ಇದು ರಾಜಕೀಯದ ಸಮಯವಲ್ಲ, ದುಃಖಿತರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

Date:

ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದರು. ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಗ್ರರು ಅಮಾಯಕರನ್ನ ಕೊಂದಿದ್ದಾರೆ. ಇದು ತುಂಬಾ ದುಃಖಕರ ಸಂಗತಿ, ಕಾಂಗ್ರೆಸ್ ಪಕ್ಷ ಉಗ್ರರ ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಘಟನೆ ದೇಶದ ಒಗ್ಗಟ್ಟು, ಐಕ್ಯತೆ ಮೇಲಿನ ದಾಳಿ ಎಂದಿದ್ದಾರೆ.

ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಹಾಗೂ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾರೊಂದಿಗೆ ಮಾತನಾಡಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ನಾಯಕರ ಜೊತೆಯೂ ಮಾತಾಡಿದ್ದೇನೆ. ಯಾರು ಈ ಕೃತ್ಯದ ಹಿಂದಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ. ಇದು ರಾಜಕೀಯ ಮಾಡುವ ಸಮಯ ಅಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ. ಹಾಗಾಗಿ ಈ ವಿಚಾರದಲ್ಲಿ ಒಟ್ಟಾಗಿ ಹೋರಾಡಬೇಕು ಎಂದು ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್ ಮೃತರಾಗಿದ್ದಾರೆ. ಅವರ ಪತ್ನಿಯರಾದ ಪಲ್ಲವಿ, ಸುಜಾತ ಅವರೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳಕ್ಕೆ ಸಂತೋಷ್ ಲಾಡ್ ಕೂಡ ಹೋಗಿದ್ದಾರೆ. ಅವರ ಜೊತೆಯೂ ಮಾತನಾಡಿದ್ದೇನೆ. ಕರ್ನಾಟಕದಿಂದ 200 ಪ್ರವಾಸಿಗರು ಹೋಗಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಘಟನೆಯ ಬಗ್ಗೆ ಒಮರ್ ಅಬ್ದುಲ್ಲಾ ಅವರ ಜೊತೆಯೂ ಮಾತಾಡಿದ್ದೇನೆ. ಕೇಂದ್ರ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ. ಉಗ್ರರನ್ನು ಬಗ್ಗುಬಡಿಯಬೇಕು. ಮೃತರಿಗೆ ಸಂತಾಪ ಸೂಚಿಸುತ್ತೇವೆ. ಕಾಂಗ್ರೆಸ್ ಪಕ್ಷ ಕುಟುಂಬದವರ ಜೊತೆ ಇದೆ. ಇದು ಭಾರತದ ಮೇಲಿನ ನೇರ ದಾಳಿಯಾಗಿದೆ. ಪಾಕಿಸ್ತಾನಿ ಪ್ರಾಯೋಜಿತ ಉಗ್ರ ಚಟುವಟಿಕೆಗಳನ್ನ ಬಗ್ಗು ಬಡಿಯಬೇಕು ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ಒದಗಿಸಬೇಕು. ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಮರನಾಥ ಯಾತ್ರೆಯ ಭದ್ರತೆ ಕೂಡಾ ಬಿಗಿ ಮಾಡಬೇಕು. ಉಗ್ರರ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆ ನಾವು ಇರುತ್ತೇವೆ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯಲಿ. ಇದು ರಾಜಕೀಯ ಮಾಡಲು ಅಲ್ಲ. ಆದರೆ ಎಲ್ಲರಿಂದಲೂ ಸಲಹೆ ಪಡೆಯಿರಿ. ಎಲ್ಲರೂ ಒಂದಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...