನ ಲೋನಾವಾಲ ಪ್ರದೇಶದಲ್ಲಿ ನಡೆದಿದೆ.

ಕುಟುಂಬವೊಂದು ರಜೆ ಸಮಯವನ್ನು ಕಳೆಯಲು ಮುಂಬೈನಿಂದ 80 ಕಿ.ಮೀ ದೂರದಲ್ಲಿರುವ ಬುಶಿ ಜಲಾಶಯಕ್ಕೆ ಆಗಮಿಸಿತ್ತು. ಅತೀ ಹೆಚ್ಚು ಮಳೆಯಾಗುತ್ತಿದ್ದ ಕಾರಣ ಜಲಾಶಯದ ಬಳಿಯಲ್ಲಿನ ಜಲಪಾತ ಉಕ್ಕಿ ಹರಿಯುತ್ತಿತ್ತು.

ಸಾಧಾರಣ ಹರಿವಿದ್ದ ಕಾರಣ ಜಲಪಾತದ ಮಧ್ಯೆ ಕುಟುಂಬದ 7 ಮಂದಿ ನಿಂತಿದ್ದರು. ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದ ಕಾರಣ ಕುಟುಂಬದ 7 ಮಂದಿ ಒಬ್ಬರಿಗೊಬ್ಬರು ಹಿಡಿದುಕೊಂಡು ಗಟ್ಟಿಯಾಗಿ ನಿಂತಿದ್ದರು. ಆದರೂ ನೀರಿನ ರಭಸಕ್ಕೆ ನೂರಾರು ಜನರ ಕಣ್ಣೆದುರೆ ಏಳು ಮಂದಿ ಕೊಚ್ಚಿ ಹೋದರು. ಇವರಲ್ಲಿ ಇಬ್ಬರು ಈಜಿ ಸುರಕ್ಷಿತ ಸ್ಥಳ ತಲುಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಮೂವರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದ ಇಬ್ಬರ ಮೃತದೇಹಗಳಿಗೆ ಶೋಧ ನಡೆಸಲಾಗುತ್ತಿದೆ. ಘಟನೆಯು ಭಾನುವಾರ(ಜೂನ್‌ 30) ಮಧ್ಯಾಹ್ನ ನಡೆದಿದೆ.

ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಕೊಚ್ಚಿಕೊಂಡು ಹೋಗಿರುವವರ ಪತ್ತೆಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.

ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದರೂ ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ಅವರ ಮೃತದೇಹಗಳು ಇನ್ನೂ ದೊರಕಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...