ಆನ್‌ಲೈನ್ ಗೇಮ್ ಆಡಲು ಹೋಗಿ ಮಲೇರಿಯಾದಿಂದ ಮೃತಪಟ್ಟ 14 ಮಂದಿ

Date:

ಕೆಲವು ತಿಂಗಳುಗಳಿಂದ ಗ್ರಾಮದ ಹೊರಗಡೆ ಆನ್‌ಲೈನ್‌ ಗೇಮ್‌ ಆಡಲು ಹೋದ 20ರ ಆಸುಪಾಸಿನ ಸುಮಾರು 14 ಮಂದಿ ಮಲೇರಿಯಾ ಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಮೇಘಾಲಯದಲ್ಲಿ ನಡೆದಿದೆ.

ಸಂಜೆಯ ವೇಳೆ ಗ್ರಾಮದ ಆಚೆ ಉತ್ತಮ ಇಂಟರ್‌ನೆಟ್‌ ಸಂಪರ್ಕ ಸಿಗುವ ಪ್ರದೇಶಕ್ಕೆ ಈ ಯುವಕರು ತೆರಳುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಮಲೇರಿಯಾ ಉಂಟು ಮಾಡುವ ಸೊಳ್ಳೆಗಳು ಕಚ್ಚಿದ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಗಾರೋ ಕಣಿವೆ ಪ್ರದೇಶ, ದಕ್ಷಿಣ ಗಾರೋ ಕಣಿವೆಗಳು, ಪೂರ್ವ ಕಣಿವೆ ಕಣಿವೆಗಳು ಹಾಗೂ ಪಶ್ಚಿಮ ಕಾಶಿ ಕಣಿವೆಗಳಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚಿದ್ದು, ಈ ಪ್ರದೇಶಗಳಲ್ಲಿ ಸೊಳ್ಳೆ ಕಡಿತದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲೇರಿಯಾ ಲಕ್ಷಣಗಳು ಕಂಡುಬಂದಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಈ ಪ್ರದೇಶಗಳ ಜನತೆಗೆ ಎಚ್ಚರಿಕೆ ನೀಡಿತ್ತು. ಆದರೂ ಕಾಯಿಲೆ ಬಂದ ತಕ್ಷಣ ಅಸಡ್ಡೆ ತೋರಿದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

“ನಾನು ಮಲೇರಿಯಾ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿದಾಗ ಹಲವು ಯುವಕರು ಗ್ರಾಮದ ಹೊರ ಪ್ರದೇಶದಲ್ಲಿ ಆನ್‌ಲೈನ್‌ ಗೇಮ್‌ ಆಟವಾಡುತ್ತಿದ್ದರು. ಅವರೆಲ್ಲ ಉತ್ತಮ ಇಂಟರ್‌ನೆಟ್‌ ಸಂಪರ್ಕಕ್ಕಾಗಿ ಗ್ರಾಮದ ಆಚೆ ತೆರಳುತ್ತಿದ್ದರು” ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ರಾಜ್ಯ ಸರ್ಕಾರವು ದಶಕಗಳ ಹಿಂದೆಯೇ ಮಲೇರಿಯಾದಿಂದ ಉಂಟಾಗುವ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಚಿಕಿತ್ಸೆ ಪ್ರಕ್ರಿಯೆ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಕಳೆದ ಎರಡು ವರ್ಷಗಳಿಂದ ಕೆಲವು ಜಿಲ್ಲೆಗಳಲ್ಲಿ ಮಲೇರಿಯಾದಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ” ಎಂದು ಆರೋಗ್ಯ ಸಚಿವರಾದ ಅಪ್ರೀನ್‌ ಲಿಂಗ್ಡೊ ತಿಳಿಸಿದ್ದಾರೆ.

“ಯುವಕರ ಜೊತೆ ಅವರ ಪೋಷಕರಿಗೂ ರೋಗದ ಗಂಭಿರತೆಯ ಬಗ್ಗೆ ಅರಿವಿರುವುದಿಲ್ಲ. ಜ್ವರದ ಲಕ್ಷಣಗಳಿಂದಲೇ ಬಹುತೇಕ ಪ್ರಕರಣಗಳಲ್ಲಿ ಮೃತಪಟ್ಟಿದ್ದಾರೆ. ಸಂಜೆಯ ವೇಳೆಯಲ್ಲಿ ಉತ್ತಮ ಇಂಟರ್‌ನೆಟ್‌ ಸಂಪರ್ಕ ದೊರಕುವ ಸ್ಥಳಗಳಿಗೆ ತೆರಳುವ 20ರ ವಯಸ್ಸಿನ ಯುವಕರು ಸೊಳ್ಳೆಗಳಿಂದ ಕಚ್ಚಿಸಿಕೊಳ್ಳುತ್ತಾರೆ. ಸೊಳ್ಳೆಗಳು ಹೆಚ್ಚಿರುವ ನೀರಿರುವ ಪ್ರದೇಶ, ಮರದ ಕಳಗಿನ ಪ್ರದೇಶಗಳಿಗೆ ತೆರಳಬಾರದೆಂದು ಇವರು ಅರಿತುಕೊಳ್ಳುವುದಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣದಿಂದ ಸಾಮಾಜಿಕ ಮಾಧ್ಯಮಗಳ ಮೂಲಕವೂ ಅರಿವು ಮೂಡಿಸಲಾಗುತ್ತಿದೆ” ಎಂದು ಆರೋಗ್ಯ ಸಚಿವ ಅಪ್ರೀನ್‌ ಲಿಂಗ್ಡೊ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...