ಭಾರತೀಯರನ್ನು ಮದುವೆಯಾದ ಪಾಕಿಸ್ತಾನ ಪ್ರಜೆಗಳಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ: ಜಮ್ಮು ಕಾಶ್ಮೀರ ಬಿಜೆಪಿ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರವನ್ನು ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕವು ಸ್ವಾಗತಿಸಿದೆ. “ಅವರು ಭಾರತೀಯ ನಾಗರಿಕರನ್ನು ಮದುವೆಯಾಗಿದ್ದರೂ ಸಹ ಅವರಿಗೆ ದೇಶದಲ್ಲಿ ಉಳಿಯಲು ಯಾವುದೇ ಹಕ್ಕಿಲ್ಲ” ಎಂದು ಹೇಳಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಲ್ಲವುದರ ನಡುವೆ ಬಿಜೆಪಿ ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸುವ ಯತ್ನವನ್ನು ಮಾಡುತ್ತಿದೆ. ತನ್ನ ಕೋಮುವಾದದ ರಾಜಕೀಯವನ್ನು ಮುಂದುವರೆಸಿದೆ. ಭಾರತದಲ್ಲಿರುವ ಮುಸ್ಲಿಮರ ವಿರುದ್ಧ ಉತ್ತೇಜನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ, ಸಂಘಪರಿವಾರದ ನಾಯಕರು ಹರಿಬಿಡುತ್ತಿದ್ದಾರೆ.

“ಪಾಕಿಸ್ತಾನದಿಂದ ಇಲ್ಲಿಗೆ ಬಂದು ನೆಲೆಸಿರುವ ವ್ಯಕ್ತಿಗಳು ‘ಸ್ಲೀಪರ್ ಸೆಲ್‌ಗಳು’ ಇದ್ದಂತೆ. ಅವರಲ್ಲಿ ಕೆಲವರನ್ನು ಪಾಕಿಸ್ತಾನಿ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ದುಷ್ಟ ಯೋಜನೆಯ ಭಾಗವಾಗಿರುವ ಸಾಧ್ಯತೆಯಿದೆ” ಎಂದು ಜಮ್ಮು ಕಾಶ್ಮೀರದ ಬಿಜೆಪಿಯ ಮುಖ್ಯ ವಕ್ತಾರ ಸುನಿಲ್ ಸೇಥಿ ಹೇಳಿದರು.

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಶನಿವಾರ ಪಾಕಿಸ್ತಾನಿ ಮಹಿಳೆಯೊಂದಿಗಿನ ತನ್ನ ಮದುವೆಯನ್ನು ‘ಮರೆಮಾಚಿದ್ದಕ್ಕಾಗಿ’ ಮುನೀರ್ ಅಹ್ಮದ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಬಗ್ಗೆಯೂ ಬಿಜೆಪಿ ನಾಯಕ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮೋದಿಯ ಬಿಜೆಪಿ, ಕೇಂದ್ರ ಸರ್ಕಾರದ ದಮನನೀತಿಗೆ ಉತ್ತರ ಕೊಟ್ಟ ಜಮ್ಮು-ಕಾಶ್ಮೀರ

“ಸಂದರ್ಭಗಳು ಅಥವಾ ಸಮರ್ಥನೆಗಳು ಏನೇ ಇರಲಿ, ಪಾಕಿಸ್ತಾನಿಗಳು ಭಾರತೀಯ ನಾಗರಿಕರೊಂದಿಗೆ ವೈವಾಹಿಕ ಸಂಬಂಧವನ್ನು ಹೊಂದಿದ್ದರೂ ಸಹ, ಭಾರತದಲ್ಲಿ ಉಳಿಯಲು ಯಾವುದೇ ಹಕ್ಕನ್ನು ಹೊಂದಿಲ್ಲ. ಈ ಭಾವನಾತ್ಮಕ ಆಧಾರದ ಮೇಲೆ ದೇಶದಲ್ಲಿ ಉಳಿಯುವ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ” ಎಂದು ಸೇಥಿ ಹೇಳಿದ್ದಾರೆ.

ಅಮೃತಸರದ ಅಟ್ಟಾರಿ ಗಡಿಯ ಮೂಲಕ ಪಾಕಿಸ್ತಾನಕ್ಕೆ ಮರಳಲು ಹೊರಟಿದ್ದಾಗ ಹೈಕೋರ್ಟ್ ತನ್ನ ಗಡಿಪಾರು ತಡೆಯುವ ಮೂಲಕ ಮಧ್ಯಂತರ ಪರಿಹಾರವನ್ನು ನೀಡಿದೆ. ಇದಾದ ನಂತರ ಮಿನಾಲ್ ಜಮ್ಮುವಿಗೆ ಮರಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...