ಗುಜರಾತ್‌ | ಅತಿಕ್ರಮಣ ವಿರೋಧಿ ಕಾರ್ಯಾಚರಣೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ: ಒಬ್ಬ ಸಾವು

Date:

  • ಗುಜರಾತ್‌ ಜುನಾಗಢದ ಮಸೀದಿ ತೆರವು ನೋಟಿಸ್ ನಂತರ ಘಟನೆ
  • ಅತಿಕ್ರಮಣ ಸಂಬಂಧ ನಡೆದ ಹಿಂಸಾಚಾರ ಘಟನೆಯಲ್ಲಿ 174 ಜನರ ಬಂಧನ

ಗುಜರಾತ್‌ ರಾಜ್ಯದ ಜುನಾಗಢದಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜನರು ಮತ್ತು ಪೊಲೀಸರ ನಡುವೆ ಶನಿವಾರ (ಜೂನ್‌ 17) ಘರ್ಷಣೆ ನಡೆದಿದೆ. ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.

ಜುನಾಗಢದ ಮಜೆವಾಡಿ ಮಸೀದಿ ಬಳಿ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು ಸಿಡಿಸಿದರು. ಜನರನ್ನು ನಿಯಂತ್ರಿಸಲು ಲಾಠಿ ಚಾರ್ಜ್‌ ನಡೆಸಲಾಯಿತು.

ಜುನಾಗಢ ಮಹಾನಗರ ಪಾಲಿಕೆಯು ತೆರವು ಕಾರ್ಯಾಚರಣೆಗೆ ಸಂಬಂಧಿಸಿ ಸ್ಥಳೀಯ ಮಸೀದಿಗೆ ನೋಟಿಸ್‌ ನೀಡಿದ ನಂತರ ಶುಕ್ರವಾರ ರಾತ್ರಿ ಪ್ರತಿಭಟನೆ ಭುಗಿಲೆದ್ದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸೀದಿ ಸ್ಥಾಪನೆಯಾಗಿರುವ ಬಗ್ಗೆ ಐದು ದಿನಗಳಲ್ಲಿ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್‌ನಲ್ಲಿ ಹೇಳಲಾಗಿತ್ತು. ಐದು ದಿನಗಳ ಅವಧಿ ಪೂರ್ಣಗೊಂಡರೂ ಮಸೀದಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆ ಗುಜರಾತ್ ಜುನಾಗಢದ ಪಾಲಿಕೆ ಈ ಕ್ರಮ ಕೈಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಜುನಾಗಢ ಮಹಾನಗರ ಪಾಲಿಕೆ ತಂಡವು ಶುಕ್ರವಾರ ಸಂಜೆ ಮಸೀದಿ ತೆರವಿಗೆ ನೋಟಿಸ್‌ ನೀಡಲು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಸುಮಾರು 500 ರಿಂದ 600 ಜನರು ವಿರೋಧ ವ್ಯಕ್ತಪಡಿಸಿದ್ದರು. ರಾತ್ರಿ 10.15ರ ಸುಮಾರಿಗೆ ಪರಿಸ್ಥಿತಿ ಉಲ್ಬಣಗೊಂಡಿತು ಎಂದು ಗುಜರಾತ್‌ ಜುನಾಗಢ ಪೊಲೀಸ್‌ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.

ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಹಲವಾರು ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಲಾಯಿತು ಎಂದು ವರದಿಯಾಗಿದೆ. ಗುಜರಾತ್‌ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದರು.

ಈ ಸುದ್ದಿ ಓದಿದ್ದೀರಾ? ‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

“ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಒಟ್ಟು 174 ಮಂದಿಯನ್ನು ಬಂಧಿಸಲಾಗಿದೆ. ಕಲ್ಲು ತೂರಾಟದಿಂದ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಇದು ದೃಢಪಡಲಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ರವಿತೇಜ ಹೇಳಿದರು.

ಗುಜರಾತ್ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆ ಶಾಂತಿ ಕಾಪಾಡಲು ಸ್ಥಳದಲ್ಲಿ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...