ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್ಚುಕ್ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮಾರ್ಚ್ 6ರಂದು ‘ಕ್ಲೈಮೇಟ್ ಫಾಸ್ಟ್’ ಹೆಸರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಆಂದೋಲನಕ್ಕೆ ಪರಿಸರವಾದಿಗಳು, ಸ್ಥಳೀಯ ಜನರು, ಹಲವಾರು ಸೆಲೆಬ್ರಿಟಿಗಳು, ವಿವಿಧ ಸಮುದಾಯಗಳು ಬೆಂಬಲ ನೀಡುತ್ತಿವೆ. ಆದರೆ, ಕೇಂದ್ರ ಸರ್ಕಾರ ಅವರ ಹೋರಾಟಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ನಡುವೆ ಇಂದು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಲಡಾಖ್ಗೆ ತೆರಳಿರುವ ಖ್ಯಾತ ನಟ ಪ್ರಕಾಶ್ ರಾಜ್, ಹೋರಾಟದಲ್ಲಿ ಭಾಗವಹಿಸುವ ಮೂಲಕ ಸೋನಮ್ ವಾಂಗ್ಚುಕ್ ಅವರನ್ನು ಬೆಂಬಲಿಸಿದ್ದಾರೆ. ಈ ಕುರಿತು ಅವರು ಟ್ವಿಟರ್ನಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.
“ಸೋನಮ್ ವಾಂಗ್ಚುಕ್ ಅವರನ್ನು ಬೆಂಬಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ” ಎಂದು ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.
Its my birthday today .. and i’m celebrating by showing solidarity with @Wangchuk66 and the people of ladakh who are fighting for us .. our country .. our environment and our future . 🙏🏿🙏🏿🙏🏿let’s stand by them #justasking pic.twitter.com/kUUdRakYrD
— Prakash Raj (@prakashraaj) March 26, 2024
“ಇಂದು ನನ್ನ ಬರ್ತ್ಡೇ. ಹೀಗಾಗಿ ನಾನು ಈ ದಿನವನ್ನು ಲೇಹ್ ಲಡಾಖ್ನಲ್ಲಿ ಕಳೆಯಲು ನಿರ್ಧರಿಸಿದೆ. ಈ ಜನ ತಮಗಾಗಿ ಹೋರಾಡುತ್ತಿಲ್ಲ. ಇಲ್ಲಿನ ಜನರು ನಮ್ಮ ದೇಶ, ನಮ್ಮ ಪರಿಸರ ಮತ್ತು ನಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಿದ್ದಾರೆ. ಅವರ ಬೆಂಬಲಕ್ಕೆ ನಿಲ್ಲೋಣ” ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಇದರಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಕಂಡು ಬಂದಿದೆ.
Sonam Wangchuk is on his 18th Day of Fast
None of the Modi Govt Ministers have even said a word about him. For the record, Congress Govt agreed to Anna Hazare’s demands after 12th Day of his Fast. pic.twitter.com/jqGzzJnxBn
— Dhruv Rathee (@dhruv_rathee) March 23, 2024
“ಲಡಾಖ್ ಮತ್ತು ಹಿಮಾಲಯವನ್ನು ಉಳಿಸಿ” ಎಂಬ ವಾಂಗ್ಚುಕ್ ಅವರ ಉಪವಾಸ 21 ದಿನಗಳನ್ನು ತಲುಪಿದೆ. ಪ್ರತಿಭಟನೆಗೆ ರಾಜಕೀಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವಾಂಗ್ಚುಕ್ ಟ್ವೀಟ್ ಮಾಡಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಅವರು ಅಪ್ಡೇಟ್ ನೀಡುತ್ತಾ ಬರುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಶೀಘ್ರವೇ ಸ್ಪಂದನೆ ಸಿಗುವ ಭರವಸೆಯಲ್ಲಿ ಅವರಿದ್ದಾರೆ.
ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್, ಬಾಲಿವುಡ್ ನಟ ಅಮೀರ್ ಖಾನ್, ಕರೀನಾ ಕಪೂರ್, ಬೊಮನ್ ಇರಾನಿ ನಟನೆಯ, ರಾಜ್ಕುಮಾರ್ ಹಿರಾನಿ ನಿರ್ದೇರ್ಶನದ ‘ತ್ರೀ ಈಡಿಯಟ್ಸ್(3 idiots) ಸಿನಿಮಾಕ್ಕೆ ಪ್ರೇರಣೆಯಾಗಿದ್ದರು.
Real Rancho need our support guys ♥️#SonamWangchuk #DhruvRathee #SaveLadakhpic.twitter.com/Ndxoe3frq4
— Anvar Khan (@anvarkhan63) March 26, 2024
ಪ್ರಕಾಶ್ ರೈ ಅವರು ಸಿನಿಮಾ ಜೊತೆಗೆ ಅನೇಕ ಸಾಮಾಜಿಕ ಕೆಲಸ ಮಾಡುವ ಮೂಲಕವೂ ಗುರುತಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಜನವಿರೋಧಿ ನಡೆಗಳ ಟೀಕಾಕಾರರಾಗಿ ಗುರುತಿಸಿಕೊಂಡಿದ್ದಾರೆ. ಇದರಿಂದ ಬಿಜೆಪಿ ಹಾಗೂ ಸಂಘಪರಿವಾರದ ಕೆಂಗಣ್ಣಿಗೂ ಗುರಿಯಾಗಿದ್ದಾರೆ.





