ಪಿಐಬಿ ಮೂಲಕ ಸರ್ಕಾರಿ ವಿರೋಧಿ ‘ನಕಲಿ’ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ

Date:

  • ನಕಲಿ ಸುದ್ದಿ ಕಡಿವಾಣದ ಹೊಣೆ ಹೊತ್ತ ಪಿಐಬಿ
  • 2021ರ ಐಟಿ ನಿಯಮಗಳಿಗೆ ಇದೀಗ ತಿದ್ದುಪಡಿ

ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ನಕಲಿ ಸುದ್ದಿ’, ಲೇಖನಗಳನ್ನು ಪ್ರಕಟಿಸುವುದಕ್ಕೆ ತಡೆ ಒಡ್ಡಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮುಂದಾಗಿದೆ.

ಸಚಿವಾಲಯದಡಿಯಲ್ಲಿರುವ ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋದ ಅಥವಾ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು ನಕಲಿ ಸುದ್ದಿ ಎಂದು ಖಚಿತಪಡಿಸಿದರೆ, ಆರಂಭದಲ್ಲಿ ಅಂತಹ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗುತ್ತದೆ.

ಬಳಿಕ ಸುದ್ದಿಗಳನ್ನು ಫೇಸ್‌ಬುಕ್‌, ಟ್ವಟರ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ ಆಯಾ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲು ಪಿಐಬಿ ಮೂಲಕ ಸರ್ಕಾರಿ ವಿರೋಧಿ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ ನಿರ್ದೇಶನ ನೀಡುತ್ತದೆ.  ಆ ಮೂಲಕ ಸರ್ಕಾರದ ವಿರುದ್ಧ ನಕಲಿ ಸುದ್ದಿಗಳು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಐಬಿ ಬಳಸಿಕೊಂಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021ರ ಐಟಿ ನಿಯಮಗಳಿಗೆ  ತಿದ್ದುಪಡಿ ಮಾಡಿರುವ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.  

ಈ ಸುದ್ದಿ ಓದಿದ್ದೀರಾ?: ಬದಲಾಯ್ತು ಟ್ವಿಟರ್‌ ಲೋಗೋ; ಮಸ್ಕ್‌ ಮಸ್ತಿಗೆ ಹಕ್ಕಿ ಬದಲಿಗೆ ನಾಯಿ ಬಂತು

ಕೇಂದ್ರ ಸರ್ಕಾರದ ಕುರಿತು ಪ್ರಸಾರವಾಗುವ ಸುದ್ದಿಗಳ ಕುರಿತು ಕಣ್ಣಿಡಲಿರುವ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು, ಸಂಬಂಧಿತ ಸರ್ಕಾರಿ ಇಲಾಖೆಗಳನ್ನು ಸಂಪರ್ಕಿಸಿ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಲಿದೆ.  ಬಳಿಕ ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ನೀತಿ-ನಿಯಮಗಳನ್ನು ಪ್ರಶ್ನಿಸುವ, ವಿರ್ಮಶಿಸುವ ಟೀಕಿಸುವ ಸ್ವಾತಂತ್ರ್ಯವನ್ನು ಈ ತಿದ್ದುಪಡಿಯ ಮೂಲಕ ಕಸಿದುಕೊಳ್ಳಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಆದರೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿನ ಪೋಸ್ಟ್‌ಗಳ ಸೆನ್ಸಾರ್‌ಶಿಪ್‌ಗೆ ಕಾರಣವಾಗುತ್ತದೆ ಎಂಬ ಕಳವಳವನ್ನು ಕೇಂದ್ರ ಸಚಿವ ಚಂದ್ರಶೇಖರ್ ತಳ್ಳಿಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...