‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ’; ನೆರವಾದ ಮುಸ್ಲಿಮರಿಗಾಗಿ ಸಂತ್ರಸ್ತೆ ಪ್ರಾರ್ಥನೆ

Date:

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ. ಅಲ್ಲಾಹು ಅವರನ್ನು ಅನುಗ್ರಹಿಸಲಿ’ ಎಂದು ಪಹಲ್ಗಾಮ್‌ನಿಂದ ತನ್ನೂರಿಗೆ ಮರಳಿರುವ ಕೇರಳದ ಕೊಚ್ಚಿಯ ಆರತಿ ಆರ್‌ ಮೆನನ್ ಪ್ರಾರ್ಥಿಸಿದ್ದಾರೆ.

ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರತಿ ತನ್ನ ತಂದೆ ಎನ್. ರಾಮಚಂದ್ರನ್‌ ಅವರನ್ನು ಕಳೆದುಕೊಂಡಿದ್ದಾರೆ. ತಂದೆಯನ್ನು ಕಳೆದುಕೊಂಡು ದಿಕ್ಕು ಕಾಣದಂತಾಗಿದ್ದ ಆರತಿ ಅವರಿಗೆ ಇಬ್ಬರು ಸ್ಥಳೀಯ ಮುಸ್ಲಿಮರು ನೆರವು ನೀಡಿದ್ದಾರೆ. ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಕರೆತಂದಿದ್ದಾರೆ. ಇದೀಗ, ಆರತಿ ಕೊಚ್ಚಿಗೆ ಮರಳಿದ್ದು, ಅಲ್ಲಿ ತಾವು ಎದುರಿಸಿದ ಸಂದರ್ಭದ ಬಗ್ಗೆ ಹಂಚಿಕೊಂಡಿದ್ದಾರೆ.

“ಇಬ್ಬರು ಕಾಶ್ಮೀರಿ ಮುಸ್ಲಿಮರು ನನ್ನನ್ನು ಸಹೋದರಿಯಂತೆ ನೋಡಿಕೊಂಡು ನನಗೆ ಬಹಳಷ್ಟು ಸಹಾಯ ಮಾಡಿದರು. ಈಗ ನನಗೆ ಕಾಶ್ಮೀರದಲ್ಲಿ ಇಬ್ಬರು ಸಹೋದರರು ಇದ್ದಾರೆ. ಅಲ್ಲಾಹನು ಅವರಿಬ್ಬರನ್ನೂ ರಕ್ಷಿಸಲಿ” ಎಂದು ಭಾವುಕರಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ನಾನು ನನ್ನ ತಂದೆ ಮತ್ತು ಮಕ್ಕಳೊಂದಿಗೆ ಬೈಸರನ್‌ನ ಹುಲ್ಲುಗಾವಲಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಉಗ್ರರು ದಾಳಿ ಮಾಡಿದರು. ಮೊದಲಿಗೆ ಅದು ಪಟಾಕಿ ಎಂದು ನಾವು ಭಾವಿಸಿದ್ದೆವು… ಆದರೆ ಮುಂದಿನ ಗುಂಡೇಟಿನೊಂದಿಗೆ, ಅದು ಭಯೋತ್ಪಾದಕ ದಾಳಿ ಎಂಬುದು ತಿಳಿಯಿತಿ…” ಎಂದು ಆರತಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾವು ತಪ್ಪಿಸಿಕೊಳ್ಳಲು ಬೇಲಿಯ ಕೆಳಗೆ ತೆವಳಿದೆವು. ಜನರು ಎಲ್ಲ ದಿಕ್ಕುಗಳಲ್ಲಿಯೂ ಚದುರಿಹೋದರು. ನಾವು ತಪ್ಪಿಕೊಂಡು ಹೋಗುವಾಗ, ಕಾಡಿನಿಂದ ಒಬ್ಬ ವ್ಯಕ್ತಿ ಹೊರಬಂದನು. ಅವನು ನಮ್ಮತ್ತ ನೇರವಾಗಿ ನೋಡಿದನು. ಆ ಅಪರಿಚಿತ ವ್ಯಕ್ತಿ ನಮಗೆ ಅರ್ಥವಾಗದ ಮಾತುಗಳನ್ನು ಹೇಳಿದರು. ನಮಗೆ ಗೊತ್ತಿಲ್ಲ ಎಂದು ನಾವು ಉತ್ತರಿಸಿದೆವು. ಮರುಕ್ಷಣವೇ ಅವನು ಗುಂಡು ಹಾರಿಸಿದ, ಈ ವೇಳೆ ನನ್ನ ತಂದೆ ನಮ್ಮ ಪಕ್ಕದಲ್ಲಿ ಕುಸಿದುಬಿದ್ದರು,” ಎಂದು ಆರತಿ ಹೇಳಿದ್ದಾರೆ.

“ನನ್ನ ಮಕ್ಕಳು ಕಿರುಚಲು ಪ್ರಾರಂಭಿಸಿದರು, ಮತ್ತು ಆ ವ್ಯಕ್ತಿ ಹೊರಟುಹೋದನು. ನನ್ನ ತಂದೆ ಮೃತಪಟ್ಟಿದ್ದಾರೆಂದು ನನಗೆ ತಿಳಿದಿತ್ತು. ನಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಯದೆ, ನನ್ನ ಅವಳಿ ಮಕ್ಕಳನ್ನು ಹಿಡಿದುಕೊಂಡು ಕಾಡಿಗೆ ಓಡಿಹೋದೆ. ಸುಮಾರು ಒಂದು ಗಂಟೆಗಳ ಕಾಲ ಅರಣ್ಯದ ಮೂಲಕ ಅಲೆದಾಡಿದೆ” ಎಂದು ಅವರು ವಿವರಿಸಿದ್ದಾರೆ.

“ಕೊನೆಗೆ ಫೋನ್‌ಗೆ ಸಿಗ್ನಲ್ ಸಿಕ್ಕಾಗ ಕಾಶ್ಮೀರದಲ್ಲಿ ನಮ್ಮನ್ನು ಪ್ರಯಾಣವನ್ನು ನಿರ್ವಹಿಸುತ್ತಿದ್ದ ನಮ್ಮ ಚಾಲಕ ಮುಸಾಫಿರ್‌ಗೆ ಕರೆ ಮಾಡಿದೆ. ಮುಸಾಫಿರ್ ಮತ್ತು ಇನ್ನೊಬ್ಬ ವ್ಯಕ್ತಿ ಸಮೀರ್ ನಮ್ಮ ಸಹಾಯಕ್ಕೆ ಧಾವಿಸಿದರು. ಅವರ ಕುಟುಂಬದವರಂತೆ ನಮ್ಮನ್ನು ನೋಡಿಕೊಂಡರು. ಈಗ ಅವರು ಅವರು ನನ್ನ ಸಹೋದರರು. ಅವರು ಎಲ್ಲದರಲ್ಲೂ ನನ್ನೊಂದಿಗೆ ನಿಂತರು. ನನ್ನನ್ನು ಶವಾಗಾರಕ್ಕೆ ಕರೆದೊಯ್ದರು, ಔಪಚಾರಿಕತೆಗಳಿಗೆ ಸಹಾಯ ಮಾಡಿದರು” ಎಂದು ತಿಳಿಸಿದ್ದಾರೆ.

ತನ್ನ ತಂದೆ ರಾಮಚಂದ್ರನ್ ಅವರ ಜೀವವನ್ನು ಬಲಿತೆಗೆದುಕೊಂಡ ಭಯೋತ್ಪಾದಕ ದಾಳಿಯ ನಂತರ ತನ್ನ ತಂದೆಯ ದೇಹವನ್ನು ಕೊಚ್ಚಿಗೆ ಮರಳಿ ತರುವ ಜವಾಬ್ದಾರಿಯನ್ನು ಅರತಿ ವಹಿಸಿಕೊಂಡರು. ಆದರೆ ಅವರ ತಾಯಿಗೆ ಈ ದುರಂತದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. “ನಾನು ಬಲಶಾಲಿಯಂತೆ ನಟಿಸಬೇಕಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ಮಕ್ಕಳನ್ನು ನಾನು ನಿರ್ವಹಿಸಬೇಕಾಗಿರುವುದರಿಂದ ನಾನು ಕುಸಿದು ಹೋಗಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ. ರಾಮಚಂದ್ರನ್ ಗಾಯಗೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಮ್ಮ ತಾಯಿಗೆ ಹೇಳಿದ್ದಾಗಿ ಹೇಳಿಕೊಂಡಿದ್ದಾರೆ. “ಬುಧವಾರ ಸಂಜೆ ನಾವು ಕೊಚ್ಚಿಯಲ್ಲಿ ಇಳಿದ ನಂತರವೇ ನಾನು ಅವರಿಗೆ ಸತ್ಯವನ್ನು ಹೇಳಿದೆ” ಎಂದು ಅವರು ಹೇಳಿದ್ದಾರೆ.

ದುಬೈನಲ್ಲಿ ಕೆಲಸ ಮಾಡುತ್ತಿರುವ ಮತ್ತು ಪ್ರಸ್ತುತ ಭಾರತದಲ್ಲಿ ಅಲ್ಪಾವಧಿಗೆ ನೆಲೆಸಿರುವ ಆರತಿ ಅವರು ತಮ್ಮ ಕುಟುಂಬದ ಜೊತೆಗೆ ಕಾಶ್ಮೀರಕ್ಕೆ ರಜೆಯನ್ನು ಕಳೆಯಲು ಯೋಜಿಸಿದ್ದರು. ಅವರು ಏಪ್ರಿಲ್ 21 ರ ಸಂಜೆ ಕಣಿವೆಗೆ ಬಂದಿದ್ದರು. “ನಾನು ಆಗಾಗ್ಗೆ ಪ್ರವಾಸಗಳಿಗೆ ಹೋಗುತ್ತೇನೆ. ಆದರೆ ಕಾಶ್ಮೀರಕ್ಕೆ ಭೇಟಿ ನೀಡಿದ್ದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...