ಬಿಜೆಪಿ ಪ್ರಣಾಳಿಕೆಯಲ್ಲಿ ಹಣದುಬ್ಬರ, ನಿರುದ್ಯೋಗದ ಪ್ರಸ್ತಾಪವಿಲ್ಲ: ರಾಹುಲ್ ಗಾಂಧಿ

Date:

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್ ಚುನಾವಣಾ ಕಡತ ಸಂಪೂರ್ಣ ಸುಳ್ಳಿನಿಂದ ಕೂಡಿದ್ದು, ನಂಬಲರ್ಹವಲ್ಲ ಎಂದು ಟೀಕಿಸಿದೆ. ಕೇಸರಿ ಪಕ್ಷದ ಪ್ರಣಾಳಿಕೆಯಲ್ಲಿ ನಿರುದ್ಯೋಗ ಹಾಗೂ ಹಣದುಬ್ಬರವನ್ನು ನಿರ್ಲಕ್ಷಿಸಿದೆ ಎಂದು ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಜನರ ಬದುಕಿಗೆ ಅಗತ್ಯವಾದ ಬಹು ಮುಖ್ಯವಾದ ಸಮಸ್ಯೆಗಳನ್ನು ಚರ್ಚಿಸಲು ಕೂಡ ಬಯಸುವುದಿಲ್ಲ. ಹಣದುಬ್ಬರ ಹಾಗೂ ನಿರುದ್ಯೋಗದ ಬಗ್ಗೆ ಪ್ರಸ್ತಾಪವಿಲ್ಲ. ಇಂಡಿಯಾ ಒಕ್ಕೂಟದ ಯೋಜನೆ ತುಂಬ ಸ್ಪಷ್ಟವಾಗಿದೆ. ಪ್ರತಿ ವರ್ಷ 30 ಲಕ್ಷ ಉದ್ಯೋಗ ನೇಮಕಾತಿ ಹಾಗೂ ಪ್ರತಿ ವಿದ್ಯಾವಂತ ಯುವಕರಿಗೆ 1 ಲಕ್ಷ ರೂ. ಉದ್ಯೋಗ ಖಾತರಿ ದೊರಕಿಸುವುದು” ಎಂದು ತಿಳಿಸಿದ್ದಾರೆ.

“ಪ್ರಸ್ತುತ ಸಮಯದಲ್ಲಿ ಯುವಕರು ಪ್ರಧಾನಿ ಮೋದಿ ತೋಡಿದ ಹಳ್ಳಕ್ಕೆ ಬೀಳುವುದಿಲ್ಲ. ಯುವಕರು ಕಾಂಗ್ರೆಸ್ ಕೈ ಬಲಪಡಿಸಿದರೆ ದೇಶದಲ್ಲಿ ಉದ್ಯೋಗ ಕ್ರಾಂತಿ ಉಂಟಾಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯ ಪ್ರಣಾಳಿಕೆ ಸಂವಿಧಾನವನ್ನು ಬದಲಿಸುವ ಪತ್ರ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.

“ನೆನಪಿಡಿ, ಬಿಜೆಪಿಯು ತಳಮಟ್ಟದಿಂದ ದೇಶ, ಸಮಾಜ ಹಾಗೂ ಪ್ರಜಾಪ್ರಭುತ್ವದ ವಿರುದ್ಧ ಎಲ್ಲ ರೀತಿಯ ಪಿತೂರಿಗಳನ್ನು ಆರಂಭಿಸಿದೆ. ಆರಂಭದಲ್ಲಿ ಪ್ರಮುಖ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿ, ಸಂಜೆಯಾಗುತ್ತಿದ್ದಂತೆ ಸಂವಿಧಾನವನ್ನು ನಾಶಪಡಿಸುವ ವರದಿಯನ್ನು ತಯಾರಿಸುತ್ತಾರೆ. ಮುಂದೆ ಸಂಪೂರ್ಣವಾಗಿ ಅಧಿಕಾರಕ್ಕೆ ಬಂದರೆ ಅವರು ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ” ಎಂದು ಪ್ರಿಯಾಂಕಾ ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಬಾಬಾ ಸಾಹೇಬ್‌ ಅವರ ಸಂವಿಧಾನ ಭಾರತದ ಆತ್ಮವಾಗಿದ್ದು,ಎಲ್ಲ ವಿಪಕ್ಷಗಳು ಬಿಜೆಪಿ ಸೋಲಿಸಲು ಒಂದಾಗಿವೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದರು.

“ಇಂದು ನಾವೆಲ್ಲರೂ ಸಂವಿಧಾನ ಬದಲಿಸುವ ಬಿಜೆಪಿ ಯೋಜನೆಯ ವಿರುದ್ಧ ಒಂದಾಗಿದ್ದು, ದೇಶವು ಸಂವಿಧಾನದಿಂದ ಮುನ್ನಡೆಯಲಿದೆ ಎಂದು ಘಂಟಾಘೋಷವಾಗಿ ಹೇಳುತ್ತೇವೆ. ಸಂವಿಧಾನ ಬದಲಿಸುವ ಅವರ ಉದ್ದೇಶವನ್ನು ನಾವೆಲ್ಲರೂ ಒಟ್ಟಾಗಿ ಸೋಲಿಸುತ್ತೇವೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ರೈತರ ಆದಾಯವನ್ನು ದ್ವಿಗುಣ ಮಾಡುತ್ತೇನೆ ಎಂದು ಹೇಳಿದ್ದರು. ಎಂಎಸ್‌ಪಿಯನ್ನು ಹೆಚ್ಚಿಸಿ ಗ್ಯಾರಂಟಿ ಖಾತರಿ ನೀಡುತ್ತೇನೆ ಎಂದಿದ್ದರು. ತಮ್ಮ ಅವಧಿಯಲ್ಲಿ ದೇಶದ ಜನರಿಗಾಗಿ ಸುಳ್ಳು ಹೇಳುವುದನ್ನು ಬಿಟ್ಟು ಅಂತಹ ದೊಡ್ಡ ಅನುಕೂಲಗಳನ್ನು ಅವರು ಮಾಡಿಲ್ಲ ಎಂದು ಹರಿಹಾಯ್ದರು.

ಬಿಜೆಪಿ ಇಂದು ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು,ಏಕರೂಪ ನಾಗರಿಕ ಸಂಹಿತೆ, ಒಂದು ದೇಶ ಒಂದು ಚುನಾವಣೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...