ಒಡಿಶಾ: ಕ್ಷಿಪಣಿ ಉಡಾವಣೆ ಪರೀಕ್ಷೆಗಾಗಿ 10 ಸಾವಿರ ಜನರ ಸ್ಥಳಾಂತರ

Date:

ಒಡಿಶಾದ ಕರಾವಳಿಯಲ್ಲಿ ಸಂಯೋಜಿತ ಪರೀಕ್ಷಾ ಶ್ರೇಣಿಯ(ಐಟಿಆರ್) ಕ್ಷಿಪಣಿ ಉಡಾವಣೆ ಪರೀಕ್ಷೆಗಾಗಿ ಪರೀಕ್ಷಾ ಶ್ರೇಣಿಯ ಗ್ರಾಮಗಳಲ್ಲಿರುವ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಮುಂಜಾಗೃತ ಕ್ರಮವಾಗಿ ರಕ್ಷಣಾ ಇಲಾಖೆಯ ಅಧಿಕಾರಿಗಳು ಬಾಲ್‌ಸೋರೆ ಜಿಲ್ಲೆಯ ಅಧಿಕಾರಿಗಳ ಸಹಾಯದಿಂದ ಮಹಿಳೆಯರು, ಮಕ್ಕಳು ಹಾಗೂ ಜಾನುವಾರುಗಳು ಸೇರಿದಂತೆ 3.5 ಕಿ.ಮೀ ಶ್ರೇಣಿಯಲ್ಲಿರುವ 10 ಗ್ರಾಮಗಳ 10,581 ಜನರನ್ನು ಐಟಿಆರ್‌ ಉಡಾವಣೆಗೊಳಿಸುವ ಸ್ಥಳದಿಂದ ದೂರದಲ್ಲಿರುವ ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಬರ್ದಾನ್‌ಪುರ್‌ನ 2725, ಜಯದೇವಕಾಸೇಬಾದಿಂದ 2725, ಭೀಮ್‌ಪುರ್‌ನಿಂದ 1823, ಕುಸುಮಲಿಯಿಂದ 1307 ಸೇರಿ ಹಲವು ಗ್ರಾಮಗಳ ಜನರನ್ನು ವಿವಿಧ ಸ್ಥಳಗಳಲ್ಲಿರುವ ಸುರಕ್ಷಿತ ತಾತ್ಕಾಲಿಕ ಪುನರ್‌ವಸತಿ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

“ಜನರು ಸುರಕ್ಷಿತ ಸ್ಥಳಗಳ ಆಶ್ರಯಗಳಲ್ಲಿ ಉಳಿದುಕೊಳ್ಳಲು ವಿಸ್ತಾರವಾದ ವ್ಯವಸ್ಥೆಗಳನ್ನು ನಾವು ಕೈಗೊಂಡಿದ್ದೇವೆ. ಮೂವರು ಪೊಲೀಸ್‌ ಅಧಿಕಾರಿಗಳ ಪ್ರತ್ಯೇಕ ತಂಡ ಸಾರ್ವಜನಿಕರ ರಕ್ಷಣೆಯ ಉಸ್ತುವಾರಿ ವಹಿಸಿಕೊಂಡಿದೆ. ವೈದ್ಯಕೀಯ ತಂಡ ಪಶು ವೈದ್ಯಕೀಯ ತಂಡ ಸೇರಿದಂತೆ ಹಲವು ತಂಡಗಳನ್ನು ಜನರ ಅಗತ್ಯ ಸೌಕರ್ಯ ನೀಡಿಕೆಗಾಗಿ ನಿಯೋಜಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾತ್ಕಾಲಿಕ ಶಿಬಿರಗಳಲ್ಲಿ ಉಳಿದುಕೊಳ್ಳುವ ಜನರಿಗೆ ಪ್ರತಿಯೊಬ್ಬರಿಗೆ ಆಹಾರ ವೆಚ್ಚವೂ ಸೇರಿ 400 ರೂ. ನೀಡಲಾಗುತ್ತಿದೆ. ಜಾನುವಾರು ಹೊಂದಿರುವವರಿಗೆ ಹೆಚ್ಚುವರಿ 100 ರೂ. ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ನೂತನ ಪರೀಕ್ಷಾ ಪದ್ಧತಿಯ ಪ್ರಯೋಗಾತ್ಮಕ ಪರೀಕ್ಷೆಗೆ ಎಲ್ಲ ರೀತಿಯ ವೇದಿಕೆ ಸಿದ್ಧವಾಗಿದೆ. ನಿರ್ಣಾಯಕ ಪರೀಕ್ಷೆಗಾಗಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅಂದುಕೊಂಡಂತೆ ಎಲ್ಲ ಯೋಜನೆ, ಕಾರ್ಯಕ್ರಮಗಳು ನಡೆದರೆ ನಿಗದಿತ ವೇಳೆಯೊಳಗೆ ಕ್ಷಿಪಣಿಯನ್ನು ಹಾರಾಟ ಪರೀಕ್ಷೆಗೆ ಒಳಪಡಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...