ಆಪರೇಷನ್ ಸಿಂಧೂರ | ಸುಳ್ಳು, ವದಂತಿಗೆ ಮುಗಿಬಿದ್ದ ಭಾರತೀಯ ಮಾಧ್ಯಮಗಳು; ಸತ್ಯ ಬಿಚ್ಚಿಡುತ್ತಿರುವ ಝುಬೇರ್

Date:

ಬುಧವಾರ ಮುಂಜಾನೆ, ಪಾಕಿಸ್ತಾನದ 9 ಪ್ರದೇಶಗಳ ಮೇಲೆ ಭಾರತ ದಾಳಿ ಮಾಡಿದೆ. ಈ ದಾಳಿ ಬೆನ್ನಲ್ಲೇ ನಾನಾ ರೀತಿಯ ಸುದ್ದಿಗಳು, ವದಂತಿಗಳು ಹರಿದಾಡುತ್ತಿವೆ. ಇಸ್ರೇಲ್‌, ಹಮಾಸ್‌, ಇರಾನ್‌ನಲ್ಲಿ ಇತ್ತೀಚೆಗೆ ನಡೆದಿದ್ದ ದಾಳಿಗಳ ವಿಡಿಯೋಗಳು, ಫೋಟೋಗಳನ್ನು ಭಾರತ ನಡೆಸಿದ ದಾಳಿ ಸಮಯದ ದೃಶ್ಯಾವಳಿಗಳು ಎಂದು ಭಾರತೀಯ ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಅಲ್ಲದೆ, ಪಾಕಿಸ್ತಾನವೂ ಕೆಲವು ಸುಳ್ಳುಗಳನ್ನು ಹೇಳುತ್ತಿದೆ. ಇಂತಹ ಹಲವಾರು ಸುಳ್ಳು ಸುದ್ದಿಗಳನ್ನು ಬಯಲಿಗೆಳೆದು, ಸತ್ಯವನ್ನು ತಿಳಿಸುವಲ್ಲಿ ‘ಆಲ್ಟ್‌ ನ್ಯೂಸ್‌’ ಸಹ ಸಂಸ್ಥಾಪಕ, ಫ್ಯಾಕ್ಟ್‌ಚೆಕರ್ ಮೊಹಮ್ಮದ್ ಝುಬೇರ್ ತೊಡಗಿದ್ದಾರೆ. ಮುಂಜಾನೆಯಿಂದ ಈವರೆಗೆ ಹತ್ತಾರು ಸುಳ್ಳು ಸುದ್ದಿಗಳನ್ನು ಬೆಳಕಿಗೆ ತಂದಿದ್ದಾರೆ.

ಭಾರತದ ದಾಳಿ ವೇಳೆ, ಭಾರತೀಯ ಸೇನೆ ಸೇರಿದ ಎರಡು ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ, ಪಾಕ್‌ ಹೊಡೆದಿರುವುದು ಡ್ರೋನ್‌ಗಳನ್ನಷ್ಟೇ ಎಂಬ ಮಾಹಿತಿಯನ್ನು ಝುಬೇರ್ ಕಲೆ ಹಾಕಿದ್ದಾರೆ.

ಗಾಜಾ ಮೇಲೆ ಇಸ್ರೇಲ್ ನಡೆಸಿದ್ದ ದಾಳಿಯ ವೇಳೆ ಸಂಭವಿಸಿದ್ದ ಸ್ಪೋಟಗಳ ವಿಡಿಯೋಗಳನ್ನು ಹಲವಾರು ನೆಟ್ಟಿಗರು ಭಾರತದ ಮೇಲೆ ನಡೆಸಿದ ದಾಳಿಯ ದೃಶ್ಯಾವಳಿಗಳೆಂದು ಹಂಚಿಕೊಂಡಿದ್ದಾರೆ. ಆ ವಿಡಿಯೋಗಳ ಹಿನ್ನೆಲೆಯನ್ನು ಹುಡುಕಿ ಹೊರತೆಗೆದು ಜನರಿಗೆ ಸತ್ಯಗಳನ್ನು ಝುಬೇರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಿಪಬ್ಲಿಕ್ ಟಿವಿ ಸುದ್ದಿವಾಹಿನಿಯು ಹಳೆಯ ಮತ್ತು ಎಡಿಟ್ ಮಾಡಿದ ವಿಡಿಯೋವೊಂದನ್ನು ಪ್ರಸಾರ ಮಾಡಿದ್ದು, ಅದು ಪಾಕ್ ಮೇಲೆ ಭಾರತ ನಡೆಸಿದ ದಾಳಿಯ ವಿಡಿಯೋವೆಂದು ವರದಿ ಬಿತ್ತರಿಸಿದೆ. ಆ ವಿಡಿಯೋ ನೈಜ ವಿಡಿಯೋ ಅಲ್ಲ. ಅದೊಂದು ಎಡಿಟ್ ಮಾಡಲಾದ ವಿಡಿಯೋ ಎಂಬುದನ್ನು ಝುಬೇರ್ ಕಂಡುಹಿಡಿದಿದ್ದಾರೆ.

ಇನ್ನು, ವಿಡಿಯೋ ಗೇಮ್‌ನ ವಿಡಿಯೋಗಳನ್ನು ಪಾಕ್ ಮೇಲಿನ ದಾಳಿಯ ವಿಡಿಯೋಗಳೆಂದು ಹಲವಾರು ಹಂಚಿಕೊಂಡಿದ್ದಾರೆ. ಅಂತಹ ನಕಲಿ ವಿಡಿಯೋಗಳು, ಸುಳ್ಳು ವದಂತಿಗಳನ್ನು ಝುಬೇರ್ ಬಹಿರಂಗಗೊಳಿಸಿದ್ದಾರೆ.

ಸತ್ಯಶೋಧನೆ ಮತ್ತು ನೈಜ ಮಾಹಿತಿಗಳನ್ನು ಕಲೆ ಹಾಕುತ್ತಿರುವ ಝುಬೇರ್ ಅವರನ್ನು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಝುಬೇರ್ ಅವರ ಆಲ್ಟ್‌ನ್ಯೂಸ್‌ ಜನರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಿದೆ. ಇದೇ ಕೆಲಸವನ್ನು ಸರ್ಕಾರ ಮಾಡುವುದಿದ್ದರೆ, 100 ಕೋಟಿ ರೂ. ಬಜೆಟ್‌ ಮೀಸಲಿಡುತ್ತಿತ್ತು ಎಂದು ಕೆಲವರು ಸರ್ಕಾರವನ್ನು ಟ್ರೋಲ್ ಮಾಡಿದ್ದಾರೆ.

ಸತ್ಯವನ್ನು ಜನರ ಮುಂದಿಡುತ್ತಿರುವ ಝುಬೇರ್ ಅವರು ಭಾರತ ರತ್ನ ಪ್ರಶಸ್ತಿ ಪಡೆಯಲು ಅರ್ಹರು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾವು ಭಾರತೀಯರು, ನಾವು ಝುಬೇರ್ ಅವರ ಕೆಲಸವನ್ನು ಮೆಚ್ಚಲೇಬೇಕು ಎಂದು ಮತ್ತೊಬ್ಬ ನೆಟ್ಟಿಗರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...