ಜಮ್ಮು ಕಾಶ್ಮೀರ ನಿಗೂಢ ಕಾಯಿಲೆಗೆ ‘ಆರ್ಗನೊಫಾಸ್ಫರಸ್’ ವಿಷ ಕಾರಣ: ತಜ್ಞರು

Date:

ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಕನಿಷ್ಠ 17 ಜೀವಗಳನ್ನು ಬಲಿ ಪಡೆದಿರುವ ‘ನಿಗೂಢ ಕಾಯಿಲೆ’ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ತಜ್ಞರು ‘ಆರ್ಗನೊಫಾಸ್ಫರಸ್’ ವಿಷವು ಈ ಕಾಯಿಲೆಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.

ಆರ್ಗನೊಫಾಸ್ಫರಸ್ ವಿಷವನ್ನು ಎದುರಿಸಲು ಪ್ರತಿವಿಷವನ್ನು ನೀಡಲಾಗಿದೆ, ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯದ ಮೇಲೆ ಇದು ಉತ್ತಮವಾದ ಪ್ರಭಾವ ಬೀರಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಬಲಿ; ‘ಕಂಟೈನ್ಮೆಂಟ್ ಝೋನ್’ ಘೋಷಣೆ, ವೈದ್ಯರ ರಜೆ ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಅಟ್ರೋಪಿನ್ ಪ್ರತಿವಿಷವನ್ನು ಬಳಿಸಿದ್ದೇವೆ. ಅದು ಚೆನ್ನಾಗಿ ಕೆಲಸ ಮಾಡಿದೆ. ವಿಷದ ನಿಖರವಾದ ಸ್ವರೂಪವನ್ನು ನಿರ್ಧರಿಸಿದ ನಂತರ ನಾವು ರೋಗಿಗಳಿಗೆ ಅಟ್ರೋಪಿನ್ ನೀಡಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಾಧಾಲ್ ಗ್ರಾಮದಲ್ಲಿ ಸಾವುಗಳ ಹಿಂದೆ ಸಾಂಕ್ರಾಮಿಕ ರೋಗ ಅಥವಾ ವೈರಸ್‌ಗಳು ಅಥವಾ ಬ್ಯಾಕ್ಟೀರಿಯಾಗಳು ಕಾರಣವಲ್ಲ ಎಂಬುದು ಪ್ರಯೋಗಾಲಯದಲ್ಲಿ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಕಾರಣವನ್ನು ಪತ್ತೆ ಹಚ್ಚುವುದು ಅತೀ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಹಾಗಾಗಿ ನಿಗೂಢ ಕಾಯಿಲೆ ಎಂದೇ ಕರೆಯಲಾಗಿತ್ತು.

ಭಾರತದ ಆಹಾರ ಸುರಕ್ಷತಾ ಮಾನದಂಡಗಳ ಪ್ರಾಧಿಕಾರವು ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರ ಆರೋಗ್ಯ ಇಲಾಖೆಗೆ ಪರೀಕ್ಷೆಯಲ್ಲಿ ಆರ್ಗನೊಫಾಸ್ಫರಸ್ ಕಂಡುಬಂದಿದೆ. ಅದು ಸಾವಿಗೆ ಕಾರಣ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

“ಆಹಾರ ಮತ್ತು ನೀರಿನಲ್ಲಿ ಆರ್ಗನೊಫಾಸ್ಫರಸ್ ಬಳಕೆಯು ನರಹತ್ಯೆಯೇ ಅಥವಾ ಆಕಸ್ಮಿಕವೇ ಎಂಬುದು ಈಗ ತನಿಖೆಯ ವಿಷಯವಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದರು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಾವುಗಳ ತನಿಖೆಗಾಗಿ ವಿಶೇಷ ತನಿಖಾ ತಂಡ ಅಥವಾ ಎಸ್‌ಐಟಿಯನ್ನು ರಚಿಸಿದ್ದಾರೆ.

ಕಳೆದ ವಾರ, ಅಧಿಕಾರಿಗಳು ಗ್ರಾಮವನ್ನು ಕಂಟೈನ್‌ಮೆಂಟ್ ವಲಯವೆಂದು ಘೋಷಿಸಿ 200ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಿದರು. ಇದರ ಹೊರತಾಗಿ, ಗ್ರಾಮಸ್ಥರು ಉಪಯೋಗಿಸುತ್ತಿದ್ದ ನೀರಿನ ಮೂಲದಲ್ಲಿ ಕೀಟನಾಶಕಗಳು ಕಂಡುಬಂದಿದೆ. ತನಿಖೆಗಾಗಿ ಸದ್ಯ ಅದನ್ನೂ ಮುಚ್ಚಲಾಗಿದೆ. ಗ್ರಾಮಸ್ಥರು ಬಳಸಿದ ಆಹಾರ ಪದಾರ್ಥಗಳನ್ನು ಸಹ ಪರೀಕ್ಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...