ಖಲಿಸ್ತಾನ್ ನಾಯಕ ಅಮೃತ್‌ಪಾಲ್‌ ಬಂಧನಕ್ಕೆ ಸಜ್ಜು; ಪಂಜಾಬ್‌ನಾದ್ಯಂತ ಇಂಟರ್‌ನೆಟ್‌ ಸ್ಥಗಿತ

Date:

  • ಅಹಿತಕರ ಘಟನೆಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ನಾಳೆಯವರೆಗೂ ಇಂಟರ್‌ನೆಟ್‌ ಸ್ಥಗಿತ
  • ‘ವಾರಿಸ್ ಪಂಜಾಬ್‌ ದೇ’ ಎಂಬ ಮೂಲಭೂತ ಸಂಘಟನೆಯ ನೇತೃತ್ವ ವಹಿಸಿರುವ ಅಮೃತಪಾಲ್ ಸಿಂಗ್

ಖಲಿಸ್ತಾನ್ ಪ್ರಮುಖ ನಾಯಕ ಅಮೃತ್‌ ಪಾಲ್‌ ಬಂಧನಕ್ಕೆ ಪಂಜಾಬ್‌ ಪೊಲೀಸರು ತೀವ್ರಗತಿಯಲ್ಲಿ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಈಗಾಗಲೇ ಅಮೃತ್‌ಪಾಲ್‌ ಸಿಂಗ್‌ನ 6 ಕ್ಕೂ ಹೆಚ್ಚು ಸಹಚರರನ್ನು ಬಂಧಿಸಲಾಗಿದೆ. ಅಹಿತಕರ ಘಟನೆಗಳನ್ನು ತಡೆಯಲು ಪಂಜಾಬ್‌ನಲ್ಲಿ  ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಪಂಜಾಬ್‌ನ ಏಳು ಜಿಲ್ಲೆಗಳಲ್ಲಿ ಅಮೃತಪಾಲ್ ಸಿಂಗ್ ಸಹಚರರ ಬಂಧನಕ್ಕೆ ಬಲೆ ಬೀಸಲಾಗಿದೆ. ಜಲಂಧರ್‌ನ ಶಾಹಕೋಟ್‌ನ ಮೆಹತ್‌ಪುರ ಗ್ರಾಮದಲ್ಲಿ ಈತನ ಸಹಚರರನ್ನು ಪೊಲೀಸರು ಸುತ್ತುವರೆದಿದ್ದಾರೆ. ಅಮೃತಪಾಲ್ ಸಿಂಗ್ ಶಾಹಕೋಟ್‌ಗೆ ಭೇಟಿಯ ಮುನ್ಸೂಚನೆ ಇದ್ದ ಕಾರಣ ಪೊಲೀಸರು ಶಾಹಕೋಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಎಲ್ಲಾ ರಸ್ತೆಗಳನ್ನು ಮುಚ್ಚಿ ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಪ್ರಮುಖ ಸಹಚರ, ಅಪಹರಣದಲ್ಲಿ ಭಾಗಿಯಾಗಿರುವ ಆರೋಪಿ ಲವ್‌ಪ್ರೀತ್ ಸಿಂಗ್ ಬಂಧನದ ವಿರುದ್ಧ ಅಮೃತಪಾಲ್ ಸಿಂಗ್, ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಖಡ್ಗ, ಬಂದೂಕು, ಬಡಿಗೆ ಹಿಡಿದು ಅಮೃತಸರದ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಲವ್‌ಪ್ರೀತ್ ಸಿಂಗ್ ಬಿಡುಗಡೆಗೆ ಆಗ್ರಹಿಸಿದ್ದ. ವಾರಿಸ್ ಪಂಜಾಬ್ ದೇ ಸಂಘಟನೆ ಹೋರಾಟಕ್ಕೆ ಬೆದರಿದ ಪಂಜಾಬ್ ಪೊಲೀಸ್, ಒಂದು ದಿನದಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಪಂಜಾಬ್ ಪೊಲೀಸರ ಮನವಿ ಪುರಸ್ಕರಿಸಿದ ಅಜ್ನಾಲ ಕೋರ್ಟ್, ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿತ್ತು.

ಅಮೃತಪಾಲ್ ಸಿಂಗ್ ‘ವಾರಿಸ್ ಪಂಜಾಬ್‌ ದೇ’ ಎಂಬ ಮೂಲಭೂತ ಸಂಘಟನೆಯ ನೇತೃತ್ವ ವಹಿಸಿದ್ದಾನೆ. ಕಳೆದ ವರ್ಷ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಟ ಹಾಗೂ ಕಾರ್ಯಕರ್ತ ದೀಪ್ ಸಿಧು ಆರಂಭಿಸಿದ್ದ ‘ವಾರಿಸ್ ಪಂಜಾಬ್‌ ದೇ’ ಸಂಘಟನೆಯನ್ನು ಈತ ಮುನ್ನಡೆಸುತ್ತಿದ್ದಾನೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...