ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ: ಆಂಧ್ರ ಸಿಎಂ ನಾಯ್ಡು

Date:

ಕುಸಿಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಸರಪಂಚ್, ಕೌನ್ಸಿಲರ್ ಅಥವಾ ಮೇಯರ್ ಆಗಲು ಬಯಸುವವರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರಬೇಕು ಎಂಬ ನೀತಿಯನ್ನು ತರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ.

ಜನರು ಹೆಚ್ಚು ಮಕ್ಕಳನ್ನು ಪಡೆಯುವಂತೆ ಪ್ರೋತ್ಸಾಹಿಸುವ ನೀತಿಗಳನ್ನು ಜಾರಿಗೆ ತರಲಾಗುವುದು ಎಂದು ಚಂದ್ರಬಾಬು ನಾಯ್ಡು ಪ್ರಕಟಿಸಿದ್ದಾರೆ.

”ಒಂದು ಕಾಲದಲ್ಲಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಪಂಚಾಯತಿ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗುತ್ತಿರಲಿಲ್ಲ. ಆದರೀಗ ಕಡಿಮೆ ಸಂಖ್ಯೆಯ ಮಕ್ಕಳನ್ನು ಹೊಂದಿರುವವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನಿಮಗೆ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸರಪಂಚ್, ಮುನಿಸಿಪಿಲ್ ಕೌನ್ಸಿಲರ್, ಮಹಾನಗರ ಪಾಲಿಕೆ ಅಧ್ಯಕ್ಷ ಅಥವಾ ಮೇಯರ್ ಆಗಲು ಸಾಧ್ಯ” ಎಂದು ಅವರು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಎಸ್‌ಬಿಐ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಒಬ್ಬನ ಸಾವು, 93 ಲಕ್ಷ ದರೋಡೆ

ಉತ್ತರ ಭಾರತವು ಇನ್ನು 15 ವರ್ಷಗಳಲ್ಲಿ ಸ್ಥಿರ ಫಲವಂತಿಕೆಯ ಲಾಭವನ್ನು ಕಳೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಹಳೆಯ ತಲೆಮಾರು ಹೆಚ್ಚು ಮಕ್ಕಳನ್ನು ಹೊಂದಿರುತ್ತಿದ್ದರು. ಆದರೆ, ಹಾಲಿ ತಲೆಮಾರು ಈ ಸಂಖ್ಯೆಯನ್ನು ಒಂದಕ್ಕೆ ತಂದಿದೆ. ಇನ್ನೂ ಹೆಚ್ಚು ಜಾಣರು ಮೋಜು ಮಾಡಲು ದುಪ್ಪಟ್ಟು ಆದಾಯ, ಮಕ್ಕಳು ಬೇಡ ನೀತಿಯತ್ತ ಹೋಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕೊರಿಯಾ, ಜಪಾನ್ ಹಾಗೂ ಯೂರೋಪ್ ಖಂಡವನ್ನು ಉದಾಹರಿಸಿದ ಚಂದ್ರಬಾಬು ನಾಯ್ಡು, ಅಲ್ಲಿನ ಜನ ಕುಸಿಯುತ್ತಿರುವ ಜನಸಂಖ್ಯೆಯ ಅಪಾಯದ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಸಂಪತ್ತು ಸೃಷ್ಟಿ, ಹೆಚ್ಚು ಆದಾಯ ಗಳಿಸುವ ಮೂಲಕ ತಮ್ಮ ದೇಶಗಳನ್ನು ಪ್ರಗತಿಯತ್ತ ಕೊಂಡೊಯ್ಯಲು ಬಯಸಿದರು ಎಂದು ಹೇಳಿದ್ದಾರೆ.

”ಅವರಿಗೀಗ ಜನ ಬೇಕಾಗಿದೆ. ನಾವು ಜನರನ್ನು ಅಲ್ಲಿಗೆ ಕಳಿಸಬೇಕಿದೆ. ನಾವೀಗ ಆ ಸ್ಥಿತಿ ತಲುಪಿದ್ದೇವೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...