ಕೇರಳಕ್ಕೆ ಮುಂಗಾರು ವಿಳಂಬ; ಜೂನ್‌ 4ಕ್ಕೆ ಮಳೆ ಸಂಭವ

Date:

  • ಸಾಮಾನ್ಯವಾಗಿ ಮುಂಗಾರು ಪ್ರಾರಂಭವಾಗುವ ದಿನಾಂಕ ಜೂನ್ 1
  • ಈ ಬಾರಿಯ ಮುಂಗಾರು ಶೇ 95 ಮಳೆಯಾಗಲಿದೆ ಎಂದು ಐಎಂಡಿ ಹೇಳಿಕೆ

ಕೇರಳದಲ್ಲಿ ಮುಂಗಾರು ಆರಂಭವಾಗುವುದು ನಾಲ್ಕು ದಿನ ತಡವಾಗಲಿದ್ದು, ಜೂನ್ 4ರಂದು ಸಂಭವಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.

ಸಾಮಾನ್ಯವಾಗಿ ಕೇರಳ ಕರಾವಳಿಯಲ್ಲಿ ಮುಂಗಾರು ಪ್ರಾರಂಭವಾಗುವ ದಿನಾಂಕ ಜೂನ್ 1. ಇದು ನಾಲ್ಕು ತಿಂಗಳ ಮುಂಗಾರು ಋತುವಿನ ಆರಂಭವನ್ನು ಸೂಚಿಸಲಿದ್ದು, ಭಾರತದ ವಾರ್ಷಿಕ ಶೇ 75ರಷ್ಟು ಮಳೆಯನ್ನು ತರುತ್ತದೆ.

ಕಳೆದ ಐದು ವರ್ಷಗಳಲ್ಲಿ, ಜೂನ್ 1ರಂದು ಒಮ್ಮೆ ಮಾತ್ರ ಮುಂಗಾರು ಪ್ರಾರಂಭವಾಗಿದ್ದು, ಎರಡು ಸಂದರ್ಭಗಳಲ್ಲಿ, 2018 ಮತ್ತು 2022ರಲ್ಲಿ, ಮೇ 29ರೊಳಗೆ ಆಗಮಿಸಿತ್ತು. ಆದರೆ 2019 ಮತ್ತು 2021ರಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಶುರುವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಗಾರು ಆರಂಭವು ಮಳೆಗಾಲದ ಆರಂಭದ ಗುರುತು ಮಾತ್ರ. ಈ ಋತುವಿನಲ್ಲಿ ಆಗುವ ಮಳೆಯ ಪ್ರಮಾಣಕ್ಕೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ. ಈ ಬಾರಿಯ ಮುಂಗಾರಿನಲ್ಲಿ ಶೇ 95ರಷ್ಟು ಮಳೆಗಾಗಲಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಅವಕಾಶ ಕೊಟ್ಟರೆ ಕೇರಳ ಹೊತ್ತಿ ಉರಿಯಲಿದೆ: ಅರುಂಧತಿ ರಾಯ್‌

ಹವಾಮಾನ ವರದಿ ನೀಡುವ ಸ್ಕೈಮ್ಯಾಟ್‌ ಖಾಸಗಿ ಸಂಸ್ಥೆಯ ಪ್ರಕಾರ, ಮೇ 18ರಂದು ಉತ್ತರ ಭಾರತದಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ ಮತ್ತು ಮೇ ಕೊನೆಯ ವಾರದಲ್ಲಿ ಮಳೆ ಸಾಕಷ್ಟು ಪ್ರಬಲವಾಗಲಿದೆ. ಸದ್ಯಕ್ಕೆ, ಮುಂಗಾರು ಆರಂಭವು ದುರ್ಬಲವಾಗಿ ನಂತರದಲ್ಲಿ ತಡವಾಗಿ ವೇಗವನ್ನು ಹೆಚ್ಚಿಸಿಕೊಳ್ಳಲಿದೆ.

ನೈರುತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಕಳೆದ ತಿಂಗಳು ತಿಳಿಸಿತ್ತು. ಮುಂಗಾರು ಆಗಮನದ ನಂತರ ರೈತರು ಬೆಳೆಗಳನ್ನು ಬಿತ್ತನೆ ಮಾಡಲು ಪ್ರಾರಂಭಿಸುತ್ತಾರೆ.

ಕಳೆದ ಮೂರು ವರ್ಷ ರಾಜ್ಯದಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದ್ದು, ಈ ಬಾರಿಯೂ ಮುಂಗಾರು ಅವಧಿಯಲ್ಲಿ ನಿರೀಕ್ಷೆಯಂತೆ ಮಳೆಯಾಗಲಿದೆ. ಆದರೆ, ವಾಡಿಕೆ ಪ್ರಮಾಣದಲ್ಲಿ ಶೇ. 95ರಷ್ಟು ಮಳೆಯಾಗಲಿದೆ. ಈ ಪೈಕಿ ಸ್ವಲ್ಪ ಹೆಚ್ಚು ಮತ್ತು ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಈ ಹಿಂದಿನ ವರ್ಷಗಳಲ್ಲಿ ಉಂಟಾದಂತೆ ಪ್ರವಾಹ ಸೃಷ್ಟಿಯಾಗುವಂತಹ ಮಳೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

ವಾರ್ಷಿಕವಾಗಿ ರಾಜ್ಯದಲ್ಲಿ ಸುರಿಯುವ ಮಳೆಯಲ್ಲಿ ಶೇ. 70 ರಿಂದ 80ರಷ್ಟು ಮಳೆ ಮುಂಗಾರು ಅವಧಿಯಲ್ಲಿ ಆಗುತ್ತದೆ. ಉಳಿದಂತೆ ಶೇ.20ರಷ್ಟು ಮಳೆ ಹಿಂಗಾರು ಅವಧಿಯಲ್ಲಿ ಆಗುತ್ತದೆ. ಹೀಗಾಗಿ, ನೈಋುತ್ಯ ಮುಂಗಾರು ರಾಜ್ಯಕ್ಕೆ ಅತಿ ಮುಖ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...