ಕೋಲ್ಡ್ರಿಫ್ ಸಿರಪ್ ದುರಂತ: ಮಕ್ಕಳ ಸಾವುಗಳಿಗೆ ಕಾರಣವಾದ ಔಷಧ ಕಂಪನಿ ಮಾಲೀಕ ರಂಗನಾಥನ್ ಬಂಧನ

Date:

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕನಿಷ್ಠ 19 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್‌ರಿಫ್ ಕಫ್ ಸಿರಪ್ ತಯಾರಿಕಾ ಕಂಪನಿ ಶ್ರೀಸನ್ ಫಾರ್ಮಾಸ್ಯೂಟಿಕಲ್ಸ್‌ನ ಮಾಲೀಕ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಕಳೆದ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿರಪ್‌ನಲ್ಲಿ ವಿಷಕಾರಿ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದೆ. ರಂಗನಾಥನ್ ಅವರನ್ನು ತನಿಖೆಗಾಗಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ತೆಗೆದುಕೊಂಡ ಬಳಿಕ ಬಂಧನಕ್ಕೊಳಗಾಗಿದ್ದಾರೆ. ಅವರನ್ನು ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಗೆ ಕರೆತರಲಾಗುವುದು, ಅಲ್ಲಿ ಹೆಚ್ಚಿನ ಸಾವುಗಳು ವರದಿಯಾಗಿವೆ.

ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯು ಬಿಡುಗಡೆ ಮಾಡಿದ 26 ಪುಟಗಳ ವರದಿಯಲ್ಲಿ, ಕಂಪನಿಯ ಕಾರ್ಖಾನೆಯಲ್ಲಿ ಅಸಹ್ಯಕರ ಪರಿಸ್ಥಿತಿಗಳಲ್ಲಿ ಸಿರಪ್ ತಯಾರಿಸಲಾಗುತ್ತಿದ್ದುದನ್ನು ಬಹಿರಂಗಪಡಿಸಿದೆ. 350ಕ್ಕೂ ಹೆಚ್ಚು ಉಲ್ಲಂಘನೆಗಳನ್ನು ವರದಿ ಮಾಡಲಾಗಿದ್ದು,ಫಾರ್ಮಾ ಗ್ರೇಡ್ ಅಲ್ಲದ ರಾಸಾಯನಿಕಗಳ ಬಳಕೆ, ಮತ್ತು ನೈಜ ಪ್ರಮಾಣಕ್ಕಿಂತ ಹೆಚ್ಚಾದ ವಿಷಕಾರಿ ಡೈಇಥಿಲಿನ್ ಗ್ಲೈಕಾಲ್ (ಶೇ 48) ಮಿಶ್ರಣ ಸೇರಿದಂತೆ ಹಲವು ಗಂಭೀರ ಅಕ್ರಮಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

ಕಂಪನಿಗೆ ಉತ್ತಮ ತಯಾರಿಕಾ ಪ್ರಮಾಣಪತ್ರ (GMP) ಇರದಿದ್ದರೂ, ಅವರು ಔಷಧ ತಯಾರಿಕೆ ಮತ್ತು ಮಾರಾಟ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ನಿಯಂತ್ರಣ ಮಂಡಳಿ ಕಂಪನಿಯ ಪರವಾನಗಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಉತ್ಪಾದನೆ ನಿಲ್ಲಿಸಲು ಆದೇಶಿಸಿದೆ. ಈ ಬೆಳವಣಿಗೆಯ ನಂತರ, ಕೇಂದ್ರ ಔಷಧ ಮಾನದಂಡ ನಿಯಂತ್ರಣ ಸಂಸ್ಥೆ (CDSCO) ಮತ್ತು ಆರೋಗ್ಯ ಸಚಿವಾಲಯ ಕಂಪನಿಯ ತಯಾರಿಕಾ ಪರವಾನಗಿ ರದ್ದುಪಡಿಸಲು ಶಿಫಾರಸು ಮಾಡಿವೆ.

ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಔಷಧ ತಯಾರಿಕಾ ಘಟಕಗಳಲ್ಲಿ ನಿಯಮ ಪಾಲನೆ ಖಚಿತಪಡಿಸುವ ಜವಾಬ್ದಾರಿ ರಾಜ್ಯ ಔಷಧ ನಿಯಂತ್ರಕರದ್ದಾಗಿದೆ. ತಯಾರಿಕಾ ಪರವಾನಗಿ (Form 25) ನೀಡುವುದು ಮತ್ತು ರದ್ದುಪಡಿಸುವ ಅಂತಿಮ ನಿರ್ಧಾರವನ್ನು ರಾಜ್ಯ ಔಷಧ ನಿಯಂತ್ರಕವೇ ಕೈಗೊಳ್ಳಲಿದೆ .

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...