2023ರ ಭಾರತದ ಪ್ರಾಕೃತಿಕ ವಿಕೋಪ, ಹಿಂಸಾಚಾರ: 5 ಲಕ್ಷ ಮಂದಿ ಸ್ಥಳಾಂತರ

Date:

ಭಾರತದಲ್ಲಿ 2013ರಲ್ಲಿ ಉಂಟಾದ ನೆರೆ, ಚಂಡಮಾರುತಗಳು, ಭೂಕಂಪ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪ ಗಳಿಂದ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಮೂಲ ನೆಲೆಯಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಜಿನಿವಾ ಮೂಲದ ಆಂತರಿಕ ಸ್ಥಳಾಂತರ ಮೇಲ್ವಿಚಾರಣೆ ಕೇಂದ್ರ(ಐಡಿಎಂಸಿ) ವರದಿ ನೀಡಿದೆ.

ಐಡಿಎಂಸಿಯ ವಾರ್ಷಿಕ ವರದಿ ‘ಆಂತರಿಕ ಸ್ಥಳಾಂತರದ ಮೇಲೆ ಜಾಗತಿಕ ವರದಿ’ಯು ಭಾರತದಲ್ಲಿ ಸ್ಥಳಾಂತರಗೊಂಡವರ ಸಂಖ್ಯೆ 2022ರಿಂದ 2023ರಕ್ಕೆ ಹೋಲಿಸಿದರೆ ತೀವ್ರ ಕುಸಿತಗೊಂಡಿದೆ. ಹವಾಮಾನ ಬದಲಾವಣೆ ಆಗಾಗ ಕೆಲವು ಅಪಾಯಗಳನ್ನು ತಂದೊಡ್ಡುತ್ತದೆ ಹಾಗೂ ಸಮುದಾಯಗಳನ್ನು ಹೆಚ್ಚು ದುರ್ಬಲಗೊಳಿಸುತ್ತದೆ ಎಂದು ವರದಿಯು ಒತ್ತಿ ಹೇಳಿದೆ.

2022ರಲ್ಲಿ ಪ್ರಾಕೃತಿಕ ವಿಕೋಪಗಳಿಂದ 25 ಲಕ್ಷ ಮಂದಿ ಸ್ಥಳಾಂತರಗೊಂಡಿದ್ದರು. 2023ರಲ್ಲಿ ಈ ಸಂಖ್ಯೆ 5,28,000ಕ್ಕೆ ಇಳಿದಿದೆ ಎಂದು ಐಡಿಎಂಸಿ ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ ಈಶಾನ್ಯ ರಾಜ್ಯ ಮಣಿಪುರಲ್ಲಿ 2023ರಲ್ಲಿ ನಡೆದ ಹಿಂಸಾಚಾರ ಹಾಗೂ ಘರ್ಷಣೆಯಲ್ಲಿ 67 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ಈ ಸಂಖ್ಯೆ ಈ ವರ್ಷ ಹೆಚ್ಚಿದ್ದು, ಕಳೆದ ವರ್ಷ 2022ರಲ್ಲಿ 1000 ಮಂದಿ ಮಾತ್ರ ಹಿಂಸಾಚಾರದಿಂದ ಸ್ಥಳಾಂತಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಪ್ರವಾಹ ಹಾಗೂ ಚಂಡಮಾರುತದಿಂದ ಜನರು ತಮ್ಮ ಮನೆಗಳನ್ನು ಬಿಟ್ಟು ತೆರಳಲು ಕಾರಣವಾಗಿದ್ದು, ಸಾಮಾನ್ಯವಾಗಿ ಪ್ರಾಕೃತಿಕ ವಿಕೋಪ ಉಂಟಾದ ಸ್ಥಳಗಳಲ್ಲಿಯೇ ಆಗಾಗ ಈ ಘಟನೆ ಹೆಚ್ಚು ಸಂಭವಿಸುತ್ತದೆ.

ಏಳು ವರ್ಷಗಳಲ್ಲಿ ಮೊದಲ ಬಾರಿ 2023ರ ಮಧ್ಯದಲ್ಲಿ ಉಂಟಾದ ಎಲ್‌ನಿನೊ ಪರಿಣಾಮ ಬದಲಾವಣೆಗೊಂಡಿರುವುದು ಕೂಡ ಸ್ಥಳಾಂತರಗೊಂಡವರ ಸಂಖ್ಯೆ ಕಡಿಮೆಯಾಗಲು ಪ್ರಮುಖ ಕಾರಣವಾಗಿದೆ. ಈ ಬಾರಿ ಭಾರತದಲ್ಲಿ ಮಳೆ ಕಡಿಮೆಯಾಗಿದ್ದು, ಅದರ ಪರಿಣಾಮ ಪ್ರವಾಹ ಸಂಬಂಧಿತ ವಿಕೋಪಗಳು ಕೂಡ ಇಳಿಕೆಯಾಗಿವೆ ಎಂದು ಐಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಎಲ್‌ನಿನೊ ಪರಿಣಾಮಗಳು ಬದಲಾವಣೆಯಿಂದ ಈ ಬಾರಿ ನೈರುತ್ಯ ಮುಂಗಾರಿನಲ್ಲಿ ಶೇ.5.6 ರಷ್ಟು ಕಡಿಮೆಯಾಗಿದೆ. ವರದಿ ಪ್ರಕಾರ 1,05,000 ಮಂದಿ ಗುಜರಾತ್‌ ಮತ್ತು ರಾಜಸ್ಥಾನದಿಂದ, 91 ಸಾವಿರ ಅಸ್ಸಾಂನಿಂದ ಹಾಗೂ 27 ಸಾವಿರ ದೆಹಲಿಯಿಂದ ಪ್ರವಾಹ ಮುಂತಾದ ಪರಿಸ್ಥಿತಿಯಿಂದಾಗಿ ಸ್ಥಳಾಂತರಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...