ದೆಹಲಿ | 4000ಕ್ಕೂ ಅಧಿಕ ಬಾದಾಮಿ ಗೋದಾಮು ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

Date:

ದೆಹಲಿಯ ಕರವಲ್ ನಗರದ ಬಾದಾಮಿ ಗೋದಾಮಿನಲ್ಲಿ ಕೆಲಸ ಮಾಡುವ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರವನ್ನು ಮಾಡುತ್ತಿದ್ದಾರೆ. ಮಾರ್ಚ್ ಒಂದರಿಂದ ಈ ಮುಷ್ಕರ ಆರಂಭವಾಗಿದ್ದು, ಕಾರ್ಮಿಕರು ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಕಾರ್ಮಿಕರ ಒಟ್ಟು ಹನ್ನೊಂದು ಬೇಡಿಕೆಗಳ ಪೈಕಿ ವೇತನ ಹೆಚ್ಚಳ ಮತ್ತು ನಿಗದಿತ ಅವಧಿಯ ಕೆಲಸ ಪ್ರಮುಖ ಬೇಡಿಕೆಯಾಗಿದೆ. ಈ ಕಾರ್ಮಿಕರು ಸುಲಿಯುವ ಪ್ರತಿ ಕೆಜಿ ಬಾದಾಮಿಗೆ (almond) ಎರಡು ರೂಪಾಯಿ ಕೂಲಿಯನ್ನು ಪಡೆಯುತ್ತಾರೆ. ಹಾಗೆಯೇ ದಿನಕ್ಕೆ ಸುಮಾರು 12 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಕಾರ್ಮಿಕರಾದ ಲಲಿತಾ, “ವೇತನ ಹೆಚ್ಚಳಕ್ಕಾಗಿ ನಾವು 2012ರಲ್ಲಿ ಪ್ರತಿಭಟನೆ ಮಾಡಿದ್ದು, ಆಗ ನಮ್ಮ ಕೂಲಿಯನ್ನು ಪ್ರತಿ ಕೆಜಿ ಬಾದಾಮಿಗೆ ಎರಡು ರೂಪಾಯಿಯಂತೆ ಏರಿಸಲಾಗಿದೆ. ಪ್ರತಿ ವರ್ಷವೂ ಕೂಲಿ ಹೆಚ್ಚಿಸುವ ಭರವಸೆ ಗೋದಾಮಿನ ಮಾಲೀಕರು ನೀಡಿದ್ದಾರೆ. ಆದರೆ 12 ವರ್ಷಗಳಿಂದ ಕೂಲಿ ಹೆಚ್ಚಳ ಮಾಡಲಾಗಿಲ್ಲ. ಈಗ ನಾವು ಪ್ರತಿ ಕೆಜಿಗೆ 12 ರೂಪಾಯಿ ನೀಡುವ ಬೇಡಿಕೆ ಇರಿಸಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಡಿಟಿವಿಗೆ ಪ್ರತಿಕ್ರಿಯಿಸಿದ ಮಹಿಳಾ ಕಾರ್ಮಿಕರಾದ ರಂಜು “ನಾವು ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮಾಡುತ್ತಿದ್ದೇವೆ, ವೇತನ ಹೆಚ್ಚಳ ಪಡೆಯಲು ನಾವು ಅರ್ಹರು. ನಮ್ಮ ಗೋದಾಮಿನ ಮಾಲೀಕರು ನಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಾರೆ ಮತ್ತು ಅಧಿಕ ಅವಧಿ ಕೆಲಸ ಮಾಡಿಸುತ್ತಾರೆ. ನಾವು ಹಲವಾರು ವರ್ಷಗಳಿಂದ ಕೂಲಿ ಏರಿಕೆಗೆ ಆಗ್ರಹಿಸುತ್ತಿದ್ದೇವೆ. ಆದರೆ ಏರಿಕೆ ಮಾಡಿಲ್ಲ. ನಮ್ಮ ಬೇಡಿಕೆ ಈಡೇರಿಸಬೇಕು, ಇಲ್ಲದಿದ್ದಲ್ಲಿ ನಮ್ಮ ಮುಷ್ಕರ ನಿಲ್ಲದು” ಎಂದು ಎಚ್ಚರಿಕೆ ನೀಡಿದರು.

“ಮಾರ್ಚ್ 11ರಂದು ನಮ್ಮ ರ್‍ಯಾಲಿ ಮೇಲೆ ದಾಳಿ ನಡೆಸಲಾಗಿದ್ದು ಹತ್ತು ಮಂದಿ ಆಸ್ಪತ್ರೆ ಸೇರಿದ್ದಾರೆ. ನಾವು ಪೊಲೀಸ್ ಠಾಣೆಗೆ ಹೋಗಿದ್ದು, ಪೊಲೀಸರು ನಮಗೆ ಸಹಾಯ ಮಾಡಿಲ್ಲ. ಮಾರ್ಚ್ 13ರಂದು ಕೆಲವು ಗೂಂಡಾಗಳು ಪ್ರತಿಭಟನಾಕಾರರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ” ಎಂದು ಕಾರ್ಮಿಕರು ಹೇಳಿದ್ದಾರೆ.

ಇನ್ನು ಈ ಕಾರ್ಮಿಕರು ಮುಂಜಾನೆ 4 ಗಂಟೆಗೆ ಗೋದಾಮಿಗೆ ಬಂದು ಸಂಜೆ 6 ಗಂಟೆಯವರೆಗೆ ಕೆಲಸ ಮಾಡುತ್ತಾರೆ. ಆದರೆ 150-200 ರೂಪಾಯಿ ಮಾತ್ರ ದುಡಿಯಲು ಸಾಧ್ಯವಾಗುತ್ತದೆ. ಆದ್ದರಿಂದಾಗಿ ಈಗ ಕಾರ್ಮಿಕರು ದಿನಕ್ಕೆ ಎಂಟು ಗಂಟೆ ಕೆಲಸದ ಬೇಡಿಕೆ ಇರಿಸಿದ್ದಾರೆ. ಪ್ರತಿ ಕೆಜಿ ಬಾದಾಮಿಗೆ 12 ರೂಪಾಯಿ ನೀಡಬೇಕು, ಈ ವೇತನವನ್ನು ಪ್ರತಿ ತಿಂಗಳ ಐದು ದಿನದ ಒಳಗಾಗಿ ನೀಡಬೇಕೆಂದು ಆಗ್ರಹಿಸಿದ್ದಾರೆ.

4000ಕ್ಕೂ ಅಧಿಕ ಬಾದಾಮಿ ಗೋದಾಮು ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವುದರಿಂದಾಗಿ ದೆಹಲಿಯ ಕರವಲ್ ನಗರದ ಬಹುತೇಕ ಎಲ್ಲ ಗೋದಾಮುಗಳು ಮುಚ್ಚಿವೆ. ಕೆಲವು ಗೋದಾಮು ಮಾಲೀಕರು ತಮಗೆ ನಷ್ಟವಾಗುತ್ತಿದೆ ಎಂದರೆ ಇನ್ನು ಕೆಲವು ನಮಗೆ ಇತರೆ ಉದ್ಯಮಗಳು ಕೂಡಾ ಇದೆ ಎನ್ನುತ್ತಿದ್ದಾರೆ. ಕಾರ್ಮಿಕರ ಗೋಳು ಕೇಳಬೇಕಾದ ಸರ್ಕಾರ, ಕಿವುಡಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...