ಉತ್ತರ ಪ್ರದೇಶದಲ್ಲಿ ಪಾಕಿಸ್ತಾನಿ ಐಎಸ್ಐ ಏಜೆಂಟ್ ಬಂಧನ

Date:

ಉತ್ತರ ಪ್ರದೇಶದ ಮೀರತ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ(ಎಟಿಎಸ್) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಬಂಧಿಸಿದೆ. ಬಂಧಿತ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಲ್ಲಿ ಈ ಮೊದಲು ಗೂಢಾಚಾರಿ ಕೆಲಸ  ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಂಧಿತ ಸತ್ಯೇಂದ್ರ ಸಿವಾಲ್ 2021ರಿಂದ ಮಾಸ್ಕೋದ ರಾಯಭಾರ ಗೂಢಚಾರಿ ಕೆಲಸಕ್ಕೆ ನೇಮಕಗೊಂಡಿದ್ದ. ಈತ ಭಾರತೀಯ ಮೂಲದ ಕಚೇರಿಯಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮೂಲಗಳ ಪ್ರಕಾರ ಭಯೋತ್ಪಾದನಾ ವಿರೋಧಿ ನಿಗ್ರಹ ಪಡೆ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಿಂದ ಗೂಢಚಾರಿ ಕೆಲಸ ನಿರ್ವಹಿಸುತ್ತಿರುವುದ ಬಗ್ಗೆ ಸುಳಿವು ಪಡೆದು ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಆರೋಪಿಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ ವಿಚಾರಣೆಗೊಳಪಡಿಸಿದಾಗ ಆರಂಭದಲ್ಲಿ ಸರಿಯಾದ ಉತ್ತರ ನೀಡಲಿಲ್ಲ. ಆದಾಗ್ಯೂ, ನಂತರದಲ್ಲಿ ತಾನು ಗೂಢಾಚಾರಿಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಒಪ್ಪಿಕೊಂಡ ಎಂದು ತಿಳಿದುಬಂದಿದೆ.

ಆರೋಪಿ ಸತ್ಯೇಂದ್ರ ಸಿವಾಲ್ ಭಾರತೀಯ ಅಧಿಕಾರಿಗಳಿಗೆ ಹಣ ನೀಡಿ ಭಾರತೀಯ ಸೇನೆ ಹಾಗೂ ಅಲ್ಲಿನ ದಿನ ನಿತ್ಯದ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದ. ಅಲ್ಲದೆ ಭಾರತೀಯ ರಾಯಭಾರಿ, ವಿದೇಶಾಂಗ ಇಲಾಖೆಯ ಅತ್ಯಂತ ಮುಖ್ಯವಾದ ಹಾಗೂ ಗೌಪ್ಯ ಮಾಹಿತಿಗಳನ್ನು ಪಡೆದುಕೊಂಡು ಐಎಸ್‌ಐಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ವಿರುದ್ಧ ಉತ್ತರ ಪ್ರದೇಶದ ಎಟಿಎಸ್ ಐಪಿಸಿ ಸೆಕ್ಷನ್ 121ಎ ಅಡಿಯಲ್ಲಿ ದೇಶ ವಿರೋಧಿ ಚಟುವಟಿಕೆ ಹಾಗೂ ದೇಶದ ರಹಸ್ಯಗಳನ್ನು ಸೋರಿಕೆ ಮಾಡಿರುವುದರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...