ಉದ್ಘಾಟನೆಯಾದ ಎರಡೇ ತಿಂಗಳಲ್ಲಿ ಪಲವಾ ಸೇತುವೆಯ ರಸ್ತೆ ಕಣ್ಮರೆ; ಭಾರೀ ಟ್ರೋಲ್-ಆಕ್ರೋಶ

Date:

ಸುಮಾರು ಎರಡು ತಿಂಗಳ ಹಿಂದೆ (ಜುಲೈ 4) ಉದ್ಘಾಟನೆಯಾಗಿದ್ದ ಸೇತುವೆಯೊಂದು ಈಗ ಭಾರೀ ಟ್ರೋಲ್ ಆಗುತ್ತಿದೆ. ಆ ಸೇತುವೆಯ ಸ್ಥಿತಿ ತೀರಾ ಕೆಟ್ಟದಾಗಿದ್ದು, ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಲವಾ ನಗರದ ಬಳಿ ದೇಸಾಯ್ ಕ್ರೀಕ್‌ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ‘ಪಲವಾ ಸೇತುವೆ’ ಕಲ್ಯಾಣ್-ಶೀಲ್ ರಸ್ತೆಯ ಭಾಗವಾಗಿದೆ. ಈ ಸೇತುವೆಯಲ್ಲಿ 562 ಮೀಟರ್ ಉದ್ದದ ಈ ಸೇತುವೆಯನ್ನು 72 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಈ ಸೇತುವೆಯು ಮುಂಬೈ-ನವಿ ಮುಂಬೈನಿಂದ ಡೊಂಬಿವಲಿ, ಅಂಬರ್ನಾಥ್, ಬದ್ಲಾಪುರಕ್ಕೆ ಸಂಪರ್ಕ ಒದಗಿಸುತ್ತದೆ.

ಜುಲೈ 4ರಂದು ಸೇತುವೆಯನ್ನು ಉದ್ಘಾಟಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ವಾರದಲ್ಲಿ ರಸ್ತೆಯ ಡಾಂಬರು ಕಿತ್ತು ಬಂದು, ಜೆಲ್ಲಿಕಟ್ಟುಗಳು ಹೊರಬರಲಾರಂಭಿಸಿದ್ದವು. ರಸ್ತೆಯ ಜುಲೈ ತಿಂಗಳಿನಲ್ಲೇ ಭಾರೀ ಚರ್ಚೆಗೆ ಗುರಿಯಾಗಿತ್ತು. ಸೇತುವೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ದುರಸ್ತಿ ಕೆಲಸಗಳನ್ನು ಮಾಡುವ ಮೂಲಕ ಸೇತುವೆಯನ್ನು ಮತ್ತೆ ಸಂಚಾರಕ್ಕೆ ತೆರೆಯಲಾಗಿತ್ತು. ಆದರೆ, ಈಗ ಎರಡೇ ತಿಂಗಳಲ್ಲಿ ಮತ್ತೆ ಸೇತುವೆ ಸ್ಥಿತಿ ಚಿಂತಾಜನಕವಾಗಿದೆ. ಸೇತುವೆಯ ಉದ್ದಕ್ಕೂ ಡಾಂಬರಿಗಿಂತ ಹೆಚ್ಚಾಗಿ ಗುಂಡಿಗಳೇ ಕಾಣುತ್ತಿವೆ. ರಸ್ತೆ ಬಹುತೇಕ ಕಣ್ಮರೆಯಾಗಿದೆ.

ಇದರಿಂದಾಗಿ, ಅನೇಕ ಚಾಲಕರು ಸೇತುವೆಯ ಬದಲಿಗೆ ಕೆಳಗೆ ಸಿಗ್ನಲ್ ಇರುವ ರಸ್ತೆಯನ್ನು ಬಳಸುತ್ತಿದ್ದಾರೆ. ವಿಶೇಷವೆಂದರೆ ಈ ಸೇತುವೆಯ ಮೇಲೆ ಅನೇಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಲಾಗಿದೆ. ಗುಂಡಿಗಳಿರುವಾಗ ಸ್ಪೀಡ್ ಬ್ರೇಕರ್‌ಗಳ ಅಗತ್ಯವೇನು ಎಂದು ಪ್ರಯಾಣಿಕರು ವ್ಯಂಗ್ಯವಾಡಿದ್ದಾರೆ. ಸೇತುವೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...